Skip to main content

Blog number 2048. World Organisation of Writer ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಮಮತಾ ಜಿ. ಸಾಗರ್ ಸಾಗರದ ಪ್ರತಿಷ್ಟಿತ ನಿರ್ಮಲಾ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿನಿ ಆಗಿದ್ದವರು ಇವರ ತಾಯಿ ಡಾಕ್ಟರ್ ಶೇಖರಿಬಾಯಿ ಸಾಗರ ಪೇಟೆಯ ಮೊದಲ ಖಾಸಾಗಿ ಮಹಿಳಾ ವೈದ್ಯರು.

#WOW_ಜಾಗತಿಕ_ಸಾಹಿತ್ಯ_ಪ್ರಶಸ್ತಿ

#ಸ್ವೀಕರಿಸಿದ_ಮಮತಾ_ಜಿ_ಸಾಗರ್

#ಇವರ_ತಾಯಿ_ಡಾಕ್ಟರ್_ಶೇಖರಿಬಾಯಿ_ಸಾಗರದ_ಮೊದಲ_ಖಾಸಾಗಿ_ಮಹಿಳಾವೈದ್ಯರು

#ಕವಿಯಿತ್ರಿ_ಮಮತಾ_ಜಿ_ಸಾಗರ್_ಸಾಗರದ_ನಿರ್ಮಲಾ_ಹೈಸ್ಕೂಲ್_ವಿದ್ಯಾರ್ಥಿನಿ_ಆಗಿದ್ದವರು.


  ಜಗತ್ತಿನ ಬರಹಗಾರರ ಕ್ರಿಯಾಶೀಲ ಪ್ರಯತ್ನಗಳನ್ನು ಕಲೆ ಹಾಕುವ ಉದ್ದೇಶದಿಂದ ಸಾಹಿತಿಗಳ ಜಾಗತಿಕ ಸಂಘಟನೆ (WOW) ಇದೇ ಮೊದಲ ಬಾರಿಗೆ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಈ ಜಾಗತಿಕ ಸಾಹಿತ್ಯ ಪ್ರಶಸ್ತಿ ಭಾರತೀಯ ಕವಿಯಿತ್ರಿ ಕನಾ೯ಟಕದ ಮಮತಾ ಜಿ.ಸಾಗರ್ ಅವರಿಗೆ ದಿನಾಂಕ 6-ಏಪ್ರಿಲ್- 2024ರಂದು ನೈಜಿರಿಯಾದ ಅಬುಜದಲ್ಲಿ ಪ್ರದಾನ ಮಾಡಲಾಗಿದೆ.
  ಕಾವ್ಯ ಸಂಜೆ ಎಂಬ ಸಂಘಟನೆ ಮೂಲಕ ನಿರಂತರ ಕನ್ನಡದ ಕವಿ-ಕಾವ್ಯ- ಸಂವಾದ ಕಳೆದ 10 ವರ್ಷದಿಂದ ನಡೆಸುತ್ತಿರುವ ಮಮತಾ ಜಿ.ಸಾಗರ್ ಅವರು ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿ ಪ್ರಶಸ್ತಿ ಪಡೆದಿದ್ದಾರೆ.
  ಸಾಹಿತ್ಯಕ್ಕಾಗಿ ಕೇಂದ್ರ ಸರ್ಕಾರದ ಜ್ಯೂನಿಯರ್ ಪೆಲೋಶಿಪ್ ಇವರಿಗೆ ದೊರೆತಿದೆ.
ಇವರ ತಾಯಿ ಡಾಕ್ಟರ್ ಶೇಖರಿಬಾಯಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಾಗರ ಪೇಟೆಯ ಚಾಮರಾಜಪೇಟೆಯಲ್ಲಿ ಖಾಸಾಗಿ ವೈದ್ಯಕೀಯ ಕ್ಲೀನೀಕ್ ನಡೆಸುತ್ತಿದ್ದರು.
  ಆ ಕಾಲದಲ್ಲಿ ಸಾಗರ ಪೇಟೆಯಲ್ಲಿ ಐತಾಳ್ ಡಾಕ್ಟರ್, ಕೊಳ್ಕೆಬೈಲ್ ಡಾಕ್ಟರ್, ಶ್ರೀಪಾದ ರಾವ್ ಡಾಕ್ಟರ್, ಕೋಳಿವಾಡ ಡಾಕ್ಟರ್, ಮೋಹನದಾಸ್ ಡಾಕ್ಟರ್, ಪೈ ಡಾಕ್ಟರ್ ಗಳ ಮಧ್ಯದಲ್ಲಿ ಶೇಖರಿ ಬಾಯಿ ಡಾಕ್ಟರ್ ಏಕೈಕ ಮಹಿಳಾ ವೈದ್ಯರಾಗಿದ್ದರು ಮತ್ತು ಪ್ರಸಿದ್ದರಾಗಿದ್ದರು ಇವರೇ ಈಗಿನ ಜಾಗತಿಕ ಪ್ರಶಸ್ತಿಗೆ ಬಾಜನರಾದ ಮಮತಾ ಜಿ.ಸಾಗರ್ ತಾಯಿ, ತಂದೆ ಎನ್. ಗಿರಿರಾಜ್.
 ಮಮತಾ ಜಿ.ಸಾಗರ್ ಸಾಗರದ ಪ್ರತಿಷ್ಠಿತ ನಿರ್ಮಲಾ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿನಿ ಆಗಿದ್ದವರು.
   ಇವರಿಗೆ ನೀಡಲಾದ ಜಾಗತಿಕ ಸಾಹಿತ್ಯ ಪ್ರಶಸ್ತಿ ಪ್ರಧಾನ ಮಾಡಿದ ಕಾರ್ಯಕ್ರಮ ಫ್ಯಾನ್ ಆಫ್ರಿಕನ್ ಕಂಟ್ರೀಸ್, ಅಸೋಸಿಯೇಷನ್ ಆಫ್ ರೈಟರ್ಸ್ ಅಸೆಂಬ್ಲಿ ಆಪ್ ಯುರೋಪಿಯನ್ ಪೀಪಲ್ಸ್ ಮತ್ತು ರಷ್ಯನ್ ಅಕಾಡೆಮಿ ಆಫ್ ಆರ್ಟ್ಸ್ ಜಂಟಿಯಾಗಿ ಆಯೋಜಿಸಿತ್ತು.
 

Comments

  1. Thanks for this wonderful introduction. With regards,
    Mamta Sagar

    ReplyDelete

Post a Comment

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...