Skip to main content

Blog number 2047.ಶಿವಮೊಗ್ಗ ಜಿಲ್ಲೆಯ ಇಬ್ಬರು ಸಾಮಾನ್ಯ ಶಿಕ್ಷಕರ ಅಸಾಮಾನ್ಯವಾದ ಇತಿಹಾಸ ಸಂಶೋಧನಾ ಕಾರ್ಯಗಳು ಅಭಿನಂದನೀಯ.

#ಶಿವಮೊಗ್ಗ_ಜಿಲ್ಲೆಯ_ಈ_ಇಬ್ಬರು_ಶಿಕ್ಷಕರು

#ಜಿಲ್ಲೆಯ_ಇತಿಹಾಸ_ಸಂರಕ್ಷಣೆಯ_ಘನತೆ_ಕಾಪಾಡಿದವರು

#ಪ್ರತಿ_ಊರಿಗೂ_ಇತಿಹಾಸ_ಇದೆ_ಅದನ್ನು_ದಾಖಲು_ಮಾಡುವ_ಕೆಲಸ_ಆಗಬೇಕಾಗಿದೆ

#ಯಾವ_ಪ್ರತಿಫಲಾಪೇಕ್ಷೆ_ಇಲ್ಲದೆ_ತಮ್ಮ_ವಿದ್ಯಾರ್ಥಿಗಳ_ಬೋದನೆಗೂ

#ತಾವು_ಪಡೆಯುವ_ವೇತನಕ್ಕೂ_ನ್ಯಾಯ_ನೀಡಿ

#ತಮ್ಮ_ಇತಿಹಾಸ_ಸಂಶೋದನೆ_ಕೆಲಸ_ಅದ್ಬುತವಾಗಿ_ಮಾಡಿದವರು.


  ಕರ್ನಾಟಕ ರಾಜ್ಯದ ಶಾಸನಗಳ ಅಧ್ಯಯನದ ಅಶ್ವಿನಿ ದೇವತೆ ಎಂದೇ ಕರೆಯುವ ಬೆಂಜಮಿನ್ ಲೇವಿಸ್ ರೈಸ್ ಒಬ್ಬ ಸಾಮನ್ಯ ವ್ಯಕ್ತಿ ಆಗಿದ್ದವರು ಅವರಿಗೆ ಶಿಲಾಶಾಸನಗಳ ಬಗ್ಗೆ ಇದ್ದ ಕೌತುಕ ಈ ಕ್ಷೇತ್ರದಲ್ಲಿ ಹೆಚ್ಚು ಕಾರ್ಯನಿರ್ವಹಿಸಲು ಕಾರಣವಾಯಿತು.
  ಇವರ ಆಸಕ್ತಿಯ ಕೆಲಸವೇ ಇವರನ್ನು ಬ್ರಿಟೀಷ್ ಸರ್ಕಾರದಲ್ಲಿ ಮೈಸೂರು ರಾಜ್ಯದ ಆರ್ಕಾಲಜಿ ಡಿಪಾರ್ಟ್ಮೆಂಟ್ ನಿರ್ದೇಶಕರಾಗಿಸಿತು.
   ನಂತರ ಇವರು ಇಡೀ ರಾಜ್ಯ ಸುತ್ತಿದರು ಸ್ಥಳಿಯ ಪಟೇಲರು ಶಾನುಬೋಗರ ಸಹಾಯ ಪಡೆದು 12 ಸಂಪುಟಗಳಲ್ಲಿ ರಾಜ್ಯದ 20 ಸಾವಿರ ಶಾಸನದಲ್ಲಿ 10 ಸಾವಿರ ಶಾಸನ #ಕರ್ನಾಟಕ_ಎಪಿಗ್ರಾಪಿಯ ಪ್ರಕಟಿಸಿದರು.
  ಶಿವಮೊಗ್ಗ ಜಿಲ್ಲೆಯ ರಮೇಶ್ ಹಿರೇಜಂಬೂರ್ ಮತ್ತು ಲೋಕರಾಜ ಜೈನರು ಅವರವರ ವ್ಯಾಪ್ತಿಯಲ್ಲಿ ಕದಂಬರ ಇತಿಹಾಸ ಮತ್ತು ರಾಣಿ ಚೆನ್ನಬೈರಾದೇವಿಯ ಇತಿಹಾಸದ ಬಗ್ಗೆ ಮಾಡಿದ ಸಂಶೋಧನೆ ಮತ್ತು ಅದನ್ನು #ಡಿಜಿಟಲ್_ಮಾಧ್ಯಮ ದಲ್ಲಿ ಜನ ಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವಂತೆ ತಿಳಿಸುತ್ತಿರುವುದು ನೋಡಬಹುದು.
  ಪ್ರತಿ ಊರಿಗೂ ಇತಿಹಾಸ ಇದೆ, ಅಲ್ಲಿ ಇತಿಹಾಸದ ಕಥೆ ಹೇಳುವ ಶಿಲಾಶಾಸನ, ಸ್ಮಾರಕ, ಕೋಟೆ ಕೊತ್ತಳ ಮತ್ತು ಪುರಾತನ ದೇವಾಲಯಗಳಿದೆ ಅದನ್ನು ಸ್ಥಳಿಯರಿಗೆ ತಿಳಿಸುವ ದಾಖಲಿಸುವ ಕೆಲಸ ಆಗಬೇಕಾಗಿದೆ.
  ಇದನ್ನು ಸ್ಥಳಿಯ ಆಸಕ್ತ ಶಿಕ್ಷಕರಿಂದ ಸಾಧ್ಯವಿದೆ ಅವರು ಅದನ್ನು ತಮ್ಮ ವಿದ್ಯಾರ್ಥಿಗಳ ಮೂಲಕ ಕಾರ್ಯರೂಪಕ್ಕೆ ತರಲು ಪ್ರಯತ್ನಿಸಬಹುದಾಗಿದೆ ಇದಕ್ಕೆ ಪ್ರೇರಣೆಯಾಗಿರುವ ಕದಂಬ ಇತಿಹಾಸದ ಸಂಶೋದಕರಾದ ರಮೇಶ್ ಹಿರೇಜಂಬೂರ್ ಮತ್ತು ಗೇರುಸೊಪ್ಪೆಯ ಕಾಳುಮೆಣಸಿನ ರಾಣಿ ಇತಿಹಾಸ ಸಂಶೋದಕರಾದ ಲೋಕರಾಜ ಜೈನರು ಮಾದರಿ ಆಗಿದ್ದಾರೆ.
  ಇವರಿಬ್ಬರ ವಿಡಿಯೋ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ.

https://youtu.be/lyPDP1KUX_0?feature=shared

https://youtu.be/zNDYAdKlmp8?feature=shared

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...