Skip to main content

Blog number 2056. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರು ಅನುತ್ತೀರ್ಣರಾದವರು ಅಸಮರ್ಥರಲ್ಲ, ಈ ಪರೀಕ್ಷೆ ಒಂದೇ ಜೀವಮಾನದ ಅಂತಿಮ ಪರೀಕ್ಷೆಯಲ್ಲ ನೆನಪಿರಲಿ.

#ಪರೀಕ್ಷೆಯಲ್ಲಿ_ಕಡಿಮೆ_ಅಂಕ_ಪಡೆದವರು

#ಅನುತ್ತೀರ್ಣರಾದವರು_ಅಸಮರ್ಥರಲ್ಲ

#ಹೆಚ್ಚು_ಅಂಕ_ಪಡೆದವರನ್ನು_ಪ್ರಶಂಸುವುದು_ಕಡಿಮೆ_ಅಂಕ_ಪಡೆದವರು_ಅವಮಾನ_ಎಂದು_ಬಾವಿಸಬಾರದು

#ಅನುತ್ತೀರ್ಣರಾದವರ_ಕಡಿಮೆ_ಅಂಕ_ಪಡೆದವರ_ಶಾಲೆ_ಬಿಟ್ಟವರ_ಸಾಧನೆ_ಗೊತ್ತಾ?

#ಶಿಕ್ಷಕರು_ಮತ್ತು_ಪೋಷಕರಿಗೆ_ವಿನಂತಿ_ಏನೆಂದರೆ 

#ದಯವಿಟ್ಟು_ಕಡಿಮೆ_ಅಂಕ_ಪಡೆದವರನ್ನ_ತೆಗಳ_ಬೇಡಿ

#ಪೇಲ್_ಆದರೆ_ಅವಮಾನ_ಮಾಡಬೇಡಿ_ಈ_ಲೇಖನ_ತೋರಿಸಿ 

#ಅವರ_ಭವಿಷ್ಯದ_ಜೀವನ_ಪರೀಕ್ಷೆಯ_ಅಂಕಗಳಿಗೆಸೀಮಿತವಲ್ಲ_ಎಂಬ_ವಾಸ್ತವತಿಳಿಸಿ.


   Man of the Day ಎಂಬಂತೆ ಪರೀಕ್ಷೆ ಪಲಿತಾಂಶ ಬಂದ ದಿನ ಅತಿ ಹೆಚ್ಚು ಅಂಕ ಪಡೆದವರನ್ನ ಎಲ್ಲರೂ ಪ್ರಶಂಸೆ ಮಾಡುತ್ತಾರೆ ಇದರಿಂದ ಕಡಿಮೆ ಅಂಕ ಪಡೆದ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳು ಇದು ತಮಗಾದ ಅವಮಾನ ಎಂದು ಭಾವಿಸಬೇಕಾಗಿಲ್ಲ.
   ಕಡಿಮೆ ಅಂಕ ಪಡೆದವರನ್ನ ಅನುತ್ತೀರ್ಣರಾದವರನ್ನು ಪೋಷಕರಾಗಲಿ ಅವರ ಶಿಕ್ಷಕರಾಗಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹೋಲಿಸಿ ಅವಮಾನ ಗೇಲಿ ಯಾವ ಕಾರಣಕ್ಕೂ ಮಾಡಬಾರದು.
   ಶಿಕ್ಷಣದ ಅಂಕಗಳು ಜೀವನದ ಭವಿಷ್ಯ ನಿರ್ಧರಿಸುವುದಿಲ್ಲ, ಇವತ್ತಿನ ಪರೀಕ್ಷೆಯೇ ಜೀವನದ ಅಂತಿಮ ಪರೀಕ್ಷೆ ಅಲ್ಲ.
  ಪ್ರಪಂಚದಲ್ಲಿ ನಾವು ಆರಾದಿಸುವ ಯಶಸ್ವಿ ವ್ಯಕ್ತಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿ ಆದವರಲ್ಲ ಅವರೆಲ್ಲ ಅನುತ್ತೀರ್ಣರಾದವರು ಶಾಲೆ ಬಿಟ್ಟವರು ಆಗಿದ್ದಾರೆ.
  ಭಾರತೀಯ ಪ್ರಸಿದ್ದ ವ್ಯಕ್ತಿಗಳಾದ ಮುಕೇಶ್ ಅಂಬಾನಿ, ಗೌತಮ್ ಅದಾನಿ, ಅಜಿಂ ಪ್ರೇಂಜಿ, ಕಪಿಲ್ ದೇವ್, ಮೇರಿ ಕೊಂ, ಸಚಿನ್ ತೆಂಡೂಲ್ಕರ್, ಸ್ಮೃತಿ ಇರಾನಿ,  ಚಿತ್ರ ತಾರೆಗಳಾದ ಅಕ್ಷಯ ಕಪೂರ್, ಸಲ್ಮಾನ್ ಖಾನ್, ಐಶ್ವರ್ಯ ರೈ, ಅಮೀರ್ ಖಾನ್, ಕಮಲ್ ಹಾಸನ್ ಎಲ್ಲಾ ಡ್ರಾಪ್ ಔಟ್ ಆದವರೆ.
      ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಆದರೆ ಅವರ ಕ್ಷೇತ್ರಗಳಲ್ಲಿ ಸಾದನೆ ಮಾಡಿ ವಿಶ್ವ ವಿಖ್ಯಾತರಾದ ನ್ಯೂಟನ್, ಅಬ್ರಹಾಂ ಲಿಂಕನ್, ರೈಟ್ ಸಹೋದರರು, ಡಾರ್ವಿನ್, ಚರ್ಚಿಲ್, ವಾಲ್ ಡಿಸ್ನಿ, ಲೂಯಿಸ್ ಮೆ ಆಲ್ಕಟ್, ಜೆ.ಕೆ.ರೋಲಿಂಗ್, ಎಡಿಸನ್, ಓಪ್ರಾ ವಿಸ್ಪ್ರೆ ಹೀಗೆ ಸಾಲು ಸಾಲು ಸಾಗುತ್ತದೆ.
  ಖ್ಯಾತ ವಿಚಾರವಾದಿ ಸಾಹಿತಿ ಶಿವರಾಮ ಕಾರಂತರು ಅವರ ಮಕ್ಕಳಿಗೆ ಪ್ರಾಥಮಿಕ ಶಾಲೆಗೆ ಕಳಿಸಲೇ ಇಲ್ಲ.
  ಕನ್ನಡದ ಪ್ರಖ್ಯಾತ ಸಾಹಿತಿ ಬರಹಗಾರ ಹಾಯ್ ಬೆಂಗಳೂರು ರವಿ ಬೆಳಗೆರೆ ಕೂಡ ಎಸ್.ಎಸ್.ಎಲ್.ಸಿ. ಪೇಲ್ ಆದವರು.
    ನಾನು 7 ನೇ ತರಗತಿಯಲ್ಲಿ ಮೆರಿಟ್ ವಿದ್ಯಾರ್ಥಿ ಆದರೆ 8ನೇ ತರಗತಿಯಿಂದ SSLC ತನಕ ತರಗತಿಗೆ ಸರಿಯಾಗಿ ಹೋಗಲಿಲ್ಲ SSLC ಯಲ್ಲಿ ಕನ್ನಡ ಇಂಗ್ಲೀಷ್ ಹಿಂದಿ ವಿಷಯದ ಪರೀಕ್ಷೆಗೆ ಮಾತ್ರ ಗೈಡ್ ಓದಿ ಭಾಗವಹಿಸಿ ಅದನ್ನು ಪಾಸ್ ಮಾಡಿದ್ದೆ ಉಳಿದ ಗಣಿತ ವಿಜ್ಞಾನ ಮತ್ತು ಸಮಾಜ ಪರೀಕ್ಷೆ ಬರೆಯದೆ ಪೇಲ್ ಆಗಿದ್ದೆ ನಂತರ ಸಪ್ಲಿಮೆಂಟರಿ ಪರೀಕ್ಷೆ ಬರೆದು ಪಾಸ್ ಮಾಡಿದ್ದೆ.
    ಶಿಕ್ಷಕರು ಮತ್ತು ಪೋಷಕರಿಗೆ ವಿನಂತಿ ಏನೆಂದರೆ ದಯವಿಟ್ಟು ಕಡಿಮೆ ಅಂಕ ಪಡೆದವರನ್ನ ತೆಗಳುವುದು ಮತ್ತು ಹೆಚ್ಚು ಅಂಕ ಪಡೆದವರೊಡನೆ ಹೋಲಿಸುವುದು ಮಾಡಬೇಡಿ ಹಾಗೂ ಪೇಲ್ ಆದರೆ ಅವಮಾನ ಮಾಡಬೇಡಿ ಈ ಮೇಲಿನ ಲೇಖನ ಅವರಿಗೆ ತೋರಿಸಿ ಅವರ ಭವಿಷ್ಯದ ಜೀವನ ಪರೀಕ್ಷೆಯ ಅಂಕಗಳಿಗೆ ಸೀಮಿತವಲ್ಲ ಎಂಬ ವಾಸ್ತವ ತಿಳಿಸಿ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ