Skip to main content

Blog number 2066. ಹುರುಳಿ ಪದಾರ್ಥ ಅತಿಥಿಗಳಿಗೆ ಬಡಿಸಿದರೆ ಅವರ ಸ್ಟೇಟಸ್ ಕಡಿಮೆ ಆಗುತ್ತೆ ಎಂಬ ನಂಬಿಕೆ ಆಚರಣೆ ಇತ್ತೀಚಿನ ದಿನಗಳ ತನಕ ಇದ್ದಿತ್ತು.

#ಹುರುಳಿ_ಕಟ್ಟು_ಮತ್ತು_ಸಾಮಾಜಿಕ_ಅಂತಸ್ತು

#ಕೃಷಿ_ಕಾರ್ಮಿಕರಿಗೆ_ಮೀಸಲಿಡುತ್ತಿದ್ದ_ಆಮ್ರಗಳು

#ದೇಶಿ_ತಳಿ_ಹುರುಳಿಯಲ್ಲಿನ_ರುಚಿ_ಆರೋಮಾ

#ಹೈಬ್ರಿಡ್_ತಳಿಯಲ್ಲಿ_ಇಲ್ಲ

#ಈಗ_ದೊಡ್ಡವರ_ಮನೆಯ_ವಿಶೇಷ_ಕಾರ್ಯಕ್ರಮದಲ್ಲಿ_ಹುಳ್ಳಿಕಟ್ಟಿನ_ಸ್ಪೆಷಲ್_ಮೆನು


   ಈಗೆಲ್ಲ ನಮ್ಮ ಹಳ್ಳಿಗಳ ಶ್ರೀಮಂತ ಭೂ ಮಾಲಿಕರ ಮನೆಯಲ್ಲಿ ಹುಳ್ಳಿಕಟ್ಟು ಆಕರ್ಷಕ ಮೆನು ಆಗಿದೆ ಆದರೆ ಕೆಲವು ದಶಕದ ಹಿಂದೆ ಹುಳ್ಳಿ ಕಟ್ಟು ಶ್ರಮ ಜೀವಿಗಳ ಬಡವರ #ಆಮ್ರ ಆಗಿತ್ತು.
   ಆಗ ಹುರುಳಿಗೆ ಬೆಲೆ ಇರಲಿಲ್ಲ ಮತ್ತು ಇದು ರೈತರ ಮನೆಯ ಬೇಸಾಯದ ಎತ್ತುಗಳಿಗೆ ನೀಡುವ ಪೌಷ್ಟಿಕ ಆಹಾರ ಮಾತ್ರ ಎಂಬ ನಂಬಿಕೆ ಆಗಿತ್ತು.
  ಮನೆಯ ಆಳುಗಳಿಗೆ ನೀಡುವ ಊಟದಲ್ಲಿ ಈ ಹುಳ್ಳಿಕಟ್ಟು ಬಡಿಸುತ್ತಿದ್ದರು ಅದರ ರುಚಿ - ಅರೋಮ - ಪೌಷ್ಟಿಕತೆಗೆ ಸಾಮಾಜಿಕ ಸ್ಥಾನಮಾನ ಮಾತ್ರ ಇರಲೇ ಇಲ್ಲ.
  ವಿಶೇಷ ಸಮಾರಂಭದಲ್ಲಿ ಹುಳ್ಳಿ ಕಟ್ಟು ನಿಶೇಧವಾಗಿತ್ತು ಮತ್ತು ಅತಿಥಿಗಳಿಗೆ ಹುಳ್ಳಿ ಕಟ್ಟು ಬಡಿಸುವುದು ಕೂಡ ಆತಿಥ್ಯ ಆಗಿರಲಿಲ್ಲ.
   ಈಗ ಎಲ್ಲೆಡೆ ಸಿಗುವ ಹೈಬ್ರಿಡ್ ಹುರುಳಿ ಕಾಳಿನಲ್ಲಿ ರುಚಿ ಇಲ್ಲ ಘಮ ಇಲ್ಲ, ಕಡೂರು ಭಾಗದ ಅರೆಮಲೆನಾಡು ಪ್ರದೇಶದ ರೈತರು ಈಗಲೂ ದೇಶಿ ತಳಿ ಆಗಿರುವ ಕಪ್ಪು ಹುರುಳಿ ಬೆಳೆಯುತ್ತಾರೆ ಅದಕ್ಕೆ ಕೊಂಚ ಬೆಲೆ ಜಾಸ್ತಿ ಅದರಲ್ಲಿ ಆ ಕಾಲದ ಹುರುಳಿಯ ರುಚಿ - ಘಮ ಇದೆ.
  ರುಚಿಕರವಾದ ಹುಳ್ಳಿಕಟ್ಟಿನ ಪೇಸ್ಟ್ ಸಂಪ್ರದಾಯಿಕವಾಗಿ ತಯಾರಿಸಿ ಮಾರಾಟ ಮಾಡುವ ಹೆಬ್ರಿ ಸಮೀಪದ ಸೀತಾನದಿಯ ಸತ್ಯನಾರಾಯಣ ಭವನದ ಅನಿಲ್ ಸಂಪರ್ಕ ಸಂಖ್ಯೆ 94482 47128.
  ಇವರು ನೀವು ಆರ್ಡರ್ ಮಾಡಿದರೆ ನಿಮ್ಮ ಸ್ಥಳಕ್ಕೆ ತಲುಪಿಸುತ್ತಾರೆ. 
  ಒಂದು ಕಾಲದಲ್ಲಿ ಹುರುಳಿ ಕಟ್ಟಿಗೆ ಇದ್ದ ನಿಕೃಷ್ಟ ಸ್ಥಾನಮಾನ, ಕೇವಲ ಬಡವರ ಆಹಾರ ಆಗಿದ್ದು ಈಗ ಬದಲಾದ ಕಾಲದಲ್ಲಿ ಶ್ರೀಮಂತರ ಮನೆಯ ವಿಶೇಷ ಕಾರ್ಯಕ್ರಮದಲ್ಲಿ ಬಹು ಮುಖ್ಯ ಸ್ಥಾನ ಪಡೆದಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...