Skip to main content

Blog number 2076. ನನ್ನ ಮತ್ತು ನನ್ನ ಪ್ರೀತಿಯ ಶಂಭೂರಾಮನ ವಾಕಿಂಗ್ ಟ್ರ್ಯಾಕ್ ನ ಕೈ ತೋಟದಲ್ಲಿ ಪಿಕರಾಳ ಹಕ್ಕಿಯ ಗೂಡು ಅದರಲ್ಲಿ ಎರೆಡು ಮೊಟ್ಟೆಗಳು

#ನನ್ನ_ಮತ್ತು_ಶಂಭೂರಾಮನ_ನಿತ್ಯ_ವಾಕಿಂಗ್_ಟ್ರಾಕ್_ಆಲಂಕಾರಿಕ_ಕ್ಯಾಕ್ಟಸ್

#ಗಿಡದಲ್ಲಿ_ಬುಲ್_ಬುಲ್_ಹಕ್ಕಿ_ಗೂಡು_ಕಟ್ಟಿ_ಮೊಟ್ಟೆ_ಇಟ್ಟಿದೆ

#ಬುಲ್_ಬುಲ್_ಅಥವ_ಕನ್ನಡದ_ಪಿಕರಾಳ_ಹಕ್ಕಿ

#ಮುಳ್ಳಿನ_ಕ್ಯಾಕ್ಟಸ್_ಗಿಡದಲ್ಲಿ_ಶತೃವಿನಿಂದ_ರಕ್ಷಣೆ_ಜಾಸ್ತಿ_ಇರಬಹುದು

#ವೃತ್ತಾಕಾರದ_ಸುಂದರವಾದ_ಗೂಡು

#ಪಕ್ಷಿ_ಲೋಕದಲ್ಲಿ_ಹೆಚ್ಚಾಗುತ್ತಿರುವ_ಪ್ಲಾಸ್ಟಿಕ್_ಬಳಕೆ

https://youtube.com/shorts/K-r-yeN4JMQ?feature=shared


  ನಿನ್ನೆ ಈ ಪಿಕರಾಳ ಹಕ್ಕಿ ಗೂಡಿನಲ್ಲಿ ಒಂದು ಮೊಟ್ಟೆ ಇತ್ತು ಇವತ್ತು ಬೆಳಗಿನ ಮಳೆಯಲ್ಲೇ ವಾಕಿಂಗ್ ಪ್ರಾರಂಬಿಸಿದಾಗ ಈ ಗೂಡಲ್ಲಿ ಎರಡು ಮೊಟ್ಟೆಗಳಿದೆ.
  ಪಿಕರಾಳ ಅಥವ ಬುಲ್ ಬುಲ್ ಹಕ್ಕಿ ವೃತ್ತಾಕಾರದ ಚಿಕ್ಕದಾದ ಸುಂದರ ಗೂಡು ಹೆಣೆಯುತ್ತದೆ ಆದರೆ ಮನುಷ್ಯ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದರೂ ಪಕ್ಷಿಗಳು ಮನುಷ್ಯ ತ್ಯಾಜ್ಯದ ಪ್ಲಾಸ್ಟಿಕ್ ತನ್ನ ಗೂಡುಗಳಿಗೆ ಬಳಸುತ್ತಿರುವುದು ದುರಂತ.
   ಪಿಕರಾಳ ಹಕ್ಕಿ ಬಗ್ಗೆ ಗೂಗಲ್ ನಲ್ಲಿರುವ ಈ ಕೆಳಕಂಡ ಮಾಹಿತಿ ಯಥಾವತ್ ಆಗಿ ಇಲ್ಲಿದೆ ಓದಿ....
   #ಪಿಕಳಾರ (Bulbul) : ಮೈನಾಕ್ಕಿಂತ ಕೊಂಚ ಚಿಕ್ಕದಾದ ಗುಬ್ಬಿಗಿಂತ ದೊಡ್ಡದಾದ ಈ ಹಕ್ಕಿ ಭಾರತದಾದ್ಯಂತ ಕಂಡುಬರುವ ಒಂದು ಸಾರ್ವತ್ರಿಕ ಹಕ್ಕಿ. ಇವುಗಳನ್ನು ದಟ್ಟ ಕಾಡುಗಳಲ್ಲಿ, ಪೇಟೆಯ ಉದ್ಯಾನಗಳಲ್ಲಿ, ಮನೆಯ ಹೂದೋಟ ಹೀಗೆ ಎಲ್ಲೆಡೆ ನೋಡಬಹುದು. ಪಶ್ಚಿಮ ಘಟ್ಟದ ಕಾಡುಗಳಲ್ಲಿ ನಾಡಿನಲ್ಲಿ ಗುಬ್ಬಚ್ಚಿಗಳು ಹೇಗೊ ಹಾಗೆ ವಿಪುಲವಾಗಿವೆ. ಕರ್ನಾಟಕದಲ್ಲಿ ಇವುಗಳ ಅನೇಕ ಪ್ರಭೇದಗಳನ್ನು ನೋಡಬಹುದು : ಕೆಂಪು ಕಪೋಲದ ಪಿಕಳಾರ ಅಥವಾ ಕೆಮ್ಮೀಸೆ ಪಿಕಳಾರ(Red-whiskered Bulbul), ಕೆಂಪು ಬಾಲದ ಪಿಕಳಾರ(Red-vented Bulbul), ಕರಿ ಪಿಕಳಾರ(Black Bulbul), ಹಳದಿ ಕತ್ತಿನ ಪಿಕಳಾರ (Yellow-throated Bulbul), ಬಿಳಿ ಹುಬ್ಬಿನ ಪಿಕಳಾರ (White-browed Bulbul). ಕೆಂಪು ಕಪೋಲದ ಪಿಕಳಾರ ಅಥವಾ ಕೆಮ್ಮೀಸೆ ಪಿಕಳಾರದ ತಲೆಯ ಮೇಲೆ ಜುಟ್ಟಿನಂತಹ ಚೊಟ್ಟಿ ಇದ್ದು, ಕಪೋಲದ ಭಾಗ ಕೆಂಪಾಗಿರುತ್ತದೆ. ಇವನ್ನು ಸಾಮಾನ್ಯವಾಗಿ ನಗರದ ಹೂದೋಟಗಳಿಂದ ಹಿಡಿದು ಮಲೆನಾಡಿನ ಕಾಡುಗಳಲ್ಲಿ ಎಲ್ಲೆಡೆ ನೋಡಬಹುದು. ಕೆಂಪು ಬಾಲದ ಪಿಕಳಾರಗಳ ಬಾಲದ ಬುಡದಲ್ಲಿ ಕೆಂಪು ಬಣ್ಣವಿದ್ದು, ಇವು ಹೆಚ್ಚಾಗಿ ತೋಟ,ಉದ್ಯಾನದಲ್ಲಿ ಕಾಣಿಸಿಕೊಳ್ಳುತ್ತವೆ.ಬೆಳಗಿನ ಸಮಯದಲ್ಲ್ಲಿ ಸಿಳ್ಳು ಹಾಕುತ್ತಾ ಸುಶ್ರಾವ್ಯವಾಗಿ ಹಾಡುತ್ತವೆ.ಇವು ಗುಂಪಿನಲ್ಲಿರುವುದು ಅಪರೂಪ, ಬದಲಾಗಿ ಒಂಟಿ ಅಥವಾ ಜೋಡಿ ಹಕ್ಕಿಗಳಾಗಿ ಕಾಣಿಸಿಕೊಳ್ಳುವುದು ಹೆಚ್ಚು
  ಪಿಕಳಾರಗಳ ಆಹಾರ ಕೀಟಗಳು,ಸಣ್ಣ ಹಣ್ಣುಗಳು ಮತ್ತು ಹೂವಿನ ಮಕರಂದ.ಇವು ಪೊದೆಗಳ ಕವಲುಗಳಲ್ಲಿ ನಾರು, ಹುಲ್ಲು, ಜೇಡರ ಬಲೆಗಳಿಂದ ಬಟ್ಟಲಾಕಾರದ ಗೂಡು ಕಟ್ಟುತ್ತವೆ. ಗೂಡು ಜನವಸತಿಯ ಹತ್ತಿರವೂ ಇರಬಹುದು.ಉದಾಹರಣೆಗೆ ಮನೆಯ ಹೂದೋಟದಲ್ಲಿ ಹಬ್ಬಿಸಿದ ಮಲ್ಲಿಗೆ ಬಳ್ಳಿಯ ಚಪ್ಪರದಲ್ಲಿ ಪಿಕಳಾರಗಳು ಗೂಡು ಕಟ್ಟಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...