Skip to main content

Blog number 2081. ಭಾಗ - 2. ಶಿವಮೊಗ್ಗ ಜಿಲ್ಲೆಯ ಉದಯೋನ್ಮುಖ ಸಂಶೋದಕರ ಸರಣಿ ಲೇಖನಗಳು. ಶಿರಾಳಕೊಪ್ಪದ ಪ್ರಜಾವಾಣಿ ವರದಿಗಾರ ನವೀನ್ ಕುಮಾರ್

#ಬಾಗ_2.

#ಶಿವಮೊಗ್ಗ_ಜಿಲ್ಲೆಯ_ಉದಯೋನ್ಮುಖ_ಸಂಶೋದಕರುಗಳ_ಸರಣಿ

#ನವೀನ್_ಕುಮಾರ್_ಶಿರಾಳಕೊಪ್ಪ_ಪ್ರಜಾವಾಣಿ_ವರದಿಗಾರರು

#ತಾಳಗುಂದ_ಶಾಸನಗಳ_ಬಗ್ಗೆ_ಕದಂಬರ_ಇತಿಹಾಸದ_ಬಗ್ಗೆ_ಬೆಳಕು_ಚೆಲ್ಲಿದವರು

#ಕದಂಬ_ಸಾಮ್ರಾಜ್ಯ_ಕಟ್ಟಿದ_ಕನ್ನಡದ_ರಾಜ_ಮಯೂರ_ವರ್ಮ

#ಕೇವಲ_ರಾಜ್ಯಬಾರ_ಮಾತ್ರ_ಮಾಡಲಿಲ್ಲ_ತಾಳಗುಂದದಲ್ಲಿ_ನಳಂದಾ_ವಿಶ್ವವಿದ್ಯಾಲಯಕ್ಕೆ

#ಸರಿಸಮನಾದ_ಕದಂಬ_ವಿಶ್ವವಿಧ್ಯಾಲಯಕೂಡ_ಸ್ಥಾಪಿಸಿದ್ದು_ವಿಶೇಷ.

https://youtu.be/JB3dbBM4wbY?feature=shared


  ನಾನು ಇತಿಹಾಸ ಆಸಕ್ತ, ಇತಿಹಾಸದ ಬಗ್ಗೆ ಪ್ರಾಮಾಣಿಕವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುವವರ ಬಗ್ಗೆ ನನಗೆ ವಿಶೇಷ ಅಭಿಮಾನ ನಮ್ಮ ಜಿಲ್ಲೆಯ ಬೆಳಕಿಗೆ ಬಾರದ ಇತಿಹಾಸದ ದಾಖಲೆಗಳ ಮೇಲೆ ಬೆಳಕು ಚೆಲ್ಲುವವರಿಗೆ ನಾನು ನಿರಂತರ ಬೆಂಬಲ ನೀಡುತ್ತೇನೆ ಮತ್ತು ನನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ತನು-ಮನ-ಧನ ಸಹಾಯ ಮಾಡುವುದು ನನ್ನ ಹವ್ಯಾಸ.
  ನಾನು ದಾಖಲಿಸಿದ ಶಿರಾಳಕೊಪ್ಪದ ಪ್ರಜಾವಾಣಿ ವರದಿಗಾರ ಇತಿಹಾಸ ಸಂಶೋದಕರಾದ ನವೀನ್ ಕುಮಾರ್ ಯೂಟ್ಯೂಬ್ ಸಂದರ್ಶನದ ಕೆಲ ಕಂತುಗಳು ಇತಿಹಾಸ ಆಸಕ್ತರಿಗಾಗಿ ಪ್ರಕಟವಾಗಲಿದೆ ಭಾಗ - 2 ರಲ್ಲಿ ಅವರು #ಬಂದಳಿಕೆಯ ಉತ್ಕನನ ಏಕೆ ಆಗ ಬೇಕು? ಎಂದು ವಿವರಿಸಿದ್ದಾರೆ.
  ಕದಂಬ ಸಾಮ್ರಾಜ್ಯ ಕಟ್ಟಿದ ಕನ್ನಡದ ರಾಜ ಈ ಭಾಗದ ಹವ್ಯಕ ಬ್ರಾಹ್ಮಣರ ರಾಜ ಮಯೂರ ವರ್ಮ ಕೇವಲ ರಾಜ್ಯಬಾರ ಮಾತ್ರ ಮಾಡಲಿಲ್ಲ ಇಲ್ಲಿ ನಾಲಂದ ವಿಶ್ವವಿದ್ಯಾಲಯಕ್ಕೆ ಸರಿಸಮನಾದ ಕದಂಬ ವಿಶ್ವವಿಧ್ಯಾಲಯ ಕೂಡ ಸ್ಥಾಪಿಸಿದ್ದ.
 
   ಶಿಕಾರಿಪುರ ತಾಲ್ಲೂಕಿನಲ್ಲಿ ಇನ್ನೂ ದಾಖಲಾಗದ ಇತಿಹಾಸ ಸಾಕಷ್ಟಿದೆ, ಶಿಲಾಶಾಸನಗಳ ಅಶ್ವಿನಿ ಧೇವತೆ ಎಂದು ಇತಿಹಾಸಕಾರರು ಕರೆಯುವ ಬೆಂಜಮನ್ ಲೇವಿಸ್ ರೈಸ್ ಬರೆದ ಮಾತು ಇವರು ಉಲ್ಲೇಖಿಸುತ್ತಾರೆ "Richest antiquity in Mysore state is Shikaripura" ಅದರಂತೆ ಇಲ್ಲಿನ ಉತ್ಕನನಗಳು ನಡೆದರೆ ಕರ್ನಾಟಕದ ಮೂಲ ಇತಿಹಾಸದ ಚರಿತ್ರೆ ಶಿಕಾರಿಪುರದಿಂದ ತೆರೆದುಕೊಳ್ಳುತ್ತದೆ ಎಂಬ ಆಶಾ ಭಾವನೆ ಇವರದ್ದು.
   ಬಿಹಾರದ ರಾಜಗೀರ್ ನಲ್ಲಿ ಕ್ರಿ.ಶ. 427 ರಲ್ಲಿ ಕುಮಾರ ಗುಪ್ತ ಎರಡು ಸಾವಿರ ಶಿಕ್ಷಕರಿಂದ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ ನಲಂದಾ ವಿಶ್ವವಿದ್ಯಾಲಯಕ್ಕಿಂತ ಮೊದಲೇ ತಾಳಗುಂದದಲ್ಲಿ ಅಂತಹ ಒಂದು ವಿಶ್ವವಿದ್ಯಾಲಯ ಇತ್ತು ಮಯೂರ ವರ್ಮ ತಾಳಗುಂದ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಕಂಚಿಗೆ ಹೋಗುತ್ತಾರೆ ನಂತರ ರಾಜ್ಯಬಾರ ವಹಿಸಿಕೊಂಡು ಉತ್ತರ ಭಾರತದಿಂದ ಮೂರು ಸಾವಿರ ಬ್ರಾಹ್ಮಣ ಪಂಡಿತರನ್ನ ತಾಳಗುಂದ ವಿಶ್ವವಿದ್ಯಾಲಯಕ್ಕೆ ಕರೆತರುತ್ತಾನೆ.
  ಮಯೂರ ವರ್ಮನ ಪುತ್ರಿ ಅಥವ ಸಹೋದರಿಯನ್ನು (ಕದಂಬ ಕನ್ಯೆ) ನಳಂದಾ ವಿಶ್ವವಿದ್ಯಾಲಯ ಸ್ಥಾಪಿಸಿದ ಕುಮಾರ ಗುಪ್ತನಿಗೆ ವಿವಾಹ ಮಾಡಿಕೊಡುತ್ತಾನೆ ತಾಳಗುಂದ ಮತ್ತು ನಳಂದಾಕ್ಕೆ ಇರುವ ಅಂತರ 2000 ಕಿ.ಮಿ. ಹೀಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸುತ್ತಾ ಹೆಚ್ಚಿನ ಪ್ರಮಾಣದಲ್ಲಿ ಸಂಶೋಧನೆಗೆ ಆಗ್ರಹಿಸುತ್ತಾರೆ.
  ಶಿವಮೊಗ್ಗ ಜಿಲ್ಲೆಯ ಇಂತಹ ಎಲೆ ಮರೆಯ ಕಾಯಿಯಂತ ಇತಿಹಾಸ ಸಂಶೋದಕರಿಗೆ ಶಿವಮೊಗ್ಗ ಜಿಲ್ಲೆಯ ನಾಡು-ನುಡಿ-ಜಲದ ಬಗ್ಗೆ ಅಭಿಮಾನ ಹೊಂದಿದಂತವರು ಹೆಚ್ಚು ಹೆಚ್ಚು ಬೆಂಬಲಿಸಬೇಕೆಂದು ವಿನಂತಿಸುತ್ತೇನೆ.
  (ನಾಳೆ ಭಾಗ - 3 ಇನ್ಪೋಸಿಸ್ ಶ್ರೀಮತಿ ಸುಧಾ ಮೂರ್ತಿ ತಾಳಗುಂದ ಬೇಟಿ ವಿವರ.)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ