Skip to main content

Blog number 2083. ನಮ್ಮ ಊರಿನ ಈದ್ಗಾ ನವೀಕರಣವಾಗಿ 50 ವರ್ಷ

#ನಮ್ಮ_ಊರಿನ_ಈದ್ಗಾ

#ಈ_ವರ್ಷದ_ರಂಜಾನ್_ಪ್ರಾಥ೯ನೆಗೆ

#ಐವತ್ತನೇ_ವಾರ್ಷಿಕೋತ್ಸವ

#ಅಬ್ದುಲ್_ಯಾಹ್ಯಾ_ಸಾಹೇಬರ_ಅಧ್ಯಕ್ಷರ_ಅವಧಿಯಲ್ಲಿ_1975ರಲ್ಲಿ_ಈದ್ಗಾ_ನವೀಕರಣವಾಗಿತ್ತು.

#ಆನಂದಪುರಂ_ಜಾಮೀಯ_ಮಸೀದಿ_1632ರಲ್ಲಿ_ಕೆಳದಿ_ರಾಜ_ವೀರಭದ್ರ_ನಾಯಕರಿಂದ_ನಿರ್ಮಾಣ.

  ಮೊನ್ನೆ 11- ಏಪ್ರಿಲ್- 2024 ರಂದು ಆನಂದಪುರಂ - ದಾಸಕೊಪ್ಪ --ಯಡೇಹಳ್ಳಿ ಮುಸ್ಲಿಂ ಸಮುದಾಯದವರು ಯಡೇಹಳ್ಳಿಯ ಮಸೀದಿ ಹಿಂಬಾಗದ ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು ಈ ಈದ್ಗಾ 1- ಡಿಸೆಂಬರ್-1975ರಲ್ಲಿ ನವೀಕರಣಗೊಂಡಿದ್ದರಿಂದ ಇದು 50ನೇ ವರ್ಷದ ವಾರ್ಷಿಕೊತ್ಸವ ಕೂಡ.
   ಈ ಈದ್ಗಾ ನವೀಕರಣದ ಪೂರ್ವದಲ್ಲೂ ಪುರಾತನ ಜಂಬಿಟ್ಟಿಗೆಯಲ್ಲಿ ಕಟ್ಟಿದ್ದ ಈದ್ಗಾ ಇದೇ ಸ್ಥಳದಲ್ಲಿ ಇತ್ತು ಬಹುಶಃ 1632 ರಿಂದ ಈದ್ಗಾ ಇದ್ದಿರಬೇಕು.
  1632ಲ್ಲಿ ಆನಂದಪುರಂನ ಜಾಮೀಯ ಮಸೀದಿ ಕೆಳದಿ ರಾಜ ವೀರಭದ್ರ ನಾಯಕರು ನಿರ್ಮಿಸಿ 12 ವರಹಾ ಭೂಮಿ ಸದರಿ ಮಸೀದಿಗೆ ದಾನ ನೀಡಿದ ತಾಮ್ರ ಪತ್ರ ಇದೆ ಅಂದರೆ 392 ವರ್ಷಗಳ ಹಿಂದೆ ಆನಂದಪುರಂ ಮಸೀದಿ ನಿಮಾ೯ಣವಾಗಿತ್ತು.
  1872 ರಲ್ಲಿ ಮೈಸೂರು ಅರಸರು ಎರೆಡು ಎಕರೆ ಏಳು ಗುಂಟೆ ತರಿ ಜಮೀನು ದಾನ ನೀಡಿದ್ದಾರೆ.
   ಟಿಪ್ಪು ಸುಲ್ತಾನರು ಆನಂದಪುರಂ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
  ಆನಂದಪುರಂನ ಉದನೂರಿನ ಅಬ್ದುಲ್ ಯಾಹ್ಯಾ ಸಾಹೇಬರು 1968ರಿಂದ1988ರವರೆಗೆ ಆನಂದಪುರಂನ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿದ್ದರು ಅವರ ಅವದಿಯಲ್ಲಿ 1- ಡಿಸೆಂಬರ್-1975 ರಂದು ನವೀಕರಣಗೊಂಡ ಯಡೇಹಳ್ಳಿ ಈದ್ಗಾಕ್ಕೆ ಈ ವರ್ಷದ 11-ಏಪ್ರಿಲ್-2024ರ ರಂಜಾನ್ ಹಬ್ಬದ ಪ್ರಾರ್ಥನೆಗೆ 50ನೇ ವರ್ಷಾಚರಣೆ ಆಗಿತ್ತು ಈಗಿನ ಹಾಲಿ ಅಧ್ಯಕ್ಷರು ಯಡೇಹಳ್ಳಿಯ MNK ಅಕ್ಕಿ ಗಿರಣಿ ಮಾಲಿಕರಾದ ಬಾಬುಲ್ ಸಾಹೇಬರು.
  ಆ ಕಾಲದಲ್ಲಿ ಈ ಈದ್ಗಾದಲ್ಲಿ ಆನಂದಪುರಂ ಸುತ್ತಮುತ್ತಲಿನ ಹಳ್ಳಿಗಳಾದ ದಾಸಕೊಪ್ಪ - ಆನಂದಪುರಂ - ತಾವರೆಹಳ್ಳಿ - ಮುಂಬಾಳು - ಹೊಸಕೊಪ್ಪ - ಯಡೇಹಳ್ಳಿ ಆಚಾಪುರ - ಮುರುಘಾಮಠ - ಇಸ್ಲಾಂಪುರ - ಹೊಳ್ಳೂರು-ಕೆರೆಹಿತ್ತಲು - ಗಿಳಾಲುಗುಂಡಿ - ಮಾದಾಪುರ-ಉದನೂರಿನಿಂದ ಸುಮಾರು 14 ಹಳ್ಳಿಗಳಿಂದ ರಂಜಾನ್ ಮತ್ತು ಬಕ್ರೀದ್ ಹಬ್ಬದ ಪ್ರಾಥ೯ನೆಗೆ ಬರುತ್ತಿದ್ದರು ಈಗ ಇಲ್ಲಿಗೆ ಯಡೇಹಳ್ಳಿ - ಆನಂದಪುರಂ - ದಾಸಕೊಪ್ಪ ಮತ್ತು ತಾವರೆಹಳ್ಳಿಯವರು ಮಾತ್ರ ಪ್ರಾರ್ಥನೆಗೆ ಬರುತ್ತಾರೆ.
    ಆಚಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಈದ್ಗಾಕ್ಕೆ ಉಳಿದ ಸಮೀಪದ ಹಳ್ಳಿಗಳವರು ಪ್ರಾಥ೯ನೆಗೆ ಹೋಗುತ್ತಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...