Skip to main content

Blog number 2087. ರೈತ ನಾಯಕ ದಿನೇಶ್ ಶಿರವಾಳರು ನಿರ್ಮಿಸಿರುವ ಅವರ ಕನಸಿನ ಮನೆ "ಪರಿಶ್ರಮ" ದಿನಾಂಕ 28- ಏಪ್ರಿಲ್-2024 ಬಾನುವಾರ ಗೃಹ ಪ್ರವೇಶ.

#ಕಾಗೋಡು_ಹೋರಾಟದ_ನೇತಾರ_ಗಣಪತಿಯಪ್ಪ_ಸ್ಥಾಪಿತ_ರೈತಸಂಘ

#ಮರುಸ್ಥಾಪನೆ_ಮಾಡಿದ_ಶ್ರಮಜೀವಿ_ಕೃಷಿಕ_ವಾಘ್ಮಿ_ಸಂಘಟನ_ಚತುರ_ದಿನೇಶ್_ಶಿರವಾಳರ

#ಸಾಗರದ_ಶಿರವಾಳದಲ್ಲಿ_ನಿರ್ಮಿಸಿರುವ_ಪರಿಶ್ರಮ_ಎಂದು_ನಾಮಕರಣಗೊಂಡಿರುವ

#ಮನೆ_ಗೃಹ_ಪ್ರವೇಶ_ದಿನಾಂಕ_28_ಏಪ್ರಿಲ್_2024_ಭಾನುವಾರ.


  1- ಜನವರಿ-1948ರಲ್ಲಿ ಕಾಗೋಡು ಹೋರಾಟದ ರೂವಾರಿ ಹೆಚ್.ಗಣಪತಿಯಪ್ಪ ಸ್ಥಾಪಿಸಿದ್ದ ರೈತ ಸಂಘಕ್ಕೆ ಅಂದಿನ ಅಧ್ಯಕ್ಷರು ಮೂಕಪ್ಪನವರು 1957ರಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗುತ್ತಾರೆ, ಕಾರ್ಯದರ್ಶಿಗಳಾಗಿದ್ದ ಗಣಪತಿಯಪ್ಪನವರು ಶಾಂತವೇರಿ ಗೋಪಾಲಗೌಡರು ಸೇರಿ 1952 ರಲ್ಲಿ ಪ್ರಾರಂಬಿಸಿದ ಊಳುವವನೇ ಹೊಲದೊಡೆಯ ಘೋಷಣೆಯ ಕಾಗೋಡು ರೈತ ಹೋರಾಟ ವಿಶ್ವ ವಿಖ್ಯಾತವಾಗಿದ್ದು ಇತಿಹಾಸ.
  ಈ ರೈತ ಸಂಘದ ಮರು ಹುಟ್ಟು ಹಾಕಿರುವ ದಿನೇಶ್ ಶಿರವಾಳ ನ್ಯಾಯಕ್ಕಾಗಿ ಗಾಂಧೀ ಮಾರ್ಗದಲ್ಲಿ ವಿನೂತನ ಹೋರಾಟಗಳ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ, ಅಧ್ಯಕ್ಷ ದಿನೇಶ್ ಶಿರವಾಳರ ಕಂಚಿನ ಕಂಠದ ಕರಾರುವಕ್ಕಾದ ಮಾತುಗಳು ಹಾಗೂ ಅವರ ಬಾಡಿ ಲಾಂಗ್ವೇಜ್ ನನಗೆ ಇಷ್ಟ.
  40 ವಷ೯ದ ದಿನೇಶ್ ಶಿರವಾಳರು ಚಿಕ್ಕ೦ದಿನಿ೦ದ ತಾಯಿ ಜೊತೆ ತಾವು ಬೆಳೆದ ತರಕಾರಿ ತಲೆ ಮೇಲೆ ಹೊತ್ತು ನಿತ್ಯ ಸಾಗರದ ಪೇಟೆಯಲ್ಲಿ ಮಾರಾಟ ಮಾಡುತ್ತಿದ್ದವರು, ಸುಖ ಸಾಗರ ಹೋಟೆಲ್ ನಲ್ಲಿ ಕೆಲಸ ಮಾಡುತ್ತಾ ನಂತರ ಬೆಂಗಳೂರಲ್ಲಿ ಕರ್ನಾಟಕ ಬ್ರಿವರಿಸ್ ನಲ್ಲಿ ದಿನಗೂಲಿ ವೃತ್ತಿ ಮಾಡಿದವರು ನಂತರ ಟ್ರಾಕ್ಟರ್ ಖರೀದಿಸಿ ಬಾಡಿಗೆ ಮಾಡಿದವರು.
  ಒಂದು ಕಾಲದಲ್ಲಿ ಶಿರವಾಳ ಅತ್ಯಂತ ಬಡತನದ ಸಾಗರದ ಹಳ್ಳಿ ಇಲ್ಲಿನ ಕುಟುಂಬಗಳು ತರಕಾರಿ ಹಾಲು ಸಾಗರ ಪೇಟೆಗೆ ತಂದು ಮಾರಾಟ ಮಾಡಿ ಜೀವನ ಮಾಡುತ್ತಿದ್ದರು ಅದರಲ್ಲಿ ಕೆಲ ಸಾಹಸಿಗಳು ಬೆಲ್ಲದಿಂದ ದೇಶಿ ಸರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದರಿಂದ ಶಿರವಾಳ ಕುಖ್ಯಾತಿಯೂ ಪಡೆದಿತ್ತು ಈಗ ಶಿರವಾಳ ಸಾಗರ ಪಟ್ಟಣದಲ್ಲಿ ಸೇರಿ ಹೋಗಿದೆ ಅಲ್ಲಿನ ಭೂಮಿಗೆ ಚಿನ್ನದ ಬೆಲೆ ಮತ್ತು ಈಗಿನ ತಲೆಮಾರಿನ ಬುದ್ಧಿವಂತ ಯುವ ರೈತರು ವಾಣಿಜ್ಯ ಬೆಳೆಗಳಾದ ಅಡಿಕೆ - ಶುಂಠಿ ಬೆಳೆದು ಆರ್ಥಿಕವಾಗಿ ಸದೃಡವಾಗುತ್ತಿದ್ದಾರೆ 50 ವರ್ಷದಲ್ಲಿ ಶಿರವಾಳ ಬದಲಾಗಿದೆ.
  ರೈತ ಸಂಘದ ಅಧ್ಯಕ್ಷರಾದ #ದಿನೇಶ್_ಶಿರವಾಳರು ಇವರ ತಂದೆ ನಾರಾಯಣಪ್ಪ ಮತ್ತು ತಾಯಿ ಚೌಡಮ್ಮರ ಪಿತ್ರಾರ್ಜಿತ ಆಸ್ತಿಯಾದ ನಾಲ್ಕು ಎಕರೆಯಲ್ಲಿ ಸ್ಟತಃ ಕೃಷಿ ಮಾಡುತ್ತಾ ಒಂಬತ್ತು ವರ್ಷದಿಂದ ತಮ್ಮ ಕನಸಿನ ಮನೆಯ ಗೋಡೆಗಳನ್ನು ಸ್ವತಃ ಇವರು ಮತ್ತು ಇವರ ಪತ್ನಿ ಇಬ್ಬರೇ ಕಟ್ಟಿದ್ದಾರೆ.

  ಈ ಮನೆಗೆ #ಪರಿಶ್ರಮ ಎಂಬ ಹೆಸರು ಇಟ್ಟಿದ್ದಾರೆ ಇದು ಅನ್ವರ್ಥನಾಮ ಇವರ ಪರಿಶ್ರಮದಲ್ಲಿ ಅರಳಿದ ಇವರ ಗೃಹ ಪ್ರವೇಶ 28- ಏಪ್ರಿಲ್- 2024 ಭಾನುವಾರ ನಡೆಯಲಿದೆ ಅದರ ಆಹ್ವಾನ ಪತ್ರಿಕೆ ನನಗೆ ನೀಡಲು ಬಂದಿದ್ದರು.
  ಇವರ ಕನಸಿನ ಮನೆ ಪರಿಶ್ರಮದ ಗೃಹ ಪ್ರವೇಶದ ಆಹ್ವಾನ ಪತ್ರಿಕೆ ಕೂಡ ವಿಶೇಷವಾಗಿ ಇವರ ಪರಿಕಲ್ಪನೆಯಲ್ಲಿ ವಿನ್ಯಾಸ ಮಾಡಿದ್ದಾರೆ.
  ಅವರಿಗೆ ನಮ್ಮ ಊರಿನ ಪುರ ದೈವ ಶ್ರೀ ವರಸಿದ್ದಿ ವಿನಾಯಕ ದೇವರ 3D ವಿಗ್ರಹ ನೀಡಿ ಗೃಹ ಪ್ರವೇಶ ಮಾಡುತ್ತಿರುವ ದಿನೇಶ್ ಶಿರವಾಳ ದಂಪತಿಗಳಿಗೆ ಮತ್ತು ಕುಟುಂಬ ವರ್ಗದವರಿಗೆ ಆಯುರಾರೋಗ್ಯ- ಆಯಸ್ಸು - ಐಶ್ವರ್ಯ ಮತ್ತು ಯಶಸ್ಸು ದಯಪಾಲಿಸಲಿ ಎಂದು ಹಾರೈಸಿದ್ದೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ