Skip to main content

Blog number 2088. ನನ್ನ ಮೊದಲ ವಿಡಿಯೋ ಎಡಿಟಿಂಗ್ ಪಿಕರಾಳ ಹಕ್ಕಿ ಗೂಡಿನಿಂದ ಹಾರಿದ್ದು,

#ನನಗೆ_ಏನೇ_ಪ್ರಯತ್ನ_ಮಾಡಿದರೂ_ಪಿಕಳಾರ_ನನ್ನ_ಬಾಯಿಯಲ್ಲಿ_ಪಿಕರಾಳ_ಎಂದೇ_ಉಚ್ಚಾರಣೆ

#ಇದು_ನನ್ನ_ಮೊದಲ_ಎಡಿಟ್_ಮಾಡಿದ_ವಿಡಿಯೋ

#ಜೀವನ_ಪರ್ಯಂತ_ಕಲಿಯುತ್ತಲೇ_ಹೋಗಬೇಕು_ಅದಕ್ಕೆ_ಕೊನೆ_ಇಲ್ಲ

#ಮನುಷ್ಯ_ವಿಶಾಲ_ಸಮುದ್ರ_ಸಾಗರದ_ಒಂದು_ಬಿಂದುವಿನ_ಒಂದು_ಅಣುವೂ_ಅಲ್ಲ

#ಬ್ರಹ್ಮಾಂಡ_ಅನಂತ_ಯೋಚಿಸಿದರೆ_ನಾವೇನೂ_ಅಲ್ಲ

https://youtube.com/shorts/cHpWVQK3h6Q?feature=shared
  ಬರೆಯುವ ಹವ್ಯಾಸ ಪತ್ರಿಕೆಗೆ ಕಾಲಂ ಬರೆಯಲು ಪ್ರಾರಂಭವಾಗಿ ನಂತರ ಪುಸ್ತಕ ಬರೆಯಲು ತದನಂತರ ಸಾಮಾಜಿಕ ಜಾಲತಾಣಕ್ಕೆ ಹೀಗೆ ಕಾಲ ಕಾಲಕ್ಕೆ ವೇಗದ ಜಗತ್ತಿನ ತಂತ್ರಜ್ಞಾನದ ಜೊತೆ ಹೆಜ್ಜೆ ಹಾಕುತ್ತಾ ಓಡುತ್ತಾ ಎಡವುತ್ತಾ ವೃದ್ಧಾಪ್ಯದ ಅಂಚಿಗೆ ಬಂದಾಯಿತು.
  ಆದರೂ ಅಪ್ಡೇಟ್ ಆಗುತ್ತಲೇ ಇರಬೇಕು ಅದೇನೊ ಗೊತ್ತಿಲ್ಲ ನನಗೆ ವಿಡಿಯೋ ಎಡಿಟಿಂಗ್ ಕಲಿಯಲು ಆಗಲೇ ಇಲ್ಲ ಆದರೂ ಕಲಿಯಲೇ ಬೇಕೆಂಬ ಅದಮ್ಯ ಆಸೆ ಎಡಿಟಿಂಗ್ ಪ್ರಾರಂಭಕ್ಕೆ ಕಾರಣ ಆಯಿತು.
  ಇನ್ನೂ ನನ್ನ ವಿಡಿಯೋ ಎಡಿಟಿಂಗ್ ABCD ಹಂತ ದಾಟಿಲ್ಲ ಇವತ್ತು ಬೆಳಿಗ್ಗೆ 6 ಕ್ಕೆ ವಾಕಿಂಗ್ ಪಾರಂಬಿಸುವ ಮೊದಲು ನನ್ನ ವಾಕಿಂಗ್ ಟ್ರಾಕ್ ಹೊಸ ಪ್ರೆಂಡ್ ಪಿಕರಾಳ ... ಸ್ಸಾರಿ ಪಿಕಳಾರ ತನ್ನ ಗೂಡಿನ ಮೂರು ಮೊಟ್ಟೆಗೆ ಕಾವು ನೀಡುತ್ತಿರುವುದು ನನ್ನ ಆಗಮನ ದೂರದಿಂದಲೇ ಗ್ರಹಿಸಿ ಗೂಡಿಂದ ಹಾರಿ ಮನೆಯ ಮೇಲೆ ಕುಳಿತು ನನ್ನ ಮತ್ತು ಶಂಭೂರಾಮನ ಗಮಿನಿಸುತ್ತದೆ.
   ತನ್ನ ಗೂಡಿಂದ ಹಾರಿ ಹೋಗುವ ವಿಡಿಯೋ ಸ್ಲೋ ಮೋಷನ್ ನಲ್ಲಿ ಚಿತ್ರಿಕರಣ ಮಾಡಿ ಅದರ ಅನುಪಯುಕ್ತ ಭಾಗಗಳನ್ನು ಡಿಲೀಟ್ ಮಾಡಿ ತೆಗೆದು ಹಾಕಿ ಬೇಕಾದ ವಿಡಿಯೋ ತುಣುಕುಗಳಿಗೆ ನನ್ನ ಧ್ವನಿ ನೀಡಿ ಯುಟ್ಯೂಬ್ ಗೆ ಅಪ್ ಲೋಡ್ ಮಾಡಿ ನನ್ನ ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಇದೆಲ್ಲ ಬರೆದುಕೊಂಡು ನನ್ನ ಬೆನ್ನು ನಾನೇ ತಟ್ಟುಕೊಂಡಿದ್ದೇನೆ ಇದು ನನ್ನ ಮೊದಲ ಎಡಿಟಿಂಗ್ ವಿಡಿಯೋ.
  ಜ್ಞಾನಕ್ಕೆ ಕೊನೆಯಿಲ್ಲ ಜ್ಞಾನದ ವಿಶಾಲ ಸಾಗರದಲ್ಲಿ ಮನುಷ್ಯ ಒಂದು ಬಿಂದುವಿನ ಒಂದು ಅಣುವೂ ಆಗಲಾರ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...