Skip to main content

Blog number 2090. ವಿರಳಾತಿ ವಿರಳ ಬಾಂಬೆ ರಕ್ತದ ಗುಂಪಿನವರು ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರೂ ಇಲ್ಲ ಈ ಎಲ್ಲಾ ಬ್ಲಡ್ ಬ್ಯಾಂಕ್ ಮಾಹಿತಿ ಶಿವಮೊಗ್ಗದ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್ ಸೀನಿಯರ್ ಎಕ್ಸಿಕ್ಯೂಟಿವ್ ಧರಣೇಂದ್ರ ದಿನಕರ್ ಈ ಸಂದರ್ಶನದಲ್ಲಿ ವಿವರಿಸಿದ್ದಾರೆ.

#ಶಿವಮೊಗ್ಗ_ಜಿಲ್ಲೆಯ_ರಕ್ತದಾನದ_ಶತಕ_ವೀರ_116_ಬಾರಿ_ರಕ್ತದಾನ_ಮಾಡಿದ

#ಜಿಲ್ಲೆಯ_ಆಪತ್ಬಾಂದವ_ದರಣೇಂದ್ರ_ದಿನಕರ್_ಸಂದಶ೯ನ.

#ಸರ್ಕಾರ_ಒಂದು_ಯುನಿಟ್_ರಕ್ತಕ್ಕೆ_ಖಾಸಾಗಿ_ಆಸ್ಪತ್ರೆಗೆ_ಒಂದು_ಸಾವಿರದ_ನಾಲ್ಕು_ನೂರು

#ಬಿಪಿಎಲ್_ಕಾರ್ಡುದಾರರಿಗೆ_ಆರುನೂರಾ_ನಿಗದಿ_ಮಾಡಿದೆ

#ಇದು_ರಕ್ತಪರೀಕ್ಷೆ_ಪ್ಯಾಕಿಂಗ್_ವೆಚ್ಟ_ಮಾತ್ರ

#ರಕ್ತದಲ್ಲಿ_ಅಪರೂಪದ_ಬಾಂಬೆ_ಗ್ರೂಪ್_ಇದೆ

#ಶಿವಮೊಗ್ಗ_ಜಿಲ್ಲೆಯಲ್ಲಿ_ಈ_ಗುಂಪಿನವರು_ಒಬ್ಬರೂ_ಇಲ್ಲ

#ಪಕ್ಕದ_ಸಿದ್ದಾಪುರ_ತಾಲ್ಲೂಕಿನ_ಆಡುಕಟ್ಟದಾ_ಕೊರ್ಲಕೈನಲ್ಲಿ_ಒಬ್ಬರಿದ್ದಾರೆ.

#ಅವರು_ಸಾಗರದ_ಎಲ್_ಬಿ_ಕಾಲೇಜ್_ವಿದ್ಯಾರ್ಥಿ_ಉದಯಕುಮಾರ್.

https://youtu.be/1ag9UWU3kkw?feature=shared

   ರಕ್ತದಾನ ಶ್ರೇಷ್ಟ ದಾನ- ಇನ್ನೊಂದು ಜೀವದಾನದ ಕೆಲಸ ಮತ್ತು ರಕ್ತದಾನದ ಬಗ್ಗೆ ಪ್ರಾರಂಭದಲ್ಲಿದ್ದ ಮೂಡ ನಂಬಿಕೆಗಳು ಬದಲಾಗಿದೆ, ಹೊಸ ತಂತ್ರಜ್ಞಾನಗಳು ಬಂದಿದೆ, ವೈದ್ಯಕೀಯ ಲೋಕದಲ್ಲಿ ದಾನಿಯ ರಕ್ತ ಪರೀಕ್ಷೆ ಸರಿಯಾಗಿ ನಡೆಸಿ ಯಾವುದೇ ಸೋಂಕು ಇಲ್ಲದ್ದನ್ನ ದೃಡೀಕರಿಸಿ ರೋಗಿಯ ದೇಹಕ್ಕೆ ನೀಡುತ್ತಾರೆ.
   ಒಂದು ಕಾಲದಲ್ಲಿ ಜಿಲ್ಲೆಗೊಂದು ಬ್ಲಡ್ ಬ್ಯಾಂಕ್ ಕೂಡ ಇರಲಿಲ್ಲ ಈಗ ತಾಲ್ಲೂಕು ಕೇಂದ್ರಗಳಲ್ಲೂ ಬ್ಲಡ್ ಬ್ಯಾಂಕ್ ಕಾರ್ಯನಿರ್ವಹಿಸುತ್ತಿರುವುದು ಸಮಾದಾನಕರ ವಿಷಯ ಆಗಿದೆ.
   ಒಂದು ಯುನಿಟ್ ರಕ್ತ ಅಂದರೆ 250 ML ಇದನ್ನು ಪಡೆಯಲು ಬ್ಲಡ್ ಬ್ಯಾಂಕ್ ನಲ್ಲಿ ಹಣ ಪಾವತಿ ಮಾಡಬೇಕು, ರಾಜ್ಯ ಸರ್ಕಾರ ಖಾಸಾಗಿ ಆಸ್ಪತ್ರೆಗೆ ಒಂದು ಯುನಿಟ್ ರಕ್ತಕ್ಕೆ ರೂ 1400 ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಒಂದು ಯುನಿಟ್ ರಕ್ತಕ್ಕೆ ರೂ 600 ರೂ ನಿಗದಿ ಮಾಡಿದೆ ಇದರಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತ ಸಂಗ್ರಹಿಸುವ ಪೋಚ್ (ರಕ್ತದ ಚೀಲದ) ಬೆಲೆ ಸೇರಿದೆ.
   ರಕ್ತ ದಾನ ಮಾಡಿದ 34 ದಿನದ ಒಳಗೆ ರಕ್ತ ಪಡೆಯುವವರಿಗೆ ವಿತರಿಸಬೇಕು, ರಕ್ತ 35 ದಿನದ ನಂತರ ಬಳಸಲು ಬರುವುದಿಲ್ಲ ಅದನ್ನು ನೂತನ ಬಯೋ ವೇಸ್ಟ್ ತಂತ್ರಜ್ಞಾನದಲ್ಲಿ ವಿಲೇವಾರಿ ಮಾಡುತ್ತಾರೆ.
   ಈಗ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದಲ್ಲಿನ ಪ್ಲೇಟ್ಲೆಟ್ - ವೈಟ್ ಬ್ಲಡ್ ಸೆಲ್ (WBC) - ರೆಡ್ ಬ್ಲಡ್ ಸೆಲ್ (RBC) - ಪ್ಲಾಸ್ಮಾ ಗಳನ್ನ ವಿಂಗಡಿಸುವ ತಂತ್ರಜ್ಞಾನ ಅಳವಡಿಸಲಾಗಿದೆ.
   ರಕ್ತದ ನಾಲ್ಕು ಗುಂಪುಗಳಾದ A - B-AB-0 ಮತ್ತು ಅದೇ ಹೆಸರಿನ ನೆಗಟೀವ್ ರಕ್ತದ ಗುಂಪುಗಳ ಜೊತೆ ಇನ್ನೊಂದು ವಿರಳಾತಿ ವಿರಳವಾದ ರಕ್ತದ ಗುಂಪಿದೆ ಅದು #ಬಾಂಬೆ_ಗ್ರೂಪ್ 1952 ರಲ್ಲಿ ಡಾಕ್ಟರ್ Y.M. ಬೆಂಡೆ ಮುಂಬೈನಲ್ಲಿ ಮೊದಲು ಕಂಡುಹಿಡಿದಿದ್ದರಿಂದ ಈ ರಕ್ತದ ಗುಂಪಿಗೆ ಬಾಂಬೆ ಗ್ರೂಪ್ ಎಂದೇ ಹೆಸರು ಇದೆ.
  ಈ ರಕ್ತದ ಗುಂಪಿನವರು ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಯಾರೂ ಇಲ್ಲ ಪಕ್ಕದ ಸಿದ್ದಾಪುರ ತಾಲೂಕಿನ ಆಡುಕಟ್ಟಾ ಸಮೀಪದ ಕೊರ್ಲಕೈ ಗ್ರಾಮದ ಉದಯಕುಮಾರ್ ಒಬ್ಬರೇ ಇರುವುದು ಅವರು ಸಾಗರದ ಎಲ್.ಬಿ.ಕಾಲೇಜಿನಲ್ಲಿ ಬಿಎಸ್ಸಿ ವಿದ್ಯಾರ್ಥಿ.
ರೆಡ್ ಕ್ರಾಸ್ ಸಂಸ್ಥೆಗೆ ಆಯಾ ಜಿಲ್ಲಾಧಿಕಾರಿಗಳೇ ಅಧ್ಯಕ್ಷರು ಆಗಿರುತ್ತಾರೆ ಈ ಎಲ್ಲಾ ಪ್ರಶ್ನೆಗಳಿಗೆ ದರಣೇಂದ್ರ ದಿನಕರ್ ಈ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ.
   ಶಿವಮೊಗ್ಗದ ಬ್ಲಡ್ ಬ್ಯಾಂಕ್ ವಿಳಾಸ
 #ರೆಡ್_ಕ್ರಾಸ್_ಸಂಜೀವಿನಿ_ಬ್ಲಡ್_ಬ್ಯಾಂಕ್
ಸೆಲ್ಲರ್, ಕ್ಷಿತಿ ಕಾಂಪ್ಲೆಕ್ಸ್, ಜೆಪಿಎನ್ ರಸ್ತೆ
ಪಸ್ಟ್ ಕ್ರಾಸ್ (ಆಭರಣ ಮಳಿಗೆ)
ಶಿವಮೊಗ್ಗ (08182-228855).

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ