Skip to main content

Blog number 2092. ರಾಜ್ಯದ ಡೊಂಗೀ ಬಾಬಗಳಿಗೆ ಸಿಂಹ ಸ್ವಪ್ನವಾಗಿರುವ ಕನ್ನಡದ ಕೋವೂರ್ ಎಂದೇ ಖ್ಯಾತರಾಗಿರುವ ಪವಾಡ ಬಯಲು ಅಭಿಯಾನದ ಹುಲಿಕಲ್ ನಟರಾಜ್ ನನ್ನ ಅತಿಥಿ

#ಇವತ್ತಿನ_ನನ್ನ_ಅತಿಥಿ_ಪವಾಡ_ಬಯಲು_ಅಭಿಯಾನದ

#ಹುಲಿಕಲ್_ನಟರಾಜ್

#ಇಡೀ_ರಾಜ್ಯದಲ್ಲಿ_ವಿಜ್ಞಾನ_ಪರಿಷತ್_ಮಾನಸಿಕ_ಚಿಕಿತ್ಸಾ_ಕೇಂದ್ರ_ಸ್ಥಾಪಿಸಿರುವ

#ದೇವರ_ಹೆಸರಲ್ಲಿ_ಮುಗ್ದಜನರ_ಶೋಷಣೆ_ಮಾಡುವ

#ಡೊಂಗೀ_ಬಾಬಾಗಳ_ವಿರುದ್ದ

#ಸಮಾಜದಲ್ಲಿ_ಆಚರಣೆಯಲ್ಲಿರುವ_ಮೂಡನಂಬಿಕೆಗಳ_ವಿರುದ್ದ

#ದೊಡ್ಡ_ಮಟ್ಟದಲ್ಲಿ_ಅಭಿಯಾನ_ನಿರಂತರವಾಗಿ_ನಡೆಸುತ್ತಿದ್ದಾರೆ.

#ಅವರ_ಜೊತೆಯ_ಸರಣಿ_ಸಂದರ್ಶನಗಳು_ನಾಳೆಯಿಂದ


   ಇವತ್ತಿನ ನನ್ನ ಅತಿಥಿ ವಿಚಾರವಾದಿ ಹುಲಿಕಲ್ ನಟರಾಜ್ ಇವರ ಪವಾಡ ಬಯಲು ದೂರದರ್ಶನದಲ್ಲಿ ನಿರಂತರವಾಗಿ ನೋಡುತ್ತಿದ್ದೆ ಇವತ್ತು ಗೆಳೆಯರು ಮತ್ತು ಇವರ ವಿಜ್ಞಾನ ಪರಿಷತ್ ನ ಪದಾಧಿಕಾರಿಗಳಾದ ವಿ.ಟಿ.ಸ್ವಾಮಿ, ಬಿ. ಡಿ.ರವಿ ಜೊತೆ ನನ್ನ ಕಛೇರಿಗೆ ಬಂದಿದ್ದರು.
  ಅವರಿಗೆ ನನ್ನ ಕೆಲ ಪ್ರಶ್ನೆಗಳನ್ನು ಕೇಳಿದೆ ಅದೇನೆಂದರೆ....
    #ಹುಲಿಕಲ್_ನಟರಾಜ್ ಹೆಸರಿನ ಮುಂದಿರುವ ಹುಲಿಕಲ್ ಯಾವುದು? ಹುಲಿಕಲ್ ನಟರಾಜ್ ಆಸ್ತಿಕರೋ ನಾಸ್ತಿಕರೋ? ಹಿಂದೂ ಧರ್ಮದ ವಿರುದ್ದ ಮಾತ್ರ ಇವರು ಪವಾಡ ಬಯಲು ಕಾರ್ಯಾಚಾರಣೆಯ? ಇವರ ಬಾಲ್ಯ- ವಿದ್ಯಾಬ್ಯಾಸ - ಉದ್ಯೋಗ ಮಾಹಿತಿ ಮತ್ತು ಇವರಿಗೆ ಮೂಡನಂಬಿಕೆಗಳ ವಿರೋದದ ಇವರ ಜೀವನ ಪಯಾ೯ಂತ ಅಭಿಯಾನಕ್ಕೆ ಪ್ರೇರಣೆ ಏನು? ಎಂಬ ನನ್ನ ಪ್ರಶ್ನೆಗಳಿಗೆ ಅವರ ಉತ್ತರ ಹುಲಿಕಲ್ ನಟರಾಜ್ ಸಂದರ್ಶನಗಳ ಸರಣಿಯಲ್ಲಿದೆ.
    ಡಾಕ್ಟರ್ ಕೋವೂರ್ - ಹೆಚ್.ಎನ್ ನರಸಿಂಹಯ್ಯರಂತೆ ಮೂಡನಂಬಿಕೆ, ಪವಾಡ ಬೈಲು, ಆಪ್ತ ಸಮಾಲೋಚನೆ, ಮಾನಸಿಕ ಚಿಕಿತ್ಸೆ, ಶಾಲಾ ವಿದ್ಯಾರ್ಥಿಗಳಿಗಾಗಿ ಮೂಡನಂಬಿಕೆ ವಿರುದ್ದ ಜನ ಜಾಗೃತಿ ಅಭಿಯಾನ ಮಾಡುತ್ತಾ ಈಗ ರಾಜ್ಯದಲ್ಲಿ ವಿಜ್ಞಾನ ಪರಿಷತ್ ಸ್ಥಾಪಿಸಿ ಪ್ರತಿ ಜಿಲ್ಲೆಯಲ್ಲಿ ತಾಲ್ಲೂಕಿನಲ್ಲಿ ಅದರ ಶಾಖೆ ಪ್ರಾರಂಬಿಸಿದ್ದಾರೆ, ಜೊತೆಗೆ ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆ ಕೂಡ ಪ್ರಾರಂಬಿಸಿದ್ದಾರೆ.
  ಹುಲಿಕಲ್ ನಟರಾಜ್ ದಂಪತಿಗಳು ಅವರ 60ನೇ ವಯಸ್ಸಿನಲ್ಲಿ ಅವರ ಅಭಿಮಾನಿಗಳು ಅವರಿಗೆ ಸಮರ್ಪಿಸಿದ ಅಭಿನಂದನಾ ಗ್ರಂಥ #ಹುಲಿ_ಹೆಜ್ಜೆ ನನಗೆ ಪ್ರೀತಿಯಿಂದ ನೀಡಿದರು.
   ನಾನು ನಮ್ಮ ಸಂಸ್ಥೆವತಿಯಿಂದ ಅವರಿಗೆ ಗೌರವಿಸಿ ನನ್ನ ಪುಸ್ತಕ ನೀಡಿ ಬಿಳ್ಕೊಟ್ಟೆ ಅವರ ಸಂದರ್ಶನಗಳ ಸರಣಿ ನಾಳೆಯಿಂದ ಪ್ರಕಟವಾಗಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...