Skip to main content

Blog number 2104. ಹದಿನೆಂಟನೆ ಲೋಕ ಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರತಿನಿದಿ ಯಾರು?

#ಹದಿನೆಂಟನೆ_ಲೋಕಸಭಾ_ಚುನಾವಣೆ

#ಜೆ_ಹೆಚ್_ಪಟೇಲ್_ಬಂಗಾರಪ್ಪ_ಯಡೂರಪ್ಪ_ಸಂಸದರಾಗಿ_ಆಯ್ಕೆ_ಆಗಿದ್ದ

#ಶಿವಮೊಗ್ಗ_ಲೋಕಸಬಾ_ಕ್ಷೇತ್ರದಿಂದ_ಈ_ಬಾರಿ_ಯಾರು_ಆಯ್ಕೆ_ಆಗಲಿದ್ದಾರೆ.

  ದಿನಾಂಕ 7 ಮೇ 2024ರ ಮಂಗಳವಾರ ಶಿವಮೊಗ್ಗ ಲೋಕ ಸಭಾ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧೆ ಮಾಡಿದ್ದಾರೆ, ಯಡೂರಪ್ಪರ ಪುತ್ರ ಹಾಲಿ ಸಂಸದ ರಾಘವೇಂದ್ರ BJP ಯಿಂದ ಮತ್ತು ಬಂಗಾರಪ್ಪರ ಪುತ್ರಿ ವರನಟ ರಾಜಕುಮಾರ್ ಸೊಸೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೇಸನಿಂದ ಸ್ವರ್ದಿಸಿದ್ದಾರೆ ಇವರಿಬ್ಬರ ಮಧ್ಯದಲ್ಲಿ BJP ಬಂಡಾಯ ಅಭ್ಯರ್ಥಿ ಆಗಿ ಮಾಜಿ ಮುಖ್ಯಮಂತ್ರಿ ಈಶ್ವರಪ್ಪ ಪ್ರಧಾನಿ ಮೋದಿ ಭಾವಚಿತ್ರದೊಂದಿಗೆ ಪ್ರಚಾರದ ಮುಂಚೂಣಿಯಲ್ಲಿದ್ದಾರೆ.
 2005ರಲ್ಲಿ ಸಮಾಜವಾದಿ ಪಕ್ಷದಿಂದ ಬಂಗಾರಪ್ಪನವರು ಕಾಂಗ್ರೇಸ್ ನಿಂದ ಸ್ಪರ್ದಿಸಿದ್ದ ಅಯನೂರು ಮಂಜುನಾಥರನ್ನ 16ಸಾವಿರದ ಆರುನೂರು ಮತಗಳಿಂದ ಸೋಲಿಸಿ ಸಂಸದರಾಗಿದ್ದರು ಆಗ BJP ಭಾನುಪ್ರಕಾಶ್ ಮೂರನೆ ಸ್ಥಾನ ಪಡೆದರು.
  2009ರಲ್ಲಿ ಕಾಂಗ್ರೇಸಿನಿಂದ ಸ್ವರ್ಧಿಸಿದ್ದ ಬಂಗಾರಪ್ಪನವರು ಬಿಜೆಪಿಯಿಂದ ಸ್ಪರ್ದಿಸಿದ್ದ ಬಿ.ವೈ.ರಾಘವೇಂದ್ರರ ಎದರು 52 ಸಾವಿರದ 893 ಮತದಿಂದ ಸೋಲು ಅನುಭವಿಸಿದ್ದರು ಆಗ ಶಾಸಕರಾಗಿದ್ದ ಗೋಪಾಲಕೃಷ್ಣ ಬೇಳೂರು ಮತ್ತು ಹರತಾಳು ಹಾಲಪ್ಪ ಬಂಗಾರಪ್ಪರ ವಿರುದ್ದ ಪಾಳೆಯದಲ್ಲಿದ್ದರು.
  2014ರಲ್ಲಿ ಬಿಜೆಪಿಗೆ ತಾವು ಕಟ್ಟಿದ ಕೆಜೆಪಿಯಿಂದ ವಾಪಾಸು ಬಂದ ಯಡೂರಪ್ಪ ಕಾಂಗ್ರೇಸಿನ ಮಂಜುನಾಥ ಭಂಡಾರಿ ವಿರುದ್ದ ದಾಖಲೆಯ 3 ಲಕ್ಷದ 63 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾದಿಸಿದರು ಆಗ JDSನಿಂದ ಸ್ಪರ್ದಿಸಿದ್ದ ಬಂಗಾರಪ್ಪರ ಪುತ್ರಿ ಗೀತಾ ಶಿವರಾಜ್ ಕುಮಾರ್ ಮೂರನೆ ಸ್ಥಾನಕ್ಕೆ ಹೋದರು.
   2018ರಲ್ಲಿ ಉಪ ಚುನಾವಣೆ  ನಡೆದಾಗ BJPಯ ರಾಘವೇಂದ್ರ JDS ಪಕ್ಷದಿಂದ (ಕಾಂಗ್ರೇಸ್ ಬೆಂಬಲದಲ್ಲಿ) ಸ್ಪರ್ದಿಸಿದ್ದ ಮದು ಬಂಗಾರಪ್ಪರ ಎದುರು ವಿಜಯಿ ಆದರು
  2019ರ ಜನರಲ್ ಎಲೆಕನ್ ನಲ್ಲಿ JDS ಮತ್ತು ಕಾಂಗ್ರೇಸ್ ಸಮ್ಮಿಶ್ರ ಅಭ್ಯರ್ಥಿ ಮದುಬಂಗಾರಪ್ಪ BJPಯ ರಾಘವೇಂದ್ರರ ವಿರುದ್ದ ಸೋಲು ಕಂಡರು.
   2024ರ 18ನೇ ಲೋಕಸಭೆಗೆ BJP ರಾಘವೇಂದ್ರರ ಎದರು ಬಂಗಾರಪ್ಪರ ಪುತ್ರಿ ಗೀತಾ ಶಿವರಾಜಕುಮಾರ್ ಕಾಂಗ್ರೇಸ್ ನಿಂದ ಸ್ಫರ್ದಿಸಿದ್ದಾರೆ.
   BJP ಗೆ ಬಂಡಾಯವಾಗಿ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪರ ಸ್ಪರ್ದೆ ಶಿವಮೊಗ್ಗ ಲೋಕಸಭೆಯ ಚುನಾವಣೆಯ ಪಲಿತಾಂಶದ ಮೇಲೆ ಯಾವ ಪರಿಣಾಮ ಬೀಳಲಿದೆ ಎಂಬ ಕುತೂಹಲ ಮೂಡಿಸಿದೆ.
   ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ಪ್ರತ್ರಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಪಲಿತಾಂಶ ಪೋಟೋ ಪಿನಿಶಿಂಗ್ ನಲ್ಲಿ ಆಗಲಿದೆ ಎನ್ನಲಾಗುತ್ತಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...