Skip to main content

Blog number 2105. ಶಿವಮೊಗ್ಗ ಜಿಲ್ಲೆಯ ನಮಗೆ ಗೊತ್ತಿಲ್ಲದ ಅಥವ ಅಸ್ಪಷ್ಟ ಮಾಹಿತಿ ಕೇಳಿದ್ದ ಶಿವಮೊಗ್ಗ ಜಿಲ್ಲೆಯ ಇತಿಹಾಸವನ್ನು ಸ್ಥಳಿಯ ಎಲೆಮರೆಯ ಕಾಯಿಯಂತಿರುವ ಪ್ರತಿಭಾವಂತ ಇತಿಹಾಸ ಸಂಶೋಧಕರ ಮೂಲಕ ಡಿಜಿಟಲ್ ಮಾಧ್ಯಮದಲ್ಲಿ ದಾಖಲಿಸುತ್ತಿರುವ ಆಕರ್ಷ ನಂದಿನಿ ದಂಪತಿಗಳ ಅಮೂಲ್ಯ ಇತಿಹಾಸ ಸಂರಕ್ಷಣ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆ ಗಳು.

#ಬೆಂಜಮಿನ್_ಲೂವಿಸ್_ರೈಸ್_ನಂತರ_125_ವರ್ಷಗಳ_ನಂತರ

#ಶಿವಮೊಗ್ಗ_ಜಿಲ್ಲೆಯ_ಇತಿಹಾಸದ_ಕುರುಹು_ಹುಡುಕಿಕೊಂಡು_ಬಂದು

#ತಮ್ಮ_ಡಿಜಿಟಲ್_ಮಾಧ್ಯಮದಲ್ಲಿ_ದಾಖಲಿಸುತ್ತಿರುವ_ಆಕರ್ಷ_ನಂದಿನಿ_ದಂಪತಿಗಳು

#ಇವರಿಗೆ_ಸಹಕರಿಸುತ್ತಿರುವ_ಇತಿಹಾಸ_ಸಂಶೋಧಕರಾದ

#ಲೋಕರಾಜ_ಜೈನ್_ರಮೇಶ್_ಹಿರೇಜಂಬೂರ್_ಶಿರಾಳಕೊಪ್ಪದ_ಪತ್ರಕರ್ತ_ನವೀನ್

#ಪ್ರತಿಯೊಂದು_ಭಾಗವೂ_ಉಪಯುಕ್ತ_ಮಾಹಿತಿ_ಒಳಗೊಂಡಿದೆ

#ಶಿವಮೊಗ್ಗ_ಜಿಲ್ಲೆಯ_ಸಮಗ್ರಇತಿಹಾಸ_ಹೊಸ_ತಲೆಮಾರಿನ_ದೃಶ್ಯ_ಮಾಧ್ಯಮದಲ್ಲಿ

#ಮುಂದಿನ_ತಲೆಮಾರಿಗೆ_ಸಂರಕ್ಷಿಸಲಾಗುತ್ತಿದೆ.


  ಶರಾವತಿ ನದಿಯ ದಂಡೆಯ ಬಲಿಷ್ಟವಾದ ಏಕೈಕ ಜೈನ ರಾಜರ ಆಡಳಿತದ ಕಥೆ ಭಾರತೀಯರೆಲ್ಲರಿಗೂ ಮುಖ್ಯವಾದ ಇತಿಹಾಸ ಆದರೂ ಸಾಗರ ತಾಲೂಕಿನ ಜನತೆಗೆ ಬಹುಮುಖ್ಯ ಇತಿಹಾಸ ಇದನ್ನು ನಾಡಿನ ಪ್ರಖ್ಯಾತ #ಡಿಜಿಟಲ್_ಮಾಧ್ಯಮದ ಮೂಲಕ ನಮ್ಮ ತಾಲ್ಲೂಕಿನ ಇತಿಹಾಸ ಸಂಶೋದಕರು ಈ ರಾಣಿಯ ವಂಶಸ್ಥರೂ ಆಗಿರುವ #ಲೋಕರಾಜ್_ಜೈನ್ ತುಂಬಾ ಸ್ಟಾರಸ್ಯವಾಗಿ ಜನತೆಗೆ ವಿವರಿಸುತ್ತಿದ್ದಾರೆ.
  ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ
https://youtu.be/kOk6J1zx6to?feature=shared
  
ಈ ರಾಣಿಯ ಆಡಳಿತಕ್ಕೆ ನಮ್ಮ ಸಾಗರ ತಾಲೂಕಿನ ಅರ್ದ ಬಾಗ ಸೇರಿತ್ತು ತಾಲ್ಲೂಕಿನ ಪಶ್ಚಿಮ ಭಾಗದ ಆವಿನಹಳ್ಳಿಯಿಂದ, ತಾಳಗುಪ್ಪದ ಗಮಟೆ ಘಟ್ಟದಿಂದ ಅರಬೀ ಸಮುದ್ರದ ತನಕ ರಾಣಿ ಚಿನ್ನ ಬೈರಾದೇವಿ ವ್ಯಾಪ್ತಿಗೆ ಸೇರಲ್ಪಟ್ಟ ಪ್ರದೇಶವಾಗಿತ್ತು.
  ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. 16ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು 54 ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. 
    ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಸಂಗೀತಪುರ] ಅಥವಾ ಹಾಡುವಳ್ಳಿ/ಹಾಡವಳ್ಳಿ (ಸಂಗೀತಪುರ) ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.
   ಮಲೆನಾಡಿನ ಪ್ರದೇಶದಲ್ಲಿ ವ್ಯಾಪಕವಾಗಿ ಬೆಳೆಯುತ್ತಿದ್ದ ಕಾಳುಮೆಣಸನ್ನು ಯುರೋಪಿಗೆ ರಫ್ತು ಮಾಡುತ್ತಿದ್ದ ಈಕೆಗೆ ಕರಿಮೆಣಸಿನ/ಕಾಳುಮೆಣಸಿನ ರಾಣಿ  ಎಂದೂ ಕರೆಯಲಾಗಿದೆ. 
   ಪೋರ್ಚುಗೀಸರು, ಕೆಳದಿ ಅರಸರು ಮತ್ತು ಬಿಜಾಪುರದ ಸುಲ್ತಾನರ ನಡುವಿನ ಯುದ್ಢಗಳನ್ನು ತನ್ನ ಜಾಣ್ಮೆಯಿಂದ ನಿರ್ವಹಿಸಿದ ಈಕೆ 1552-1606 ರ ನಡುವಿನ ಐವತ್ನಾಲ್ಕು ವರ್ಷಗಳ ಕಾಲ ರಾಜ್ಯಭಾರ ನಡೆಸಿದಳು.
   ಗೇರುಸೊಪ್ಪೆಯಲ್ಲಿ ಅಲ್ಲಿನ ನಾಡವರು ಮತ್ತು ಖಾರ್ವಿಗಳು "ಅವ್ವರಸಿ" ಎಂದು ಪೂಜಿಸುವ ರಾಣಿ ಚೆನ್ನಭೈರಾದೇವಿಯ ದೇವಸ್ಥಾನವಿದೆ. ಈಕೆಗೆ ಪೋರ್ಚುಗೀಸರು #ರೈನಾ_ದೆ_ಪಿಮೆಂಟಾ" ಎಂಬ ಹೆಸರು ಕೊಟ್ಟಿದ್ದರು.
  ಕಳೆದ ಆರು ತಿಂಗಳಿಂದ ಚೆನ್ನಬೈರಾದೇವಿ ಇತಿಹಾಸದ ಕುರುಹು ಹುಡುಕುತ್ತಾ ಅಲ್ಲಿಗೆ ತಲುಪಿ ಅಲ್ಲಿನ ಅಳಿದುಳಿದ ಕುರುಹುಗಳ ಎದರು ಚೆನ್ನಬೈರಾದೇವಿ ವಂಶ -ಆಡಳಿತು- ಇತಿಹಾಸ ನಮಗೆ ತೋರಿಸುವ ಮೂಲಕ ಜನಮಾನಸದಲ್ಲಿ ಮರೆತೇ ಹೋಗಿದ್ದ ಹಾಗೂ ಅಸ್ಪಷ್ಟ ಮಾಹಿತಿಗಳು ಹೊಸ ಹೊಳಪಿನಿಂದ ನಮ್ಮ ಎದುರು ತೆರೆದುಕೊಳ್ಳುವಂತೆ ಮಾಡಿದ್ದಾರೆ #ಆಕರ್ಷ_ನಂದಿನಿ ದಂಪತಿಗಳು.
  ಇವರ ಮಾಧ್ಯಮದ ಮೂಲಕ #ನರಹಂತಕ_ವೀರಪ್ಪನ್ #ಸಂಗೊಳ್ಳಿ_ರಾಯಣ್ಣ #ಕನಕದಾಸ #ಸರ್ವಜ್ಞ #ಉತ್ತರಕರ್ನಾಟಕದ_ವಾಡೆಗಳು ತುಂಬಾ ಪ್ರಸಿದ್ದಿ ಪಡೆದಿದೆ.
ಈಗ ಶಿವಮೊಗ್ಗ ಜಿಲ್ಲೆಯಲ್ಲಿರುವ .... #ತಾಳಗುಂದದ_ಮೊದಲ_ಕನ್ನಡ_ಶಾಸನ #ಬಳ್ಳಿಗಾವೆ #ಅಲ್ಲಮಪ್ರಭು #ಈಸೂರು_ಹೋರಾಟ #ಖಂಡೋಬರಾವ್_ಮ್ಯೂಸಿಯಂ #ಸಿಂಹದಾಮ #ಸಕ್ರೆಬೈಲು_ಆನೆ_ಕ್ಯಾಂಪ್ #ನೀನಾಸಂ #ಗೇರುಸೊಪೈಯ_ಚೆನ್ನಬೈರಾದೇವಿ #ಕೆಳದಿ_ಅರಸರು #ಕವಿಶೈಲ.... ಹೀಗೆ  ಶಿವಮೊಗ್ಗ ಜಿಲ್ಲೆಯ ನಮಗೇ ಗೊತ್ತಿಲ್ಲದ ನಮ್ಮ ಜಿಲ್ಲೆಯ ಇತಿಹಾಸ ದಾಖಲಿಸುತ್ತಿದ್ದಾರೆ.
 ಜಿಲ್ಲೆಯ ಇತಿಹಾಸ ಆಸಕ್ತರು, ಶಿಕ್ಷಕರುಗಳು ಇವುಗಳನ್ನು ತಪ್ಪದೇ ನೋಡಬೇಕು ಮತ್ತು ಇದನ್ನು ತಮ್ಮ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಶೇರ್ ಮಾಡಿ ನಮ್ಮ ಜಿಲ್ಲೆಯ ಇತಿಹಾಸ ಮುಂದಿನ ತಲೆಮಾರಿಗೆ ಹಂಚಬೇಕೆಂದು ವಿನಂತಿಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ