Skip to main content

Blog number 2105. ಶಿವಮೊಗ್ಗ ಜಿಲ್ಲೆಯ ನಮಗೆ ಗೊತ್ತಿಲ್ಲದ ಅಥವ ಅಸ್ಪಷ್ಟ ಮಾಹಿತಿ ಕೇಳಿದ್ದ ಶಿವಮೊಗ್ಗ ಜಿಲ್ಲೆಯ ಇತಿಹಾಸವನ್ನು ಸ್ಥಳಿಯ ಎಲೆಮರೆಯ ಕಾಯಿಯಂತಿರುವ ಪ್ರತಿಭಾವಂತ ಇತಿಹಾಸ ಸಂಶೋಧಕರ ಮೂಲಕ ಡಿಜಿಟಲ್ ಮಾಧ್ಯಮದಲ್ಲಿ ದಾಖಲಿಸುತ್ತಿರುವ ಆಕರ್ಷ ನಂದಿನಿ ದಂಪತಿಗಳ ಅಮೂಲ್ಯ ಇತಿಹಾಸ ಸಂರಕ್ಷಣ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆ ಗಳು.

#ಬೆಂಜಮಿನ್_ಲೂವಿಸ್_ರೈಸ್_ನಂತರ_125_ವರ್ಷಗಳ_ನಂತರ

#ಶಿವಮೊಗ್ಗ_ಜಿಲ್ಲೆಯ_ಇತಿಹಾಸದ_ಕುರುಹು_ಹುಡುಕಿಕೊಂಡು_ಬಂದು

#ತಮ್ಮ_ಡಿಜಿಟಲ್_ಮಾಧ್ಯಮದಲ್ಲಿ_ದಾಖಲಿಸುತ್ತಿರುವ_ಆಕರ್ಷ_ನಂದಿನಿ_ದಂಪತಿಗಳು

#ಇವರಿಗೆ_ಸಹಕರಿಸುತ್ತಿರುವ_ಇತಿಹಾಸ_ಸಂಶೋಧಕರಾದ

#ಲೋಕರಾಜ_ಜೈನ್_ರಮೇಶ್_ಹಿರೇಜಂಬೂರ್_ಶಿರಾಳಕೊಪ್ಪದ_ಪತ್ರಕರ್ತ_ನವೀನ್

#ಪ್ರತಿಯೊಂದು_ಭಾಗವೂ_ಉಪಯುಕ್ತ_ಮಾಹಿತಿ_ಒಳಗೊಂಡಿದೆ

#ಶಿವಮೊಗ್ಗ_ಜಿಲ್ಲೆಯ_ಸಮಗ್ರಇತಿಹಾಸ_ಹೊಸ_ತಲೆಮಾರಿನ_ದೃಶ್ಯ_ಮಾಧ್ಯಮದಲ್ಲಿ

#ಮುಂದಿನ_ತಲೆಮಾರಿಗೆ_ಸಂರಕ್ಷಿಸಲಾಗುತ್ತಿದೆ.


  ಶರಾವತಿ ನದಿಯ ದಂಡೆಯ ಬಲಿಷ್ಟವಾದ ಏಕೈಕ ಜೈನ ರಾಜರ ಆಡಳಿತದ ಕಥೆ ಭಾರತೀಯರೆಲ್ಲರಿಗೂ ಮುಖ್ಯವಾದ ಇತಿಹಾಸ ಆದರೂ ಸಾಗರ ತಾಲೂಕಿನ ಜನತೆಗೆ ಬಹುಮುಖ್ಯ ಇತಿಹಾಸ ಇದನ್ನು ನಾಡಿನ ಪ್ರಖ್ಯಾತ #ಡಿಜಿಟಲ್_ಮಾಧ್ಯಮದ ಮೂಲಕ ನಮ್ಮ ತಾಲ್ಲೂಕಿನ ಇತಿಹಾಸ ಸಂಶೋದಕರು ಈ ರಾಣಿಯ ವಂಶಸ್ಥರೂ ಆಗಿರುವ #ಲೋಕರಾಜ್_ಜೈನ್ ತುಂಬಾ ಸ್ಟಾರಸ್ಯವಾಗಿ ಜನತೆಗೆ ವಿವರಿಸುತ್ತಿದ್ದಾರೆ.
  ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ
https://youtu.be/kOk6J1zx6to?feature=shared
  
ಈ ರಾಣಿಯ ಆಡಳಿತಕ್ಕೆ ನಮ್ಮ ಸಾಗರ ತಾಲೂಕಿನ ಅರ್ದ ಬಾಗ ಸೇರಿತ್ತು ತಾಲ್ಲೂಕಿನ ಪಶ್ಚಿಮ ಭಾಗದ ಆವಿನಹಳ್ಳಿಯಿಂದ, ತಾಳಗುಪ್ಪದ ಗಮಟೆ ಘಟ್ಟದಿಂದ ಅರಬೀ ಸಮುದ್ರದ ತನಕ ರಾಣಿ ಚಿನ್ನ ಬೈರಾದೇವಿ ವ್ಯಾಪ್ತಿಗೆ ಸೇರಲ್ಪಟ್ಟ ಪ್ರದೇಶವಾಗಿತ್ತು.
  ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. 16ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು 54 ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. 
    ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಸಂಗೀತಪುರ] ಅಥವಾ ಹಾಡುವಳ್ಳಿ/ಹಾಡವಳ್ಳಿ (ಸಂಗೀತಪುರ) ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.
   ಮಲೆನಾಡಿನ ಪ್ರದೇಶದಲ್ಲಿ ವ್ಯಾಪಕವಾಗಿ ಬೆಳೆಯುತ್ತಿದ್ದ ಕಾಳುಮೆಣಸನ್ನು ಯುರೋಪಿಗೆ ರಫ್ತು ಮಾಡುತ್ತಿದ್ದ ಈಕೆಗೆ ಕರಿಮೆಣಸಿನ/ಕಾಳುಮೆಣಸಿನ ರಾಣಿ  ಎಂದೂ ಕರೆಯಲಾಗಿದೆ. 
   ಪೋರ್ಚುಗೀಸರು, ಕೆಳದಿ ಅರಸರು ಮತ್ತು ಬಿಜಾಪುರದ ಸುಲ್ತಾನರ ನಡುವಿನ ಯುದ್ಢಗಳನ್ನು ತನ್ನ ಜಾಣ್ಮೆಯಿಂದ ನಿರ್ವಹಿಸಿದ ಈಕೆ 1552-1606 ರ ನಡುವಿನ ಐವತ್ನಾಲ್ಕು ವರ್ಷಗಳ ಕಾಲ ರಾಜ್ಯಭಾರ ನಡೆಸಿದಳು.
   ಗೇರುಸೊಪ್ಪೆಯಲ್ಲಿ ಅಲ್ಲಿನ ನಾಡವರು ಮತ್ತು ಖಾರ್ವಿಗಳು "ಅವ್ವರಸಿ" ಎಂದು ಪೂಜಿಸುವ ರಾಣಿ ಚೆನ್ನಭೈರಾದೇವಿಯ ದೇವಸ್ಥಾನವಿದೆ. ಈಕೆಗೆ ಪೋರ್ಚುಗೀಸರು #ರೈನಾ_ದೆ_ಪಿಮೆಂಟಾ" ಎಂಬ ಹೆಸರು ಕೊಟ್ಟಿದ್ದರು.
  ಕಳೆದ ಆರು ತಿಂಗಳಿಂದ ಚೆನ್ನಬೈರಾದೇವಿ ಇತಿಹಾಸದ ಕುರುಹು ಹುಡುಕುತ್ತಾ ಅಲ್ಲಿಗೆ ತಲುಪಿ ಅಲ್ಲಿನ ಅಳಿದುಳಿದ ಕುರುಹುಗಳ ಎದರು ಚೆನ್ನಬೈರಾದೇವಿ ವಂಶ -ಆಡಳಿತು- ಇತಿಹಾಸ ನಮಗೆ ತೋರಿಸುವ ಮೂಲಕ ಜನಮಾನಸದಲ್ಲಿ ಮರೆತೇ ಹೋಗಿದ್ದ ಹಾಗೂ ಅಸ್ಪಷ್ಟ ಮಾಹಿತಿಗಳು ಹೊಸ ಹೊಳಪಿನಿಂದ ನಮ್ಮ ಎದುರು ತೆರೆದುಕೊಳ್ಳುವಂತೆ ಮಾಡಿದ್ದಾರೆ #ಆಕರ್ಷ_ನಂದಿನಿ ದಂಪತಿಗಳು.
  ಇವರ ಮಾಧ್ಯಮದ ಮೂಲಕ #ನರಹಂತಕ_ವೀರಪ್ಪನ್ #ಸಂಗೊಳ್ಳಿ_ರಾಯಣ್ಣ #ಕನಕದಾಸ #ಸರ್ವಜ್ಞ #ಉತ್ತರಕರ್ನಾಟಕದ_ವಾಡೆಗಳು ತುಂಬಾ ಪ್ರಸಿದ್ದಿ ಪಡೆದಿದೆ.
ಈಗ ಶಿವಮೊಗ್ಗ ಜಿಲ್ಲೆಯಲ್ಲಿರುವ .... #ತಾಳಗುಂದದ_ಮೊದಲ_ಕನ್ನಡ_ಶಾಸನ #ಬಳ್ಳಿಗಾವೆ #ಅಲ್ಲಮಪ್ರಭು #ಈಸೂರು_ಹೋರಾಟ #ಖಂಡೋಬರಾವ್_ಮ್ಯೂಸಿಯಂ #ಸಿಂಹದಾಮ #ಸಕ್ರೆಬೈಲು_ಆನೆ_ಕ್ಯಾಂಪ್ #ನೀನಾಸಂ #ಗೇರುಸೊಪೈಯ_ಚೆನ್ನಬೈರಾದೇವಿ #ಕೆಳದಿ_ಅರಸರು #ಕವಿಶೈಲ.... ಹೀಗೆ  ಶಿವಮೊಗ್ಗ ಜಿಲ್ಲೆಯ ನಮಗೇ ಗೊತ್ತಿಲ್ಲದ ನಮ್ಮ ಜಿಲ್ಲೆಯ ಇತಿಹಾಸ ದಾಖಲಿಸುತ್ತಿದ್ದಾರೆ.
 ಜಿಲ್ಲೆಯ ಇತಿಹಾಸ ಆಸಕ್ತರು, ಶಿಕ್ಷಕರುಗಳು ಇವುಗಳನ್ನು ತಪ್ಪದೇ ನೋಡಬೇಕು ಮತ್ತು ಇದನ್ನು ತಮ್ಮ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಶೇರ್ ಮಾಡಿ ನಮ್ಮ ಜಿಲ್ಲೆಯ ಇತಿಹಾಸ ಮುಂದಿನ ತಲೆಮಾರಿಗೆ ಹಂಚಬೇಕೆಂದು ವಿನಂತಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...