Skip to main content

Blog number 2112. ಬೌಗೋಳಿಕ ವಿಸ್ತೀರ್ಣದಲ್ಲಿ ಒಂದು ತುದಿಯಿಂದ ಇನ್ನೊಂದು ತುದಿಗೆ 175 ಕಿ.ಮಿ. ಉದ್ದದ ಶಿವಮೊಗ್ಗ ಜಿಲ್ಲೆಯ ಹೊಸನಗರ ವಿದಾನಸಭಾ ಕ್ಷೇತ್ರದ ಮೂರು ಅವಧಿಯ ಶಾಸಕರಾಗಿದ್ದ ಬಿ.ಸ್ವಾಮಿ ರಾವ್ ನನ್ನ ಅತಿಥಿ.

#ಹೊಸನಗರದ_ಮಾಜಿ_ಶಾಸಕರಾದ_ಬಿ_ಸ್ವಾಮಿರಾಯರು_ನನ್ನ_ಇವತ್ತಿನ_ಅತಿಥಿ

#ತೊಂಬತ್ನಾಲ್ಕು_ವರ್ಷ_ತುಂಬಿದ_ಸಾರ್ಥಕ_ಜೀವನ_ಅವರದ್ದು

#ಖ್ಯಾತ_ಪತ್ರಕರ್ತ_ದಿನೇಶ್_ಅಮೀನ್_ಮಟ್ಟು_ಅವರಿಗೆ_ನೀಡಿದ_ಸಲಹೆಯಂತೆ

#ಅವರ_ಹೃದಯಾಂತರಾಳದ_ಜೀವನ_ವೃತ್ತಾಂತ_ಬಿಡುಗಡೆ_ಆಗಿದೆ

#ಹೊಸನಗರದ_ಖ್ಯಾತ_ಪತ್ರಕರ್ತ_ಶ್ರೀಕಂಠ_ಹೆಚ್_ಆರ್_ಒಂದು_ವರ್ಷ_ಕಾಲ

#ಸ್ವಾಮಿರಾವ್_ಅವರ_ಜೀವನದ_ವೃತ್ತಾಂತಗಳ_ದಾಖಲಿಸಿ_ಪುಸ್ತಕ_ಮಾಡಿದ್ದಾರೆ

#ಸ್ವಾಮಿ_ರಾವ್_ಅವರ_94ನೇ_ಹುಟ್ಟು_ಹಬ್ಬದಂದು_ಬಿಡುಗಡೆ_ಆದ_ನಾನು_ಹೇಳುವುದೆಲ್ಲ_ಸತ್ಯ

#ಸ್ವಾಮಿರಾವ್_ಸ್ಟಹಸ್ತಾಕ್ಷರದಿಂದ_ನನ್ನ_ಕಛೇರಿಗೆ_ಬಂದು_ನೀಡಿದ್ದು_ನನ್ನ_ಭಾಗ್ಯ


   94 ನೇ ವಯಸ್ಸಿನಲ್ಲೂ ಬಿಪಿ ಶುಗರ್ ಇಲ್ಲದ, ತಮ್ಮ ಅಗಾದ ನೆನಪಿನ ಶಕ್ತಿಗೆ ಯಾವುದೇ ಕುಂದುಂಟಾಗದೆ ನಿರರ್ಗಳವಾಗಿ ಮಾತನಾಡುವ ಶಿವಮೊಗ್ಗ ಜಿಲ್ಲೆಯ ಅತ್ಯಂತ ವಿಸ್ತಾರವಾದ ವಿಧಾನಸಭಾ ಕ್ಷೇತ್ರದ ಮೂರು ಅವಧಿಗೆ ಶಾಸಕರಾಗಿದ್ದ ಬಿ.ಸ್ವಾಮಿರಾವ್ ಇವತ್ತು ನನ್ನ ಅತಿಥಿಗಳು.
  ಇವರ ಜೀವನ ವೃತ್ತಾಂತ #ನಾನು_ಹೇಳುವುದೆಲ್ಲ_ಸತ್ಯ ಪುಸ್ತಕ ಬರೆದು ಪ್ರಕಟಿಸಿದ ಪತ್ರಕರ್ತ ಶ್ರೀಕಂಠ ಹೆಚ್.ಆರ್. ಜೊತೆಯಾಗಿ ಇವತ್ತು ಸಂಜೆ ನನ್ನ ಕಛೇರಿಗೆ ಬಂದು ಇವರ ಜೀವನ ವೃತ್ತಾಂತ ಪುಸ್ತಕಕಕ್ಕೆ ಸ್ಟ ಹಸ್ತಾಕ್ಷರ ಮಾಡಿ ನನಗೆ ನೀಡಿದ್ದು ನನಗೆ ಸೌಬಾಗ್ಯವೇ ಸರಿ.
   ನಮ್ಮ ಸಂಸ್ಥೆ ವತಿಯಿಂದ ಗೌರವಿಸಿ ನಮ್ಮ #ಮಲ್ಲಿಕಾ_ವೆಜ್ ನ ಅವರಿಗೆ ಇಷ್ಟವಾದ ತೋಯಿಸಿದ ಮಂಡಕ್ಕಿ - ಮಿರ್ಚಿ ಬೋಂಡ ಮತ್ತು ಸಕ್ಕರೆ ಹಾಕಿದ ಚಹಾ ನೀಡಿ ಸತ್ಕರಿಸಿದೆ.
  ಇವರ ತಂದೆ ಹೊಸನಗರ ಬಸ್ ನಿಲ್ದಾಣದ ಎದರು #ದೀವರ_ವಿದ್ಯಾವರ್ದಕ_ಸಂಘ ಸ್ಥಾಪಿಸಿ ವಿದ್ಯಾರ್ಥಿನಿಲಯ ನಿರ್ಮಿಸಿದವರು ಸ್ವತಃ ಸ್ವಾಮಿ ರಾವ್ ಅಲ್ಲಿಂದಲೇ ವಿದ್ಯಾಬ್ಯಾಸ ಮಾಡಿದವರು.
  ಶಿವಮೊಗ್ಗ ಜಿಲ್ಲಾ ಈಡಿಗ ಸಮಾಜದ ಅಧ್ಯಕ್ಷರಾಗಿದ್ದಾಗ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಲಯ ಪ್ರಾರಂಬಿಸಿದವರು.
   ದಕ್ಷಿಣ ಭಾರತದ ಎವರೆಸ್ಟ್ ಎಂದು ಕರೆಯುವ ಕೊಡಚ್ಚಾದ್ರಿ ಬೆಟ್ಟದಲ್ಲಿ ಸುಸಜ್ಜಿತ ಪ್ರವಾಸಿ ಮುಂದಿರ ನಿರ್ಮಿಸಿ ಆಗಿನ ಮುಖ್ಯಮಂತ್ರಿ ಬಂಗಾರಪ್ಪರ ಕರೆಸಿ ಉದ್ಘಾಟಿಸಿದ್ದರು.
  ಅವತ್ತು ಬಂಗಾರಪ್ಪರ ಇಷ್ಟದ ವಿಶೇಷವಾದ ಮಲೆನಾಡಿನ ಬೋಜನ ಬಡಿಸಿದವರು.
  ಹಿತಶತೃಗಳಿಂದ ಅನೇಕ ಬಗೆಯ ತೊಂದರೆ ಅನುಭವಿಸಿದವರು ಸ್ವಾಮಿರಾಯರು ಅದನ್ನೆಲ್ಲ ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ ನಾಳೆಯಿಂದ ಓದ ಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...