Skip to main content

Blog number 2127. ಅಕ್ಕಿ ಹಪ್ಪಳ ಪಶ್ಚಿಮ ಘಟ್ಟದ ಮಲೆನಾಡಿನ ಸಿಗ್ನೇಚರ್ ರೆಸಿಪಿ ಆದರೆ ಇದನ್ನು ಜನಪ್ರಿಯಗೊಳಿಸುವ ಕೆಲಸ ಆಗೇ ಇಲ್ಲ.

#ಊಟಕ್ಕೆರೆಡು_ಹಪ್ಪಳ_ಆದರೆ_ಊಟವೇ_ಹಪ್ಪಳ_ಆಗುವುದು

#ಮಲೆನಾಡಿನ_ಅಕ್ಕಿ_ಹಪ್ಪಳ_ಮಾತ್ರ

#ಒಂದು_ಕಿಲೋ_ಅಕ್ಕಿಯಲ್ಲಿ_ಸಣ್ಣ_ಗಾತ್ರದ_ನೂರು_ಹಪ್ಪಳ

#ಅಕ್ಕಿ_ಅದಕ್ಕೆ_ರುಚಿಗೆ_ತಕ್ಕ_ಉಪ್ಪು_ಮಸಾಲೆ_ಸೇರಿಸಿ_ರುಬ್ಬಿ_ಹುದುಗು_ಬರೆಸಿ

#ಹಬೆಯಲ್ಲಿ_ಇಡ್ಲಿಯಂತೆ_ತಟ್ಟೆಯಲ್ಲಿ_ಬೇಯಿಸಿ

#ಬಿಸಿಲಲ್ಲಿ_ಒಣಗಿಸಿ_ಗಾಳಿಯಾಡದ_ಡಬ್ಬದಲ್ಲಿ_ತುಂಬಿಟ್ಟರೆ

#ಮುಂಗಾರಿನ_ಮಳೆ_ಗಾಳಿ_ತರುವ_ಮುಸಂಜೆಯ_ಚಳಿ_ಜೊತೆಗೆ

#ಬಿಸಿ_ಬಿಸಿ_ಚಹಾ_ಕಾಫಿಯ_ಜೊತೆ_ಕುರಂ_ಕರಂ_ಎಂದು

#ಬಾಯಲ್ಲಿ_ಕರಗುವ_ಅಕ್ಕಿ_ಹಪ್ಪಳದ_ಜೋಡಿ.

https://youtube.com/shorts/FW0tuWawgL4?feature=shared

  ನನ್ನ ಹಿಂದಿನ ಲೇಖನದಲ್ಲಿ ಅಕ್ಕಿ ಹಪ್ಪಳದ ತಯಾರಿಯ ವಿಡಿಯೋ ಸಹಿತ ಲೇಖನ ಬರೆದಿದ್ದೆ ಇವತ್ತಿನದ್ದು ಕೊಬ್ಬರಿ ಎಣ್ಣೆಯಲ್ಲಿ ಕರಿದ ಅಕ್ಕಿ ಹಪ್ಪಳ ನಾನು ಮತ್ತು ನನ್ನ ಪ್ರೀತಿಯ ಶಂಭೂರಾಮ ಪಾಲುದಾರಿಕೆಯಲ್ಲಿ ಗುಳುಂ ಮಾಡಿದ್ದು.
  ಊಟಕ್ಕೆ ಉಪ್ಪಿನ ಕಾಯಿಯಂತೆ ಹಪ್ಪಳ ಕೂಡ ಒಂದೋ ಎರೆಡೋ ತಿಂದರೆ ಹೆಚ್ಚು ಆದರೆ ಈ ಅಕ್ಕಿ ಹಪ್ಪಳದ ವಿಶೇಷ ತಟ್ಟೆ ತುಂಬಾ ಅಕ್ಕಿ ಹಪ್ಪಳ ಕರಿದದ್ದು ತಿಂದರೂ ಹೊಟ್ಟೆ ತುಂಬುವುದಿಲ್ಲ.
  ಎಷ್ಟು ತಿಂದರೂ ಹೊಟ್ಟೆಗೆ ತಟ್ಟೆಗೆ ಬಾದಕವಿಲ್ಲ ಈ ಹಪ್ಪಳ ಮಲೆನಾಡಿನ ಪೂರ್ವಿಕರ ಮನೆಯಲ್ಲಿ ಮುಂಗಾರಿಗೆ ಮುನ್ನ ಉಪ್ಪಿನಕಾಯಿ ಜೊತೆ ಜೊತೆಗೆ ತಯಾರಿಸುವ ಪರಂಪರೆಯ ಕಾಯಕವಾಗಿತ್ತು.
   ಬಿಸಿಲಲ್ಲಿ ಒಣಗಿಸಿದ ಗರಿ-ಗರಿ ಹಪ್ಪಳ ಗಾಳಿ ಆಡದ ಡಬ್ಬಿಯಲ್ಲಿ ತುಂಬಿ ಇಟ್ಟು ಮಧ್ಯ ಮುಂಗಾರಿನ ಮಳೆಗಾಲದ ಮಳೆ ಉಂಟು ಮಾಡುವ ತಂಡಿ ಶೀಥದ ಕುಳಿರ್ಗಾಳಿಯ ಮುಸ್ಸಂಜೆಯಲ್ಲಿ ಬಿಸಿ ಕಾಪಿ ಟೀ ಪಾನಿಯದ ಜೊತೆ ಕರಿದ ಈ ಹಪ್ಪಳ ಒಳ್ಳೆಯ ಜೋಡಿ.
  ಅಕ್ಕಿ ಹಪ್ಪಳದಲ್ಲೂ ವಿವಿದ ರೆಸಿಪಿ ಇದೆ ವಿವಿದ ಮಸಾಲೆಯುಕ್ತ ಮತ್ತು ಮಸಾಲೆ ರಹಿತವಾಗಿ ಮತ್ತು ಕರಿಯಲು ಬಳಸುವ ಎಣ್ಣೆಗಳಾದ ಕೊಬ್ಬರಿ ಎಣ್ಣೆ, ಶೇಂಗಾ ಎಣ್ಣೆ ಪ್ರತ್ಯೇಕ ರುಚಿ - ಘಮ ನೀಡುತ್ತದೆ.
   ಇದೇ ರೀತಿ ಹಲಸಿನ ಸಿಹಿ ಸಾದಾ ಖಾರಾ ಹಪ್ಪಳದ್ದೂ ಇನ್ನೊಂದು ಕಥೆ ಆದರೆ ಮಲೆನಾಡು ಸಂಸ್ಕೃತಿ ಬದಲಾಗಿದೆ ಇದೆಲ್ಲ ಮರೆತು ಹೋದ ಸಂಪ್ರದಾಯದ ಆಹಾರ ಆಗಾಗ್ಗೆ ನೆನಪಿಸಿಕೊಂಡರೆ ಬಾಯಲ್ಲಿ ನೀರು ತರಿಸುವ ಸವಿ ನೆನಪಾಗಿ ಉಳಿದಿವೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...