Skip to main content

Blog number 2132. ಇವತ್ತಿನಿಂದ (21-ಮೇ- 2024) ಕೆಳದಿ ರಾಜರ ಇತಿಹಾಸದ ಕಂತುಗಳು ಡಿಜಿಟಲ್ ಮಾಧ್ಯಮದಲ್ಲಿ ಪ್ರಾರಂಭ, ಇತಿಹಾಸ ತಜ್ಞ ಡಾ.ಗುರುರಾಜ ಕಲ್ಲಾಪುರ ಕೆಳದಿ ಇತಿಹಾಸ ಹೇಳಲಿದ್ದಾರೆ

#ಬಹು_ನಿರೀಕ್ಷಿತ_ಕೆಳದಿ_ಇತಿಹಾಸ

#ಖ್ಯಾತ_ಡಿಜಿಟಲ್_ಮಾಧ್ಯಮದಲ್ಲಿ_ಇವತ್ತಿನಿಂದ_ಪ್ರಾರಂಭ

#ನಿವೃತ್ತ_ಕೆಳದಿ_ಮ್ಯೂಸಿಯಂ_ಕ್ಯೂರೇಟರ್_ಗುರುರಾಜಕಲ್ಲಾಪುರ_ಜೊತೆ

#ಶ್ರೀಮತಿ_ನಂದಿನಿ_ಮತ್ತು_ಆಕರ್ಷಹರಳಕಟ್ಟೆ

#ತಪ್ಪದೇ_ವೀಕ್ಷಿಸಿ_ಇದು_ಸಾಗರ_ತಾಲ್ಲೂಕಿನ_ವರದಾನದಿ_ದಂಡೆಯ_ಪ್ರಭುತ್ವದ_ಇತಿಹಾಸ

#ಸಾಗರ_ಪಟ್ಟಣ_ಮಾರಿಕಾಂಬಾ_ಗದ್ದುಗೆ_ಗಣಪತಿ_ದೇವಸ್ಥಾನ_ನಿರ್ಮಿಸಿದ

#ಕೆಳದಿ_ರಾಜ_ವೆಂಕಟಪ್ಪನಾಯಕರ_ಮನೆತನದ_ಕಥೆ.
   ನಿನ್ನೆಯ ತನಕ 50 ಕಂತುಗಳಲ್ಲಿ ನಮ್ಮ ಜಿಲ್ಲೆಯ ಶರಾವತಿ ನದಿ ದಂಡೆಯ ಸಾಗರ ತಾಲೂಕಿನ ಅರ್ದ ಭಾಗ ಸೇರಿದ ಗೇರುಸೊಪ್ಪೆ ಸಾಮ್ರಾಜ್ಯದ ಇತಿಹಾಸದ ಕಥೆ ಇತಿಹಾಸ ಸಂಶೋದಕ ಲೋಕರಾಜ ಜೈನರಿಂದ ಡಿಜಿಟಲ್ ಮಾಧ್ಯಮದಲ್ಲಿ ನೋಡಿದ್ದೀರಿ.
   ಗೇರುಸೊಪ್ಪೆ ರಾಣಿ ಚೆನ್ನಬೈರಾದೇವಿ ಇತಿಹಾಸದ ಇನ್ನೊಂದು ಭಾಗ ಮುಂದಿನ ದಿನಗಳಲ್ಲಿ ವೀಕ್ಷಕರಿಗೆ ಡಿಜಿಟಲ್ ಮಾಧ್ಯಮ ತಲುಪಿಸಲಿದೆ ಆಗ ಪುನಃ ಲೋಕರಾಜ ಜೈನರ ಆಕರ್ಷಕವಾದ ಇತಿಹಾಸದ ಕಥೆ ಕೇಳಲು ಕಾತುರರಾಗಿದ್ದೇವೆ.
  ಒಂದು ವಿಶೇಷ ಅಂದರೆ 5 ಲಕ್ಷ ವೀಕ್ಷಕರಿದ್ದ ಡಿಜಿಟಲ್ ಮಾಧ್ಯಮ ಶಿವಮೊಗ್ಗ ಜಿಲ್ಲೆಯ ಗೇರುಸೊಪ್ಪೆ ರಾಣಿ ಚೆನ್ನಬೈರಾದೇವಿ, ಕದಂಬರು ತಾಳಗುಂದದ ಮೊದಲ ಕನ್ನಡ ಶಾಸನ, ಖಂಡೋಬರಾವ್ ಮ್ಯೂಸಿಯಂ, ಈಸೂರು ಸ್ವಾತಂತ್ರ್ಯ ಹೋರಾಟ, ನೀನಾಸಂ, ಕಡಿದಾಳು ಮಂಜಪ್ಪ, ಸಿಂಹದಾಮ ಮತ್ತು ಸಕ್ಕರೆಬೈಲು ಆನೆ ಕ್ಯಾಂಪ್ ಗಳ ಪ್ರಸರಣದಿಂದ 8 ಲಕ್ಷ ತಲುಪಿದೆ ಅಂದರೆ ನಮ್ಮ ಶಿವಮೊಗ್ಗ ಜಿಲ್ಲೆಯ ಇತಿಹಾಸದ ಮಾಹಿತಿಗೆ ಅಷ್ಟು ಪ್ರಾಮುಖ್ಯವಿದೆ ಎಂಬುದು ಸಾಬೀತಾಗಿದೆ.
  ಇವತ್ತಿಂದ ಸಾಗರ ಪೇಟೆಯ ಕೆಳದಿ ಸಮೀಪದ ಹಳ್ಳಿಬೈಲಿನಿಂದ ಚೌಡಪ್ಪನಾಯಕ ಭದ್ರಪ್ಪನಾಯಕ ಎಡಮುರಾರಿ ಬಲಮುರಾರಿ ಎಂಬ ಅವರ ಮನೆಯ ನಿಷ್ಟಾವಂತ ಆಳುಗಳ ಬಲಿದಾನದಿಂದ ಕೆಳದಿ ಇತಿಹಾಸದ ಕಥೆ ಡಿಜಿಟಲ್ ಮಾಧ್ಯಮದಲ್ಲಿ ಪ್ರಾರಂಭವಾಗಿದೆ.
  ಕೆಳದಿ ಇತಿಹಾಸ ನಮಗೆ ಹೇಳಲಿದ್ದಾರೆ ತಮ್ಮ ಉದ್ಯೋಗಾವದಿ ಪೂರ್ತಿ ಕೆಳದಿ ಮ್ಯೂಸಿಯಂ ಕ್ಯೂರೇಟರ್ ಆಗಿ ಇತ್ತೀಚಿಗೆ ನಿವೃತ್ತರಾದ ಗುರುರಾಜ ಕಲ್ಲಾಪುರ ಇವರು ಕೆಳದಿ ಇತಿಹಾಸದ ಸಂಶೋದನೆಗಾಗಿ PHD ಪಡೆದವರು ಮತ್ತು ಕೆಳದಿ ಇತಿಹಾಸದ ಬಗ್ಗೆ ಪುಸ್ತಕಗಳ ಬರೆದು ಪ್ರಕಟಿಸಿದ್ದಾರೆ.
   ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಇವತ್ತಿನ ಪ್ರಾರಂಭದ ಕೆಳದಿ ರಾಜರ ಇತಿಹಾಸದ ಡಿಜಿಟಲ್ ಮಾಧ್ಯಮದ ಎಪಿಸೋಡು ವೀಕ್ಷಿಸಬಹುದು
https://youtu.be/ILRfRvYJsTw?feature=shared

   ಇನ್ನೊಂದು ವಿಶೇಷ ಅಂದರೆ ಕೆಳದಿ ಮ್ಯೂಸಿಯಂ ಪ್ರಾರ೦ಬಿಸಲು ಮುಖ್ಯ ಕಾರಣ ಅಂದಿನ ಇಲಾಖಾ ಮುಖ್ಯಸ್ಥರಾದ ಮುಳುಗಿದ ದ್ವಾರಕಾ ನಗರ ಸಂಶೋಧಿಸಿದ ಎಸ್.ಆರ್.ರಾವ್.
   ಕೆಳದಿ ರಾಜರ ಇತಿಹಾಸ ಮುಗಿಯುವುದರ ಒಳಗೆ #ಡಿಜಿಟಲ್_ಮಾಧ್ಯಮದ ವೀಕ್ಷಕರ ಸಂಖ್ಯೆ 10 ಲಕ್ಷ ದಾಟಲಿ ಎಂದು ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...