Skip to main content

Blog number 2133. ಭಾಗ - 3.ಮಾಜಿ ಶಾಸಕರಾದ ಬಿ. ಸ್ವಾಮಿ ರಾವ್ ಅವರೊಡನೆ ಮಾತುಕತೆ, ಸಾಕ್ಷರತಾ ಆಂದೋಲನ 90ರ ದಶಕದಲ್ಲಿ ಯಶಸ್ವಿಗೊಳಿಸಿದ ನೆನಪುಗಳು.

#ಭಾಗ_3.

#ಹೊಸನಗರ_ವಿಧಾನಸಭಾ_ಕ್ಷೇತ್ರದ_ಮಾಜಿ_ಶಾಸಕರಾದ

#ಬಿ_ಸ್ವಾಮಿರಾವ್_ಅವರೊಡನೆ_ಮಾತುಕತೆ

#ಅವರ_ಕ್ಷೇತ್ರದಲ್ಲಿ_ಸಾಕ್ಷರತಾ_ಆಂದೋಲನದ_ಯಶಸ್ಸಿನ_ನೆನಪುಗಳು.

https://youtu.be/Y-l93xJcxJc?feature=shared

   ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ. ಸ್ವಾಮಿ ರಾವ್ ರಾಜ್ಯದ ಶಾಸಕರಲ್ಲೇ ವಿಭಿನ್ನ ನಡೆ ನುಡಿಯವರು, 2009 ರಿಂದ ಹೊಸನಗರ ವಿಧಾನ ಸಭಾ ಕ್ಷೇತ್ರವನ್ನು ಸಾಗರ - ತೀರ್ಥಹಳ್ಳಿ ಮತ್ತು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಹರಿದು ಹಂಚಿದ್ದಾರೆ.
   94 ನೇ ಹುಟ್ಟುಹಬ್ಬದ ಸಂಭ್ರಮ ಮಾಜಿ ಶಾಸಕರ ಅಭಿಮಾನಿಗಳಲ್ಲಿ ಈ ಸಂದರ್ಭದಲ್ಲೇ ಅವರ ಜೀವನ ವೃತ್ತಾಂತದ ಪುಸ್ತಕ #ನಾನು_ಹೇಳುವುದೆಲ್ಲ_ಸತ್ಯ ಬಿಡುಗಡೆ ಆಗಿದೆ.
   ಅವರ 94ರ ವಯಸ್ಸಿನಲ್ಲಿ ಅವರ ಜೀವನ ವೃತ್ತಾಂತ ಪ್ರಸ್ತಕ ಅವರೇ ನನ್ನ ಕಛೇರಿಗೆ ಬಂದು ಅವರ ಸ್ಪಯಾಕ್ಷರದ ಸಹಿ ನಮೂದಿಸಿ ನನಗೆ ನೀಡಿದ್ದು ಅವರಿಗೆ ನನ್ನ ಮೇಲಿನ ಪ್ರೀತಿಯ ದ್ಯೋತಕವಾಗಿದೆ ಇದಕ್ಕಾಗಿ ನಾನು ಅವರಿಗೆ ಅಭಾರಿ.
    ಈ ಸಂದರ್ಭದಲ್ಲಿನ ಅವರೊಡನೆ ಮಾತುಕಥೆಯ ಸಂದರ್ಶನಗಳನ್ನು ಮಾಡಿದ್ದೇನೆ ಅದರ 3 ನೇ ಭಾಗ ಇದು, ಸಾಕ್ಷರತಾ ಆಂದೋಲನ ಅವರ ಕ್ಷೇತ್ರದಲ್ಲಿ ಯಶಸ್ವಿ ಆಗಿ ನೆರವೇರಿಸಿದ ಆ ದಿನಗಳನ್ನ ಅವರು ನೆನಪು ಮಾಡಿಕೊಂಡರು.
  ಈಗ ನಮ್ಮ ಹೆಬ್ಬೆಟ್ಟಿನ ಅಚ್ಚು ರೇಷನ್ ಕಾರ್ಡ್, ಆಸ್ತಿ ನೊಂದಾವಣೆ ಕಛೇರಿಯಲ್ಲಿ ಪಿಂಗರ್ ಪ್ರಿಂಟ್ ಸ್ಕ್ಯಾನರ್ ನಲ್ಲಿ ನೀಡುವುದು ಮಾತ್ರ ಈಗಿನ ತಲೆಮಾರಿನವರಿಗೆ ಪರಿಚಿತ ಆದರೆ ಕಳೆದ 1995ನೆ ಇಸವಿ ತನಕ ಸಹಿ ಮಾಡಲು ಕೂಡ ಕಲಿಯಿದವರು ಅಸಂಖ್ಯ ಜನರಿದ್ದರು.
   ಎಲ್ಲಾ ಕಛೇರಿಗಳಲ್ಲಿ ಇಂಕ್ ಪ್ಯಾಡ್ ಇರಲೇ ಬೇಕಿತ್ತು ಅರ್ಜಿದಾರರ ಎಡಗೈ ಹೆಬ್ಬೆಟ್ಟು ಹಾಕಿಸಿ ಕೊಂಡು ನಂತರ ಅದಕ್ಕೆ LHT ಅಂದರೆ ಲೆಪ್ಟ್ ಹ್ಯಾಂಡ್ ಟೊಂಬ್ ಇಂಪ್ರೆಷನ್ ಅಟೆಸ್ಟೆಡ್ ಬೈ ಅಂತ ಬರೆದು ಅಕ್ಷರ ಕಲಿತವರ ಪರಿಚಯಸ್ಥರ ಸಹಿ ಹಾಕಿಸ ಬೇಕಾಗಿತ್ತು.
  ಆ ಕಾಲದಲ್ಲಿ ನಾನು ವಿದವಾ ವೇತನ ಮತ್ತು ವೃದ್ಧಾಪ್ಯ ವೇತನ ಪಡೆಯುತ್ತಿದ್ದ ಅನೇಕರಿಗೆ ಪೋಸ್ಟ್ ಮ್ಯಾನ್ ಅವರ ಮನಿ ಆರ್ಡರ್ ಪಾರಂಗಳಿಗೆ ಅಟೆಸ್ಟ್ ಸಹಿ ಮಾಡುತ್ತಿದ್ದೆ ಇದೆಲ್ಲ ನೆನಪು.
   90ರ ದಶಕದಲ್ಲಿ ಜನರನ್ನ ಅವರ ವಯಸ್ಸು ಪರಿಗಣಿಸದೆ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡುವ ಸರ್ಕಾರದ ಸಾಕ್ಷರತಾ ಆಂದೋಲನ ಸಾರ್ವಜನಿಕವಾಗಿ ಕನಿಷ್ಟ ತಾವು ಸಹಿ ಮಾಡದಿದ್ದರೆ ಸರ್ಕಾರದ ಸವಲತ್ತುಗಳು ಸಿಗುವುದಿಲ್ಲ ಎಂಬ ವದಂತಿ ಹರಡಲು ಕಾರಣವಾಗಿ ನೂರಕ್ಕೆ ನೂರು ಜನ ಕನ್ನಡದಲ್ಲಿ ಸಹಿ ಮಾಡಲು ಕಲಿತರು.
   ಈ ಆಂದೋಲನದಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಶಾಸಕರಾಗಿದ್ದ ಬಿ. ಸ್ವಾಮಿರಾವ್ ವಿಶೇಷ ಆಸಕ್ತಿ ವಹಿಸಿ ಯಶಸ್ವಿಗೆ ಕಾರಣರಾಗಿದ್ದರು.
    ಸಾಕ್ಷರತಾ ಆಂದೋಲನದ ಸಮಾರೋಪ ಸಮಾರಂಭದಲ್ಲಿ ಹಳ್ಳಿ ಹಳ್ಳಿಗಳಿಂದ ಗುಡಿ-ಗುಂಡಾರಗಳಿಂದ ಪಲ್ಲಕ್ಕಿಗಳಲ್ಲಿ ಜನ ಅವರ ಊರ ದೇವರ ಮೆರವಣಿಗೆ ತಂದಿದ್ದರು, ಇಂತಹ ನೂರಾರು ದೇವರ ಪಲ್ಲಕ್ಕಿಗಳಲ್ಲಿ ತಾಲ್ಲೂಕಿನ ದೇವರುಗಳ ದೊಡ್ಡ ಸಮಾವೇಶಕ್ಕೆ ಸಾಕ್ಷರತಾ ಆಂದೋಲನ ಸಾಕ್ಷಿ ಆಗಿತ್ತು, ಇದೆಲ್ಲ ಈಗ ನೆನಪು ಮಾತ್ರ ಆಗೆಲ್ಲ ಸಾಮಾಜಿಕ ಜಾಲತಾಣ ಅಥವ ಟೀವಿ ಮಾಧ್ಯಮ ಇರಲಿಲ್ಲ ಎಂದು ಸ್ವಾಮಿರಾಯರು ನೆನಪಿಸಿಕೊಂಡರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...