Skip to main content

Blog number 2153. ಕೊಡಚಾದ್ರಿ ಪ್ರವಾಸಿ ಮಂದಿರ ಉದ್ಘಾಟಿಸಿದ ಆಗಿನ ಮುಖ್ಯಮಂತ್ರಿ ಬಂಗಾರಪ್ಪನವರಿಗೆ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಬಿ.ಸ್ವಾಮಿ ರಾವ್ ಆಯೋಜಿಸಿದ್ದ ವಿಶೇಷ ಮಲೆನಾಡಿನ ಖಾದ್ಯಗಳ ಬೋಜನ

#ಸ್ವಾಮಿರಾವ್_ಮಾತುಕಥೆ_4.

#ರಾಜ್ಯದಲ್ಲೇ_ಅತ್ಯಂತ_ವಿಸ್ತಾರದ_ವಿಧಾನಸಭಾ_ಕ್ಷೇತ್ರವಾಗಿತ್ತು

#ಶಿವಮೊಗ್ಗ_ಜಿಲ್ಲೆಯ_ಹೊಸನಗರ_ವಿಧಾನಸಭಾ_ಕ್ಷೇತ್ರ

#ಈಗ_ಹೊಸನಗರ_ವಿಧಾನಸಭಾ_ಕ್ಷೇತ್ರ_ಅಸ್ತಿತ್ವದಲ್ಲಿ_ಇಲ್ಲ

#ಸಾಗರ_ತೀರ್ಥಹಳ್ಳಿ_ಶಿವಮೊಗ್ಗ_ಗ್ರಾಮಾಂತರ_ವಿಧಾನಸಭಾ_ಕ್ಷೇತ್ರದಲ್ಲಿ_ಹರಿದು_ಹಂಚಿದೆ

#ಕೊಡಚಾದ್ರಿ_ಅಮ್ಮನಘಟ್ಟಗಳು_ಈ_ಕ್ಷೇತ್ರಕ್ಕೆ_ಸೇರಿದೆ

#ಕೊಡಚಾದ್ರಿ_ಬೆಟ್ಟದ_ಪ್ರವಾಸಿ_ಮಂದಿರದ_ಉದ್ಘಾಟನೆಗೆ_ಮುಖ್ಯಮಂತ್ರಿ_ಬಂಗಾರಪ್ಪರಿಂದ

#ಅವತ್ತಿನ_ರಾತ್ರಿ_ಸ್ವಾಮಿರಾಯರು_ವ್ಯವಸ್ಥೆ_ಮಾಡಿದ_ವಿಶೇಷ_ಬೋಜನ

#ಕೊಡಚಾದ್ರಿಗೆ_ಬಂದ_ಮೊದಲ_ಹೆಲಿಕಾಪ್ಟರ್

#ಸಾಗರದಿಂದ_ಪುತ್ತೂರಾಯರ_ಹೊಸ_ಹಸಿರು_ಪಿಯೆಟ್_ಕಾರ್_ಸ್ವತಃ

#ಮುಖ್ಯಮಂತ್ರಿ_ಬಂಗಾರಪ್ಪ_ಚಾಲನೆ_ಮಾಡಿ_ಕೊಡಚಾದ್ರಿ_ತಲುಪಿದ್ದರು.

   ಒಂದು ತುದಿಯಿಂದ ಇನ್ನೊಂದು ತುದಿಗೆ 175 ಕಿ.ಮಿ. ಉದ್ದ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿದಿಸಿದ್ದ ಮಾಜಿ ಶಾಸಕರಾದ ಬಿ. ಸ್ವಾಮಿ ರಾವ್ ತಮ್ಮ 94 ಹುಟ್ಟು ಹಬ್ಬದ ಸಂದರ್ಭದಲ್ಲಿ ಅವತ್ತಿನ ದಿನಗಳ ನೆನಪಿಸಿ ಕೊಂಡಿದ್ದಾರೆ.
   ಕೊಡಚಾದ್ರಿ ಬೆಟ್ಟದಲ್ಲಿ ಹೊಸ ಅತಿಥಿ ಗೃಹ ನಿರ್ಮಿಸಿ ಅದರ ಉದ್ಘಾಟನೆಗೆ ಆಗಿನ ಮುಖ್ಯಮಂತ್ರಿ ಬಂಗಾರಪ್ಪನವರನ್ನ ಕರೆತಂದಿದ್ದರು.
   ಕೊಡಚ್ಚಾದ್ರಿ ಬೆಟ್ಟಕ್ಕೆ ಬಂದ ಮೊದಲ ಹೆಲಿಕಾಪ್ಟರ್ ಅದು ಅವತ್ತು ಬಂಗಾರಪ್ಪರ ಹೆಲಿಕಾಪ್ಟರ್ ಸಾಗರದಲ್ಲಿ ಲ್ಯಾಂಡ್ ಆಗಿತ್ತು ಸಾಗರದಲ್ಲಿ ಅವರ ಸಂಬಂದಿ ಕೆ.ಜಿ.ಶಿವಪ್ಪರ ಮನಯಲ್ಲಿ ಸ್ವಲ್ಪ ಕಾಲ ವಿಶ್ರಾಂತಿಗೆ ವಿರಮಿಸಿ ನಂತರ ಪುತ್ತೂರಾಯರ ಹೊಸದಾದ ಹಸಿರು ಬಣ್ಣದ ಪಿಯೆಟ್ ಕಾರ್ ಸ್ವತಃ ಮುಖ್ಯಮಂತ್ರಿ ಬಂಗಾರಪ್ಪನವರೇ ಚಾಲನೆ ಮಾಡಿಕೊಂಡು ಕೊಡಚಾದ್ರಿ ಬೆಟ್ಟದ ತುದಿ ತಡ ರಾತ್ರಿ ತಲುಪಿದ್ದರು ಅವರ ಜೊತೆ ಅವರ ಅತ್ಯಾಪ್ತ ಗೆಳೆಯ ಮೈಸೂರಿನ ಫೋತರಾಜ್ ಇದ್ದರು.
   ಕೊಡಚಾದ್ರಿ ಬೆಟ್ಟದಲ್ಲಿ ನಾಡಿನ ಮುಖ್ಯಮಂತ್ರಿಗೆ ಅವತ್ತಿನ ರಾತ್ರಿಯ ವಿಶೇಷ ಬೋಜನ ಆ ಕ್ಷೇತ್ರದ ಶಾಸಕರಾಗಿದ್ದ ಸ್ವಾಮಿ ರಾವ್ ವ್ಯವಸ್ಥೆ ಮಾಡಿದ್ದರು ಏನೇನು ವಿಶೇಷ ಅಪರೂಪದ ಊಟ ಎಂಬುದು ಅವರ ಬಾಯಿಯಲ್ಲೇ ಕೇಳಿ.
  ಮರು ಬೆಳಿಗ್ಗೆ ಸಾಗರದಿಂದ ಬಂದು ಕೊಡಚಾದ್ರಿಯಲ್ಲಿ ಇಳಿದ ಹೆಲಿಕಾಪ್ಟರ್ ನಲ್ಲಿ ಪ್ರವಾಸಿ ಮುಂದಿರ ಉದ್ಘಾಟಿಸಿ ಬಂಗಾರಪ್ಪನವರು ಬೆಂಗಳೂರು ತಲುಪಿದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...