Skip to main content

Blog number 2154. ನಾಡಿನ ಪ್ರಖ್ಯಾತ ಪುಣ್ಯ ಕ್ಷೇತ್ರ ಸಿಗಂದೂರು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಪರೋಪಕಾರಿ ರಾಜಣ್ಣ ಜೈನ್ ಅವ್ಯವಹಾರ ಬಯಲಿಗೆ ತಂದಿದ್ದರಿಂದ ಅವರನ್ನ ಜೈಲಿಗೆ ಕಳಿಸಿದ್ದ ಕರೂರು ಬಾರಂಗಿ ಹೋಬಳಿಯ 2013 ರ ಸತ್ಯಕಥೆ ನಂತರ ಅವ್ಯವಹಾರ ಮಾಡಿದ ನಿವೃತ್ತ ಭಾರತೀಯ ಸೇನೆಯ ಯೋದ ಅಮಾನತ್ತಾದರು.

#ತುಮರಿ_ಗ್ರಾಮಪಂಚಾಯತ್_ರಾಜ್ಯದ_ಪ್ರಸಿದ್ದ_ಸಿಗಂದೂರು_ಕ್ಷೇತ್ರ

#ಇಲ್ಲಿನ_ಗ್ರಾಮಪಂಚಾಯಿತಿ_ಸದಸ್ಯರಾಗಿದ್ದ

#ಸಾಲೆಕೊಪ್ಪ ರಾಜಣ್ಣ_ಜೈನ್_ಪರೋಪಕಾರಿ_ಶುದ್ಧಹಸ್ತ

#ಅವರ_ಪಂಚಾಯಿತಿ_ಅವ್ಯವಹಾರ_ಬಯಲು_ಮಾಡಿದ್ದರಿಂದ

#ಅವರನ್ನ_ಜೈಲಿಗೆ_ಕಳಿಸಲಾಗಿತ್ತು

#ಇದನ್ನ_ಪ್ರತಿಭಟಿಸಿ_ತುಮರಿಯಲ್ಲಿ_ಪ್ರತಿಭಟನಾ_ಸಭೆ_ನಡೆಸಿದ್ದೆವು

#ಪಿಡಿಓ_ನಿವೃತ್ತ_ಯೋದ_ಅಮಾನತ್ತು_ಆಗಿ_ಸುಖಾಂತ್ಯ_ಆಯಿತು.


   ಒಂದು ಕಾಲದಲ್ಲಿ ಶರಾವತಿ ಹಿನ್ನೀರಿನ ಪ್ರದೇಶ ಕರಾರು ಬಾರಂಗಿ ಹೋಬಳಿ ರಿಪಬ್ಲಿಕ್ ಎಂದೇ ಕರೆಯಬಹುದಾದ ಪ್ರದೇಶ ಆಗಿತ್ತು ಅಲ್ಲಿಗೆ ಬರುವ ಅನುದಾನಗಳು ಲೂಟಿ ಕೋರರ ಖಜಾನೆಗೆ ಸೇರುತ್ತಿತ್ತು ಮತ್ತು ಅದಕ್ಕೆ ಸಾಗರದ ಆಡಳಿತರೂಡರ ಮೊಹರು ಬೀಳುತ್ತಿತ್ತು.
  ವಿರೋಧಿಸಿದರೆ ಸುಳ್ಳು ಕೇಸಿನಲ್ಲಿ ಜೈಲು ಗ್ಯಾರಂಟಿ ಇಂತಹದೇ ಪ್ರಸಂಗ 2012ರಲ್ಲಿ ತುಮರಿ ಗ್ರಾಮ ಪಂಚಾಯಿತಿ ಸದಸ್ಯ ಸಾಲೆಕೊಪ್ಪ  ರಾಜಣ್ಣ ಜೈನ್ ಅವರ ಜೀವನದಲ್ಲಿ ನಡೆದ ಘಟನೆ ಇಲ್ಲಿ ನಮೂದಿಸಿದ್ದೇನೆ.
  ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿ ನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಸಿಗಂದೂರು ದೇವಸ್ಥಾನದ ತನಕ ಇದೆ ಈ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಆಗಿದ್ದವರು ತುಮರಿಯ ಸಮಾಜ ಸೇವಕ ಜೈನ ಧರ್ಮದ ಸಾಲೆಕೊಪ್ಪ ರಾಜಣ್ಣ ಜೈನ್ ಇವರು ತುಮರಿ ಯಲ್ಲಿ ಯಾರಿಗಾದರು ಆರೋಗ್ಯ ಏರುಪೇರಾದರೆ ತಮ್ಮ ವಾಹನದಲ್ಲಿ ಸಾಗರ ಆಸ್ಪತ್ರೆಗೆ ಸೇರುಸುವುದರಿಂದ ತುಮರಿ ಸರ್ಕಲ್ ನಲ್ಲಿ ನಾಯಿ ಸತ್ತು ಬಿದ್ದರೂ ಅದರ ವಿಲೇವಾರಿ ಮಾಡುವ ಪರೋಪಕಾರಿ ರಾಜಣ್ಣ ಜೈನರು.
  ತುಮರಿ ಗ್ರಾಮ ಪಂಚಾಯಿತಿ ಪಿಡಿಓ ನಿವೃತ್ತ ಯೋದರೊಬ್ಬರು ಬಂದಾಗ ಸಂಭ್ರಮಿಸಿದವರಲ್ಲಿ ಗ್ರಾ.ಪಂ. ಸದಸ್ಯರಾದ ರಾಜಣ್ಣ ಜೈನರು ಮೊದಲಿಗರು ಆದರೆ ನಂತರ ನಡೆದದ್ದು ತುಮರಿ ರಿಪಬ್ಲಿಕ್, ಸರ್ಕಾರದ ಅನುದಾನಗಳ ಲೂಟಿ ಇದನ್ನು ಪ್ರತಿಭಟಿಸಿದ ಗ್ರಾ. ಪಂ. ಸದಸ್ಯರಾದ ರಾಜಣ್ಣ ಜೈನರನ್ನೆ ಜೈಲಿಗೆ ಕಳಿಸಿದ ಪಿ. ಡಿ. ಓ ವಿರುದ್ದ ನನ್ನ ಹೋರಾಟ ನಡೆಯಿತು.
  ಜೈಲಲ್ಲಿ ಸಾಲೆಕೊಪ್ಪ ರಾಜಣ್ಣ ಜೈನರ ಬೇಟಿ ಮಾಡಿ ದೈರ್ಯ ನೀಡಿದೆ ನಂತರ ತುಮರಿ ಯಲ್ಲಿ ಪ್ರತಿಭಟನಾ ಸಭೆ ನಡೆಸಿದೆವು ಅಲ್ಲಿ ಜಿ.ಟಿ. ಸತ್ಯನಾರಾಯಣರ ತಂದೆ ತಿಮ್ಮಣ್ಣ (ಅಪ್ಪಯ್ಯ ಆತ್ಮಚರಿತ್ರೆ ಕಥಾನಾಯಕರು) ನಮ್ಮ ಜೊತೆ ಭಾಗಿಯಾಗಿದ್ದರು ನಂತರ ಭಾರತೀಯ ಸೈನ್ಯದಲ್ಲಿ ಯೋದನಾಗಿ ತುಮರಿ ಗ್ರಾ.ಪಂ. ಪಿಡಿಓ ಅವ್ಯವಹಾರ ಸಾಬೀತಾಗಿ ಅಮಾನತ್ತಾದರು.
  ಇದೆಲ್ಲ ಇವತ್ತು ನೆನಪುಗಳು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...