Skip to main content

Blog number 2166. ಆನಂದಪುರಂ ಶ್ರೀಮತಿ ಕನಕಮ್ಮಳ್ ಆಸ್ಪತ್ರೆಗೆ ಪ್ರಥಮ ಕ್ಷ-ಕಿರಣ ಯಂತ್ರ ಜಿಲ್ಲಾ ಪಂಚಾಯತ್ ನಿಂದ ಮಂಜೂರು ಮಾಡಿಸಿ ಶಿವಮೊಗ್ಗ ಲೋಕಸಭಾ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಿಂದ ಉದ್ಘಾಟನೆ ಮಾಡಿಸಿದ ನನ್ನ ಸಾದನೆಯ ನೆನಪು

#ಲೋಕಸಭಾ_ಸದಸ್ಯರಾಗಿದ್ದ_ಬಂಗಾರಪ್ಪರಿಂದಲೇ_ಕ್ಷ_ಕಿರಣ_ಯಂತ್ರ

#ಉದ್ಘಾಟನೆ_ಮಾಡಿಸ_ಬೇಕೆಂಬ_ನನ್ನ_ಶಪತ

#ದಿನಾಂಕ_19_ಆಗಸ್ಟ್_1996ರಂದು_ಕಾರ್ಯರೂಪಕ್ಕೆ

#ಇದು_ಆನಂದಪುರಂ_ಕನಕಮ್ಮಳ್_ಆಸ್ಪತ್ರೆ_ಇತಿಹಾಸದ_ಮೊದಲ_ಕ್ಷಕಿರಣ_ಯಂತ್ರ

#ಸಾಗರ_ತಾಲ್ಲೂಕಿನ_ಕೃಷಿ_ಇಲಾಖೆಯ_ಕೋಟ್ಯಾಂತರ_ರೂಪಯಿ

#ಅವ್ಯವಹಾರ_ಬಯಲು_ಮಾಡಿ_ಆಗಿನ_ಕೃಷಿ_ಮಂತ್ರಿ_ಬೈರೇಗೌಡರಿಂದ

#ತನಿಖೆ_ಮಾಡಿಸಿ_7ಜನ_ಕೃಷಿ_ಇಲಾಖೆ_ಅಧಿಕಾರಿಗಳ_ಜೈಲಿಗೆ_ಕಳಿಸಿದ್ದರಿಂದ

#ಜಿಲ್ಲಾ_ಪಂಚಾಯಿತಿ_ಸದಸ್ಯನಾದ_ನಾನು_ಮತ್ತು_ತಾಲೂಕು_ಪಂಚಾಯಿತಿ

#ಅಧ್ಯಕ್ಷ_ಬೀಮನೇರಿ_ಶಿವಪ್ಪರನ್ನ_ಕಾಗೋಡು_ಬಣ_ದೂರ_ಇಟ್ಟಿದ್ದ_ಕಾಲವದು.


19 ಆಗಸ್ಟ್ 1996ರಂದು ನಮಗೆಲ್ಲ ಸಂಭ್ರಮದ ದಿನವಾಗಿತ್ತು ಕಾರಣ ಅವತ್ತು ಆನಂದಪುರಂನ ಶ್ರೀಮತಿ ಕನಕಮ್ಮಳ್ ಆಸ್ಪತ್ರೆಗೆ ಕ್ಷ-ಕಿರಣ ಯಂತ್ರ ಉದ್ಘಾಟನೆ ಮಾಜಿ ಮುಖ್ಯಮಂತ್ರಿಗಳು ಮತ್ತು ಶಿವಮೊಗ್ಗ ಲೋಕ ಸಭಾ ಸದಸ್ಯರಾಗಿದ್ದ ಬಂಗಾರಪ್ಪನವರಿಂದ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದೆ.
   ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ನಾನು ಈ ಆಸ್ಪತ್ರೆ ಅಭಿವೃದ್ದಿ ಸಮಿತಿ ಅಧ್ಯಕ್ಷನೂ ಆಗಿರುವುದರಿಂದ ಈ ಆಸ್ಪತ್ರೆಯಲ್ಲಿ ಎಕ್ಸ್ ರೇ ಯಂತ್ರ ಇಲ್ಲದ್ದರಿಂದ ಸ್ಥಳಿಯರಿಗೆ ಸಣ್ಣ ಪುಟ್ಟ ಮೂಳೆ ಮುರಿತವಾದರೆ ಸಾಗರ ಅಥವ ಶಿವಮೊಗ್ಗಕ್ಕೆ ಎಕ್ಸರೇ ತೆಗೆಸಲು ಹೋಗಬೇಕಾಗಿತ್ತು.
   ಆನಂದಪುರಂನ ಆಸ್ಪತ್ರೆ ವೈದ್ಯರು ಎಕ್ಸರೇ ಯಂತ್ರ ಇದ್ದಿದ್ದರೆ ನಾವೇ ಮೂಳೆ ಮುರಿತಕ್ಕೆ ಬ್ಯಾಂಡೇಜು ಮಾಡಿ ಚಿಕಿತ್ಸೆ ನೀಡುವುದಾಗಿ ಹೇಳುತ್ತಿದ್ದರಿಂದ ನನಗೆ ನಮ್ಮ ಊರ ಆಸ್ಪತ್ರೆಗೆ ಎಕ್ಸ್ ರೇ ಯಂತ್ರ ಶಿವಮೊಗ್ಗ ಜಿಲ್ಲಾ ಪಂಚಾಯತ್ ನಿಂದ ಮಂಜೂರು ಮಾಡಿಸಲು ಪ್ರಯತ್ನಿಸಿದೆ.
  ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಲ್ಲಿಯವರೆಗೆ ಜಿಲ್ಲೆಯ ಯಾವುದೇ ಆಸ್ಪತ್ರೆಗೆ ಎಕ್ಸ್ ರೇ ಯಂತ್ರ ಖರೀದಿಸಿರಲಿಲ್ಲ ಮತ್ತು ಆನಂದಪುರಂ ಆಸ್ಪತ್ರೆ ಇತಿಹಾಸದಲ್ಲಿ ಇದು ಮೊದಲ ಎಕ್ಸರೇ ಯಂತ್ರ ಅಂತ ಸಿಬ್ಬಂದಿಗಳು ತಿಳಿಸಿದ್ದರು.
   ಅವತ್ತಿನ ಬೆಲೆ ಅದಕ್ಕೆ 11 ಲಕ್ಷ ರೂಪಾಯಿ ಆಗಿತ್ತು ಆಗಿನ 1995ರ ಜಿಲ್ಲಾ ಪಂಚಾಯತ್ ನಲ್ಲಿ ಈಗಿನಷ್ಟು ಅನುದಾನ ಇಲ್ಲದ ಕಾಲದಲ್ಲಿ ಅಧಿಕಾರಸ್ಥರನ್ನೆಲ್ಲ ಒಪ್ಪಿಸಿ ಎಕ್ಸ್ ರೇ ಯಂತ್ರ ಆನಂದಪುರಂ ಕನಕಮ್ಮಳ್ ಆಸ್ಪತ್ರೆ ತಲುಪಿತು.
  ಈ ಆಸ್ಪತ್ರೆ ವಿದ್ಯಾಮಂತ್ರಿ ಮತ್ತು ಸಂಸದರೂ ಆಗಿದ್ದ ಎ.ಆರ್. ಬದರಿ ನಾರಾಯಣ ಅಯ್ಯಂಗಾರ್ ಅವರ ತಾಯಿ ಶ್ರೀಮತಿ ಕನಕಮ್ಮಾಳ್ ಸ್ಮರಣಾರ್ಥ ಅವರ ಹೆಸರಲ್ಲಿ ಅವರ ತಂದೆ ಕೊಡುಗೈ ದಾನಿ ರಾಮಕೃಷ್ಣ ಅಯ್ಯಂಗಾರರು ಆನಂದಪುರಂ ನಿವಾಸಿಗಳಿಗೆ ಅವರ ಸ್ವಂತ ಆರು ಎಕರೆ ಜಾಗದಲ್ಲಿ ನಿರ್ಮಿಸಿಕೊಟ್ಟ ಆಸ್ಪತ್ರೆ.
  ನಾವೆಲ್ಲ ಯುವ ಜನಪ್ರತಿನಿದಿಗಳು ಬಂಗಾರಪ್ಪರನ್ನ ಸ್ಟಾರ್ ಐಕಾನ್ ಆಗಿ ಸ್ವೀಕರಿಸಿದ್ದರಿಂದ ಆ ವರ್ಷ ನಡೆದ ಲೋಕ ಸಭಾ ಚುನಾವಣೆಯಲ್ಲಿ ಬಂಗಾರಪ್ಪರ ಪರ ಕ್ಯಾಂಪೇನ್ ಮಾಡಿದ್ದೆವು ಆದ್ದರಿಂದ ನಮ್ಮ ಪ್ರೀತಿಯ ಲೋಕಸಭಾ ಸದಸ್ಯರಾದ ಬಂಗಾರಪ್ಪರಿಂದಲೇ ಎಕ್ಸರೇ ಯಂತ್ರ ಉದ್ಫಾಟನೆ ನಿಗದಿ ಮಾಡಿದ್ದೆ.
  ಪ್ರೋಟೋ ಕಾಲ್ ಪ್ರಕಾರ ಸಾಗರದ ಶಾಸಕರಾದ ಬಂಗಾರಪ್ಪರ ಪಾಳೆಯಕ್ಕೆ ಜಿಗಿಯುವ ಮುನ್ನ ನನ್ನ ಹಳೆಯ ರಾಜಕೀಯ ನೇತಾರರಾದ ಕಾಗೋಡು ತಿಮ್ಮಪ್ಪ ಮತ್ತು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ತಿಪ್ಪಾ ನಾಯಕ್, ಸಾಗರ ತಾಲೂಕು ಪಂಚಾಯತ್ ಅಧ್ಯಕ್ಷ ಭೀಮನೇರಿ ಶಿವಪ್ಪ ಭಾಗವಹಿಸಿದ್ದರು.
  ಸಾಗರ ತಾಲೂಕಿನಲ್ಲಿ ನಡೆದ ಕೃಷಿ ಇಲಾಖೆಯ  ಕೋಟ್ಯಾಂತರ ರೂಪಾಯಿ ಹಗರಣ ಆಗಿನ ಕೃಷಿ ಸಚಿವ ಬೈರೇಗೌಡರನ್ನ ಕರೆತಂದು ಏಳು ಜನ ಕೃಷಿ ಅಧಿಕಾರಿಗಳನ್ನ ಜೈಲಿಗೆ ಕಳಿಸಿದ್ದರಿಂದ ಸಾಗರ ತಾಲೂಕಿನ ಮುಖಂಡರುಗಳು ನನಗೆ ಮತ್ತು ಬೀಮನೇರಿ ಶಿವಪ್ಪನರನ್ನ ಬ್ಲಾಕ್ ಲೀಸ್ಟ್ ಗೆ ಸೇರಿಸಿದ್ದ ಕಾಲವದು.
  ಆ ನಂತರ ಆನಂದಪುರಂ ಆಸ್ಪತ್ರೆಯಲ್ಲಿ ಮೂಳೆ ಮುರಿದವರಿಗೆ ಎಕ್ಸ್ ರೇ ತೆಗೆದು ಬ್ಯಾಂಡೇಜು ಹಾಕುವ ಚಿಕಿತ್ಸೆ ಆರೋಗ್ಯ ಸಿಬ್ಬಂದಿ ಮುಂದುವರಿಸಿದ್ದರು.
  ಈಗ ಆ ಯಂತ್ರ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ಈ ಹಳೆಯ ಪೋಟೋಗಳು ಆದಿನದ ನೆನಪು ಮಾಡಿಕೊಳ್ಳುವಂತೆ ಮಾಡಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ