Skip to main content

Blog number 2176. ದೇಶದ ಅತ್ಯಂತ ಎತ್ತರದ ಜಲಪಾತ ಕುಂಚಿಕಲ್ ಪಾಲ್ಸ್ ಬಗ್ಗೆ ಖ್ಯಾತ ಲೇಖಕ ಮುಷ್ತಾಕ್ ಹೆನ್ನಾ ಬೈಲು ಕೆಲವು ನೆನಪು ಹಂಚಿದ್ದಾರೆ

#ಮುಷ್ತಾಕ್_ಹೆನ್ನಾಬೈಲು_ಖ್ಯಾತ_ಲೇಖಕರು

#ಈ_ಜಲಪಾತದ_ಸಮೀಪದಲ್ಲಿ_ಅವರ_ಬಾಲ್ಯ

#ಅವರ_ತಂದೆ_ಅರಣ್ಯ_ಇಲಾಖೆಯ_ನೌಕರಿಯಲ್ಲಿದ್ದರು

#ಮಗ_ಮುಷ್ತಾಕ್_ಮತ್ತು_ಅವರ_ಗೆಳೆಯರು

#ಕುಂಚಿಕಲ್_ವಾಲ್ಸ್_ನೋಡಲು_ಹೋಗುತ್ತಾರೆಂಬ_ಆತಂಕ_ಅವರಿಗೆ

#ಈ_ಜಲಪಾತ_ನಮ್ಮ_ದೇಶದ_ಅತ್ಯಂತ_ಎತ್ತರದ_ಜಲಪಾತ

#ಮತ್ತು_ಅಪಾಯಕಾರಿ_ಸ್ಥಳದ_ಜಲಪಾತ

#ಇವತ್ತು_ಮುಷ್ತಾಕ್_ಹೆನ್ನಾಬೈಲು_ಈ_ಬಗ್ಗೆ_ಕೆಲ_ನೆನಪು_ಹಂಚಿದ್ದಾರೆ
   ಗ್ರಾಮೀಣ ಜನರು ಈ ಫಾಲ್ಸ್ ಅನ್ನು ಕುಂಚಿಕಲಬ್ಬಿ ಫಾಲ್ಸ್ ಅಂತ ಕರೆಯುತ್ತಾರೆ, ವಾರಾಹಿ ನದಿಯ ನೀರನ್ನು ಹೊಸಂಗಡಿ ಪವರ್ ಹೌಸ್ ಗೆ 1988 ರಲ್ಲಿ ಆರಂಭವಾದ ವಾರಾಹಿ ಭೂಗರ್ಭ ವಿದ್ಯುದಾಗಾರಕ್ಕೆ ತಿರುಗಿಸಿ ದಿಕ್ಕು ಬದಲಿಸಲಾಗಿತ್ತು. 
  ವಾರಾಹಿ ನದಿಯ ಅರ್ಧಕ್ಕಿಂತಲೂ ಹೆಚ್ಚಿನ ನೀರು ಈ ಪವರ್ ಪ್ರಾಜೆಕ್ಟ್ ಗೆ ಹೋಗುತ್ತದೆ,ಈಗ ಅಲ್ಲಿಂದ ಧುಮುಕುವ ನೀರಿನ ಪ್ರಮಾಣ ಆ ಕಾಲಕ್ಕೆ ಹೋಲಿಸಿದರೆ ಕೇವಲ 30 ರಿಂದ 40% ಅಷ್ಟೇ. 
    ವಾರಾಹಿ ನದಿಯ ಸಂಪೂರ್ಣ ನೀರು ಪೂರ್ಣ ಪ್ರಮಾಣದಲ್ಲಿ ಈ ಫಾಲ್ಸ್ ಮೂಲಕ ಧುಮುಕುತ್ತಿದ್ದ ಕಾಲದಲ್ಲಿ ಸುತ್ತಮುತ್ತಲಿನ 25 ರಿಂದ 30 ಕಿಲೋಮೀಟರ್ ದೂರದ ಹಳ್ಳಿಗಳಿಗೆ ಈ ಜಲಪಾತದಲ್ಲಿ ನೀರು ಧುಮುಕುವ ಶಬ್ದ ಕೇಳುತ್ತಿತ್ತು. 
    88ನೇ ಇಸ್ವಿಯಲ್ಲಿ ಪವರ್ ಪ್ರಾಜೆಕ್ಟ್ ಗೆ ನೀರು ತಿರುಗಿಸಿ ಪ್ರಮಾಣ ಕಡಿಮೆಯಾದಾಗ  ಏಕಾಏಕಿ ನೀರು ಧುಮುಕುವ ಶಬ್ದ ನಿಂತಾಗ ಸುತ್ತಲಿನ ನದಿ ತೀರಕ್ಕಿಂತ ದೂರ ವಾಸಿಸುವ ಬಹುತೇಕ ಹಳ್ಳಿಗಳವರು ವಾರಾಹಿ ನದಿ ಬತ್ತಿ ಹೋಗಿದೆ ಎಂದೇ ಭಾವಿಸಿಕೊಂಡಿದ್ದರು. 
   ಅಜ್ಜ ಮುತ್ತಾತನ ಕಾಲದಿಂದಲೂ ಧುಮುಕುತ್ತಿದ್ದ ನೀರು ಒಮ್ಮೆಗೆ ನಿಂತು ಹೋಗಿದ್ದು ಪ್ರಳಯಕಾಲದ ಮುನ್ಸೂಚನೆ ಎಂದೇ ಬಹಳಷ್ಟು ಜನ ಭಾವಿಸಿದ್ದರು. 
  ಈ ತಪ್ಪು ಗ್ರಹಿಕೆಗೆ ಕಾರಣವಾಗಿದ್ದು ಪವರ್ ಪ್ರಾಜೆಕ್ಟ್ ಗೆ ನೀರು ತಿರುಗಿಸಿದ್ದು ಗೊತ್ತಾಗದ ಕಾರಣಕ್ಕೆ,ಈ ಫಾಲ್ಸ್ ಗೆ ಸಂಬಂದ ಪಟ್ಟಂತೆ ಬಹಳಷ್ಟು ರೋಚಕ ವಿಷಯಗಳಿವೆ.. ಸರ್ 🙏🏻

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...