Skip to main content

Blog number 2177. ಕೆಳದಿ ರಾಜರ ಎರಡನೆ ರಾಜದಾನಿ ಇಕ್ಕೇರಿ ಕೋಟೆಯಲ್ಲಿ

#ಸರ್ಕಾರದ_ಪ್ರಾಯೋಜತ್ವದ_ಇತಿಹಾಸ_ಸಂಶೋದನೆಗೂ

#ಹವ್ಯಾಸಿ_ಇತಿಹಾಸ_ಸಂಶೋಧಕರ_ಸಂಶೋದನೆಗೂ_ಎಷ್ಟು_ಅಜಗಜಾಂತರ

#ಡಿಜಿಟಲ್_ಮಾಧ್ಯಮದಲ್ಲಿ_ಇಕ್ಕೇರಿ_ಇತಿಹಾಸ_ವಿವರಿಸುತ್ತಿರುವ_ಹೆಚ್_ಕೆ_ಗಣಪತಿ

#ನಿಜಕ್ಕೂ_ಗ್ರೇಟ್_ಅವರು_ಉಪನ್ಯಾಸಕರಾಗಿ_ನಿವೃತ್ತರಾಗಿದ್ದಾರೆ

#ತಮ್ಮ_70ನೇ_ವಯಸ್ಸಿನಲ್ಲಿ_ತಮ್ಮ_ಊರಿನ_ಕೋಟೆ_ದೇವಾಲಯ_ತೋರಿಸುತ್ತಾ

#ಅದರ_ಇತಿಹಾಸ_ಜನಪದ_ಕಥೆಗಳನ್ನು_ಸ್ವಾರಸ್ಯವಾಗಿ_ವಿವರಿಸುತ್ತಿದ್ದಾರೆ

#ನಮ್ಮ_ಜಿಲ್ಲೆಯ_ಕೆಳದಿ_ರಾಜವಂಶಸ್ಥರ_ಇತಿಹಾಸ_ದೃಶ್ಯ_ಮಾಧ್ಯಮದಲ್ಲಿ_ಮುಂದಿನ_ತಲೆಮಾರಿಗೆ

https://youtu.be/DStYp8fXbt4?feature=shared

#ಸಾಗರ_ತಾಲ್ಲೂಕಿನವರು_ತಪ್ಪದೇ_ವೀಕ್ಷಿಸಿ 
      #ಇಕ್ಕೇರಿ_ಕೋಟೆ_ಇತಿಹಾಸ

   ಸರ್ಕಾರದ ಇತಿಹಾಸ ಸಂಶೋಧನಾ ಸಂಸ್ಥೆಗಳ ಕೆಲಸಕ್ಕೂ ಹವ್ಯಾಸಿ ಇತಿಹಾಸ ಸಂಶೋಧಕರ ಕೆಲಸಕ್ಕೂ ಎಷ್ಟು ವ್ಯತ್ಯಾಸ ನೋಡಿ.....
  ಇಕ್ಕೇರಿ ಕೆಳದಿರಾಜರ ಎರಡನೇ ರಾಜಧಾನಿ ಅಲ್ಲಿ ಕೆಳದಿರಾಜರ ಬೃಹತ್ ಕೋಟೆ ಮತ್ತು ಅರಮನೆ ನಿರ್ಮಿಸಲಾಗಿತ್ತು.
 ಅಲ್ಲಿ ಇತಿಹಾಸ ಪ್ರಸಿದ್ಧ ಅಘೋರೇಶ್ವರ ದೇವಸ್ಥಾನ ನಿರ್ಮಿಸಲಾಗಿದೆ.
  ಇಕ್ಕೇರಿಯ ಕೋಟೆ ಮತ್ತು ಅಘೋರೇಶ್ವರ ದೇವಸ್ಥಾನದ ಶಂಕುಸ್ಥಾಪನೆಯನ್ನು ಸ್ವತಃ ವಿಜಯನಗರದ ಚಕ್ರವರ್ತಿ ಕೃಷ್ಣದೇವರಾಯರು ನೆರವೇರಿಸಿದ್ದರು ಎಂಬುದು ವಿಶೇಷ.
   ರಾಜ್ಯದ ಖ್ಯಾತ #ಡಿಜಿಟಲ್_ಮಾಧ್ಯಮ ಕರ್ನಾಟಕದ ಇತಿಹಾಸವನ್ನು ದೃಶ್ಯ ಮಾಧ್ಯಮದ ಮೂಲಕ ಮುಂದಿನ ತಲೆಮಾರಿಗೆ ತಲುಪಿಸುವ ವಿಶೇಷ ಕೆಲಸವನ್ನು ಮಾಡುತ್ತಿದೆ.
   ಇಕ್ಕೇರಿಯ ಅಘೋರೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಕೋಟೆಯನ್ನು ಈ ಚಾನಲ್ ನಲ್ಲಿ ವೀಕ್ಷಕರಿಗೆ ಅರ್ಥವತ್ತಾಗಿ ವಿವರಿಸುತ್ತಿರುವವರು ಸ್ಥಳೀಯ ಇತಿಹಾಸ ಸಂಶೋಧಕರು, ನಿವೃತ್ತ ಉಪನ್ಯಾಸಕರು ಆದ ಎಪ್ಪತ್ತು ವರ್ಷ ವಯೋಮಾನದ ಕಾಳೇ ಮನೆತನದ ಹೆಚ್‌.ಕೆ.ಗಣಪತಿ.
 ಸಾಗರ ತಾಲೂಕಿನವರೇ ಆದ ನಾವುಗಳು ಇಕ್ಕೇರಿ ಕೋಟೆಯನ್ನು ನೋಡಿದ್ದು ಕೆಲವೇ ಕೆಲವರು ಮಾತ್ರ.     
   ಸುಮ್ಮನೆ ಕೋಟೆಯನ್ನು ನೋಡಿದರೆ ಯಾವ ಪ್ರಯೋಜನವೂ ಇಲ್ಲ ಅದು ಶಿಥಿಲವಾದ ಪಾಳು ಕೋಟೆ ಅಷ್ಟೆ ಅದರ ಇತಿಹಾಸ ಗೊತ್ತಾಗುವುದಿಲ್ಲ.    
    ಡಿಜಿಟಲ್ ಮಾಧ್ಯಮದ ಕ್ಯಾಮರಾ ಕಣ್ಣಿನಲ್ಲಿ - ಎಚ್. ಕೆ.ಗಣಪತಿಯವರ ಧ್ವನಿಯಲ್ಲಿ ಕೆಳದಿ ಇತಿಹಾಸದ ಎರಡನೇ ರಾಜಧಾನಿ ಇಕ್ಕೇರಿ ಇತಿಹಾಸ ಸುಂದರವಾಗಿ ನಿರೂಪಸಲ್ಪಡುತ್ತಿದೆ.
  ಇಕ್ಕೇರಿ ಕೋಟೆಯಲ್ಲಿ ನೀರಿಗಾಗಿ ಇರುವ ಜಂಬಿಟ್ಟಿಗೆ ಕಲ್ಲಿಂದ ನಿರ್ಮಿಸಿರುವ ಸುರಂಗ ಮಾರ್ಗವನ್ನು  ಅವರು ತುಂಬಾ ಅದ್ಭುತವಾಗಿ ವಿವರಿಸಿದ್ದಾರೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...