Skip to main content

Blog number 2184.ಶಿವಮೊಗ್ಗ ಜಿಲ್ಲೆಯ ಉದಯೋನ್ಮುಖ ಇತಿಹಾಸ ಸಂಶೋದಕ ಅಂಬಯ್ಯ ಮಠ್ ಕೆಳದಿ ಅರಸರ ಮೂರನೇ ರಾಜದಾನಿ ಬಿದನೂರು ನಗರದ ವಿವರಣೆ ರಾಜ್ಯದ ಖ್ಯಾತ ಡಿಜಿಟಲ್ ಮಾಧ್ಯಮದಲ್ಲಿ ನೀಡುತ್ತಿದ್ದಾರೆ.

#ಅಂಬ್ರಯ್ಯ_ಮಠ

#ಶಿವಮೊಗ್ಗ_ಜಿಲ್ಲೆಯ_ಉದಯೋನ್ಮುಖ_ಇತಿಹಾಸ_ಸಂಶೋದಕರು

#ಕೆಳದಿ_ಅರಸರ_ಮೂರನೆ_ರಾಜದಾನಿ

#ಬಿದನೂರು_ನಗರದ_ಇತಿಹಾಸ_ವಿವರಿಸುತ್ತಿದ್ದಾರೆ

#ಖ್ಯಾತ_ಡಿಜಿಟಲ್_ಮಾಧ್ಯಮದಲ್ಲಿ_ಇವತ್ತಿನಿಂದ.

#ಮೊದಲು_ಹೊಸಂಗಡಿಯ_ಹೊನ್ನೆ_ಕಂಬಳಿ_ಅರಸರ_ಕೋಟೆ

#ರಾಣಿ_ಅಮ್ಮಿದೇವಮ್ಮ_ಕೆಳದಿ_ರಾಜ_ವೆಂಕಟಪ್ಪ_ನಾಯಕರ_ಸಹಾಯ_ಕೇಳಿ

#ಕೋಟೆ_ಕಳೆದು_ಕೊಂಡ_ಕಥೆ

#ಕೆಳದಿ_ಇತಿಹಾಸದಿಂದ_ಆಕರ್ಷಣೆ_ಹೊಂದಿ_ಬಿದನೂರು_ನಗರ_ವಾಸಿ_ಆಗಿರುವ

#ಬಿಜಾಪುರ_ಜಿಲ್ಲೆಯ_ರಕ್ಕಸತಂಗಡಿ_ಅಂಬ್ರಯ್ಯಮಠರ_ಮೂಲ.


   ನಮ್ಮ ಶಿವಮೊಗ್ಗ ಜಿಲ್ಲೆಯ ವರದಾ ನದಿ ದಂಡೆಯ ರಾಜ ವಂಶ ಕೆಳದಿ ಸಂಸ್ಥಾನದ ಇತಿಹಾಸದ ಕಥೆ ರಾಜ್ಯದ ಖ್ಯಾತ ಡಿಜಿಟಲ್ ಮಾಧ್ಯಮ ಪ್ರಸ್ತುತ ಪಡಿಸುತ್ತಿದೆ.
   ಕೆಳದಿ ಅರಸರ ಮೊದಲ ರಾಜದಾನಿ ಕೆಳದಿಯಲ್ಲಿ ಅಲ್ಲಿನ ಕೆಳದಿ ಮ್ಯೂಸಿಯಂ ಕ್ಯೂರೇಟರ್ ಆಗಿದ್ದ ಡಾ.ಗುರುರಾಜ ಕಲ್ಲಾಪುರ ವಿವರಣೆಗಳನ್ನ ನೀಡಿದ್ದರು.
  ಕೆಳದಿ ಅರಸರ ಎರಡನೆ ರಾಜದಾನಿ ಇಕ್ಕೇರಿಯ ವಿವರಣೆ ಸ್ಥಳಿಯ ಹುಲಿಮನೆಯ ಕಾಳೆ ಮನೆತನದ ನಿವೃತ್ತ ಉಪನ್ಯಾಸಕರಾಗಿದ್ದ ಹೆಚ್. ಕೆ. ಗಣಪತಿ ನೀಡಿದ್ದರು.
   ಇವತ್ತಿನಿಂದ ಕೆಳದಿ ಅರಸರ ಮೂರನೆ ರಾಜದಾನಿ ಬಿದನೂರು ನಗರದ ವಿವರಣೆ ನೀಡುತ್ತಿರುವವರು ಶಿವಮೊಗ್ಗ ಜಿಲ್ಲೆಯ ಉದಯೋನ್ಮುಖ ಇತಿಹಾಸ ಸಂಶೋಧಕ ಅಂಬ್ರಯ್ಯ ಮಠ್.
  ಕೆಪಿಸಿಯಲ್ಲಿ ವ್ಯವಸ್ಥಾಪಕರಾಗಿ ನಿವೃತ್ತರಾದ ನಂತರ 
 ಅನೇಕ ಬರಹ ಕಾದಂಬರಿಗಳನ್ನು ಬರೆದ ಅಂಬ್ರಯ್ಯ ಮಠರು ತಮ್ಮ ಸಂಶೋದನೆಗಾಗಿಯೇ ಕೆಳದಿ ರಾಜರ ಹಾಲಿ  ಪಳಯುಳಿಕೆ ಆಗಿರುವ ರಾಜದಾನಿ ಬಿದನೂರು ನಗರದಲ್ಲಿ ನೆಲೆಸಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ಅವರ ಪುಸ್ತಕಕ್ಕಾಗಿ  94812 54412 ಅಂಬ್ರಯ್ಯ ಮಠರ ವಾಟ್ಸ್ ಪ್ ನಂಬರ್ ಗೆ ಸಂಪಕಿ೯ಸಬಹುದು.
  ಕೆಳದಿ ಇತಿಹಾಸ ಆಸಕ್ತರು ತಪ್ಪದೆ ವೀಕ್ಷಿಸಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
1.https://youtu.be/HZkuDH2yRVM?feature=shared.

2.https://youtu.be/8CJN-jY4i4s?feature=shared.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...