Skip to main content

Blog number 2185. ಸ್ವಾಮಿ ರಾವ್ ಮಾತು ಕಥೆ ಭಾಗ-5. ಜೀವನ ವೃತ್ತಾಂತ "ನಾನು ಹೇಳುವುದೆಲ್ಲ ಸತ್ಯ" ವಿಮರ್ಶೆ ಭಾಗ-3

ಭಾಗ_5_ಸ್ವಾಮಿರಾವ್_ಮಾತು_ಕಥೆ

#ಡಿ_ಬಿ_ಚಂದ್ರೇಗೌಡರ_ವಿರುದ್ದ_ಬಂಗಾರಪ್ಪ_ಸೇಡು

#ಸ್ವಾಮಿರಾವ್_ಅವರ_ಜೀವನ_ವೃತ್ತಾಂತ_ವಿಮರ್ಶೆ_ಭಾಗ_2

#ನಾನು_ಹೇಳುವುದೆಲ್ಲ_ಸತ್ಯ_ಎಂಬ_ಶೀರ್ಷಿಕೆ_ಏಕೆ?

#ಯಾವುದನ್ನೂ_ಮುಚ್ಚಿಡದೆ_ಅವರ_ಜೀವನ_ವೃತ್ತಾಂತ_ತೆರೆದಿಟ್ಟಿದ್ದಾರೆ

#ಶಿವಮೊಗ್ಗ_ಜಿಲ್ಲೆಯ_ಪವರ್_ಪೊಲಿಟೆಕ್ಸ್_ಒಳಾಂತರಳ_ಇದರಲ್ಲಿದೆ

#ಬಹು_ಸಂಖ್ಯಾತ_ದೀವರು_ಸಮಾಜದ_ಹೋರಾಟಗಳು_ಗೆಲುವು_ಸೋಲು_ದಾಖಲಿಸಿದ್ದಾರೆ.

https://youtu.be/Nrdv5819R4s?feature=shared

  1980 ರಲ್ಲಿ ಕಾಂಗ್ರೇಸ್ ಸೇರಿ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿದ್ದ ಬಂಗಾರಪ್ಪ ನಂತರ ನಡೆದ ರಾಜಕೀಯ ಸ್ಥಿತ್ಯಂತರದಿಂದ ಬೇಸರಗೊಂಡು ಕಾಂಗ್ರೆಸ್ ತೊರೆದು ಡಿ.ದೇವರಾಜ ಅರಸು ಮರಣಾನಂತರ ಅವರಿಂದ ಸ್ಥಾಪಿತಗೊಂಡಿದ್ದ #ಕ್ರಾಂತಿ_ರಂಗ ಪಕ್ಷದ ಅಧ್ಯಕ್ಷರಾಗಿ 1983 ರ ವಿಧಾನಸಭಾ ಚುನಾವಣೆಯಲ್ಲಿ ಜನತಾ ಪಕ್ಷದ ಜೊತೆ ಕೈ ಜೋಡಿಸಿ ಜನತಾರಂಗದ ಮೂಲಕ 35 ಶಾಸಕರನ್ನ ಬಂಗಾರಪ್ಪ ಗೆಲ್ಲಿಸಿಕೊಂಡು ಮುಖ್ಯಮಂತ್ರಿ ಎಂದೇ ಬಿಂಬಿತಗೊಂಡರು.
  ಆದರೆ 35 ಶಾಸಕರಲ್ಲಿ 29 ಶಾಸಕರು ಮಂತ್ರಿ ಪದವಿ ಆಸೆಗಾಗಿ ಕ್ರಾಂತಿ ರಂಗ ತೊರೆದು ಜನತಾ ಪಕ್ಷ ಸೇರಿದರು.
  ಬಂಗಾರಪ್ಪನವರಿಗೆ ದಂಬಾಲು ಬಿದ್ದು ಕ್ರಾಂತಿರಂಗದಿಂದ ತೀರ್ಥಹಳ್ಳಿ ವಿಧಾನಸಭಾ ಟಿಕೇಟು ಪಡೆದು ಮೊದಲ ಬಾರಿಗೆ  ಆಯ್ಕೆ ಆಗಿದ್ದ ಡಿ.ಬಿ.ಚಂದ್ರೇಗೌಡರು ಬಂಗಾರಪ್ಪರಿಗೆ ಕೈಕೊಟ್ಟು ಜನತಾ ಪಕ್ಷ ಸೇರಿ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಸ್ಪೀಕರ್ ಆಗಿ ಆಯ್ಕೆ ಆಗಿದ್ದರು ಒಮ್ಮೆ ಸದನದಲ್ಲಿ "ಕ್ರಾಂತಿರಂಗ ಈಗ ಎಲ್ಲಿದೆ" ಎಂದ ವ್ಯಂಗ್ಯದ ಮಾತು ಬಂಗಾರಪ್ಪರನ್ನ ಕೆರಳಿಸಿತ್ತು.
  1985ರಲ್ಲಿ ಬಂಗಾರಪ್ಪ ತಮ್ಮ ಕ್ರಾಂತಿರಂಗ ಕಾಂಗ್ರೇಸ್ ಪಕ್ಷದಲ್ಲಿ ವಿಲೀನಗೊಳಿಸಿದ್ದರು ಎಐಸಿಸಿ ರಾಜ್ಯದ ಚುನಾವಣೆಯ ಸಂಪೂಣ೯ ಹೊಣೆ ಬಂಗಾರಪ್ಪರಿಗೆ ವಹಿಸಿದ್ದರು.
  ತೀರ್ಥಹಳ್ಳಿ ವಿದಾನ ಸಭಾ ಕ್ಷೇತ್ರದಿಂದ ಡಿ.ಬಿ.ಚಂದ್ರೇಗೌಡರಿಗೆ ಸೋಲಿಸುವ ಶಫಥ ಮಾಡಿದ್ದ ಬಂಗಾರಪ್ಪ ಈ ಕೆಲಸ ಸ್ವಾಮಿ ರಾವ್ ರಿಗೆ ವಹಿಸುತ್ತಾರೆ ಪಲಿತಾಂಶ ಬಂದಾಗ ಡಿ.ಬಿ.ಚಂದ್ರೇಗೌಡರು ಸೋತು ಹೋದರು #ಪಟಮಕ್ಕಿ_ರತ್ನಾಕರ್ ಗೆದ್ದರು ಇದನ್ನು ಸವಿವಿವರವಾಗಿ ಸ್ವಾಮಿ ರಾವ್ ಜೀವನ ವೃತ್ತಾಂತದಲ್ಲಿ ದಾಖಲಿಸಿದ್ದಾರೆ ಇದು ನಮ್ಮ ಶಿವಮೊಗ್ಗ ಜಿಲ್ಲೆಯ ಪ್ರಮುಖ ರಾಜಕಾರಣದ ಘಟನೆ.
  ಸ್ವಾಮಿ ರಾವ್ ಅವರ ಜೀವನ ವೃತ್ತಾಂತ #ನಾನು_ಹೇಳುವುದೆಲ್ಲಾ_ಸತ್ಯ ಬೇಕಾದವರು ಹೊಸನಗರದ ಪತ್ರಕತ೯ರಾದ ಶ್ರೀಕಂಠ ಅವರ ಪೋನ್ ನಂಬರ್  94830 16851 ಸಂಪರ್ಕಿಸ ಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...