Skip to main content

Blog number 2189. ಇದು ತರಹಾವಾರಿ ರುಚಿಕರ ಮಲೆನಾಡನ ಮುಂಗಾರು ಆರಂಭದ ಅಣಬೆಗಳ ಕಾಲ.

#ಮು೦ಗಾರು_ಮಳೆ_ಪ್ರಾರಂಭ_ಆಗಿದೆ.
#ಮಲೆನಾಡಿನ_ಸಂಪ್ರದಾಯಿಕ_ಆಹಾರ_ಕೂಡ

#ಕಳಲೆ_ಮರಕೆಸ_ಅಣಬೆ_ಹೀಗೆ....#ಸಾಗಿದೆ_ಉದ್ದ_ಪಟ್ಟಿ_ಸಾಲು

#ತರಹೇವಾರಿ_ಅಣಬೆಗಳಲ್ಲಿ_ತಿನ್ನಬಾರದ್ದು_ಹೆಚ್ಚು_ಇದೆ

#ಸಂಪ್ರದಾಯಿಕ_ಮೇಲ್ವರ್ಗದ_ಬ್ರಾಹ್ಮಣ_ಮತ್ತು_ಲಿಂಗಾಯಿತರ_ಕುಟುಂಬಗಳಲ್ಲಿ

#ಅಣಬೆ_ಆಹಾರವಾಗಿ_ಸ್ವೀಕರಿಸಲು_ಅವಕಾಶ_ಇಲ್ಲ_ನಿಷೇದ_ಇದೆ.

#ಸಸ್ಯ_ವರ್ಗದ_ಅಣಬೆ_ಶಿಲೀಂದ್ರವಾದ್ದರಿಂದ_ಇದನ್ನು_ಬಳಸುವುದಿಲ್ಲ.

   ಪಶ್ಚಿಮ ಘಟ್ಟದಲ್ಲಿ 51 ವಿದದ ಅಣಬೆಗಳಲ್ಲಿ 8 ವಿದದ ಅಣಬೆ ಮಾತ್ರ ತಿನ್ನಲು ಯೋಗ್ಯವಂತೆ. ತರಕಾರಿ ಗುಂಪಿನ ಸಸ್ಯ ವರ್ಗಕ್ಕೆ ಸೇರಿದ ಈ ಶಿಲೀಂದ್ರ  ಅಣಬೆ ಉತ್ತಮ ಆಹಾರ ಮತ್ತು ಇದರಲ್ಲಿ ಶರ್ಕರ ಪಿಷ್ಟ ಕಡಿಮೆ ಇರುವುದರಿಂದ ಡಯಾಬಿಟೀಸ್ ಇರುವವರಿಗೆ ಒಳ್ಳೆಯ ಆಹಾರ ಇದು.
   ನಾನು ನೋಡಿದ್ದು ಇದರಲ್ಲಿ ಕೆಲವೇ ಕೆಲವು ಮತ್ತು ತಿಂದಿದ್ದು ಇನ್ನೂ ಕೆಲವು ಮಾತ್ರ.
    ನಮ್ಮಲ್ಲಿ  ಹೆಚ್ಚಾಗಿ ಸಿಗುವುದು #ಹೆಗ್ಗಲಾಣಬೆ ಅಂತ( ಇದನ್ನು ಬೇರೆ ಹೆಸರಲ್ಲೂ ಕರೆಯುತ್ತಾರೆ) ಇದರಲ್ಲಿ ಕಪ್ಪು ಮೊಗ್ಗು ಮತ್ತು ಬಿಳಿ ಮೊಗ್ಗು ಎಂಬ ಎರೆಡು ವಿದವಿದೆ.
  ಮುಂಗಾರು ಮಳೆ ಪ್ರಾರಂಭದಲ್ಲಿ ಮತ್ತು ಮುಕ್ತಾಯದ ದಿನಗಳಲ್ಲಿ ಅರಣ್ಯ ಪ್ರದೇಶದಲ್ಲಿ ದೊರೆಯುತ್ತದೆ ಇದಕ್ಕೆ ಬೇಡಿಕೆ ಜಾಸ್ತಿ, ರುಚಿ ಜಾಸ್ತಿ ಆದ್ದರಿಂದ ಕೆಜಿಗೆ 300 ಕ್ಕೂ ಹೆಚ್ಚು ಬೆಲೆಗೆ ಮಾರಾಟ ಆಗುತ್ತೆ.
  #ನುಚ್ಚಾಣುಬೆ ಹೆಸರು ಹೇಳುವಂತೆ ಸಣ್ಣ ಗಾತ್ರದ್ದು, ರುಚಿ ಜಾಸ್ತಿ ಆದರೆ ಇದನ್ನು ಕಿತ್ತು ತಂದು ಸ್ವಚ್ಚ ಮಾಡುವುದು ಮೈತುಂಬಾ ಕೆಲಸವಾದ್ದರಿಂದ ಇದರ ಬಳಕೆ ಸಲೀಸಲ್ಲ. (ಸಣ್ಣವನಾಗಿದ್ದಾಗ ತಿಂದ ನೆನಪು)
  #ಎಣ್ಣಾಣುಬೆ (ಮೇಲ್ಪದರ ಎಣ್ಣೆ ಇದ್ದ೦ತೆ ಇರುತ್ತದೆ) ಇದು ಕೂಡ ಅತ್ಯಂತ ರುಚಿಕರವಾದ ಅಣುಬೆ ಹೆಚ್ಚು ಜನ ಬಳಸುತ್ತಾರೆ.
  ರಾಣಿ ಬೆನ್ನೂರು ಹುಬ್ಬಳಿ ಬಾಗದಲ್ಲಿ ಹುತ್ತದ ಮಣ್ಣಿನಲ್ಲಿ ಹೆಚ್ಚು ಬೆಳೆಯುವ #ಹುತ್ತದ_ಅಣಬೆ ಬಳಕೆಯಲ್ಲಿದೆ. (ನಾನು ರುಚಿ ನೋಡಿಲ್ಲ)
   ದೂಪದ ಮರದ ಬುಡದಲ್ಲಿ ಬೀಳುವ ಒಣ ಎಲೆ ಮರೆಯಲ್ಲಿ ಬರುವ ಕಪ್ಪು ಬಣ್ಣದ ತಲೆಯ #ಮಣ್ಣು_ಆಣಬೆ ಅತ್ಯಂತ ರುಚಿಕರ ಅಂತೆ ಆದರೆ ಇದು ಸಾವಿರ ರೂಪಾಯಿ ಕೊಟ್ಟರು ಸಿಗುವುದಿಲ್ಲ. (ಪ್ರಯತ್ನ ಪಟ್ಟರು ಸಿಕ್ಕಿಲ್ಲ)
   #ಕೂಗಲು_ಅಣಬೆ ಕೋಳಿ ಮಾಂಸದ ರುಚಿ ಇರುತ್ತದೆ, ಕಿತ್ತಳೆ ಹಣ್ಣಿನ ಗಾತ್ರದ ಮೇಲು ಬಾಗ ಅರಿಶಿಣ ಬಣ್ಣ ಒಳಗೆ ಕಪ್ಪು ಮತ್ತು ಬಿಳಿ ಬಣ್ಣದ ಈ ಅಣಬೆಗೆ ಬಾರೀ ಬೇಡಿಕೆ ಇದೆ. (ಗೆಳೆಯರ ಅನುಭವ)
   ಕೊಡಗಿನ #ಮ್ಯಾಜಿಕ್_ಮಷ್ರೂ೦ ತಿಂದರೆ 24 ಗಂಟೆ ಅಮಲು ಇರುತ್ತದೆ ಎನ್ನುವ ಸುದ್ದಿ ಇದೆ. (ಪ್ರವಾಸೋದ್ಯಮ ಲೇಖನದಲ್ಲಿ ಮಾತ್ರ ನೋಡಿದ್ದು)
  ಅಣಬೆ ಖಾಧ್ಯದ ಜೊತೆ ಬಿಸಿ ಬಿಸಿ ಅಕ್ಕಿ ರೊಟ್ಟಿ ಅತ್ಯುತ್ತಮ ಕಾಂಬಿನೇಷನ್.
  ಕೃತಕವಾಗಿ ಬೆಳೆದು ಮಾರಾಟ ಮಾಡುವ ಅಣಬೆ ಉದ್ಯಮವೂ ಬೆಳೆದಿದೆ ಆದರೆ ಪಶ್ಚಿಮ ಘಟ್ಟದ ಮುಂಗಾರು ಮಳೆ ಅವಲಂಬಿಸಿ ನೈಸರ್ಗಿಕವಾಗಿ ಬೆಳೆಯುವ ಅಣಬೆ ರುಚಿ ಮಾತ್ರ ವಿಶಿಷ್ಟ.
   ಸಂಪ್ರದಾಯಿಕ ಮೇಲ್ವರ್ಗದ ಬ್ರಾಹ್ಮ ಮತ್ತು ಲಿಂಗಾಯಿತರ ಕುಟುಂಬಗಳಲ್ಲಿ ಅಣಬೆ ಆಹಾರವಾಗಿ ಸ್ವೀಕರಿಸಲು ಅವಕಾಶ ಇಲ್ಲ ನಿಷೇದ ಇದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ