Skip to main content

Blog number 2194. ಮಾತುಕಥೆ ಭಾಗ 6. ಹೊಸನಗರದ ಮಾಜಿ ಶಾಸಕ ಬಿ.ಸ್ಟಾಮಿ ರಾವ್ ಜೀವನ ವೃತ್ತಾಂತ ಪುಸ್ತಕ

#ಸ್ವಾಮಿರಾವ್_ಮಾತುಕಥೆ_ಭಾಗ_6.

#ಅವರ_ಜೀವನ_ವೃತ್ತಾಂತದ_ನಾನು_ಹೇಳುವುದೆಲ್ಲ_ಸತ್ಯ

#ಪ್ರತಿಯೊಬ್ಬರೂ_ಓದಲೇ_ಬೇಕು.

#ಹಿಂದುಳಿದ_ವರ್ಗದ_ಅಭ್ಯರ್ಥಿ_1962ರಲ್ಲಿ_ಮೇಲ್ವರ್ಗದ_ಮನೆಯಲ್ಲಿ

#ಲೋಟ_ತಟ್ಟೆ_ತೋಳೆದು_ಇಟ್ಟು_ಬರಬೇಕಿತ್ತು.

#ದೀವರ_ಸಮಾಜ_ಅಭಿವೃದ್ಧಿಗಾಗಿ_ಸ್ವಾಮಿರಾವ್_ಕುಟುಂಬದ_ಕೊಡುಗೆ

#ಸ್ವಾಮಿರಾವ್_ದೀವರ_ಸಮಾಜಕ್ಕೆ_ಏನು_ಮಾಡಿದ್ದಾರೆ_ಎಂಬ_ಪ್ರಶ್ನೆಗೆ_ಉತ್ತರ

#ನಾನು_ಹೇಳುವುದೆಲ್ಲ_ಸತ್ಯ_ಪುಸ್ತಕದಲ್ಲಿ_ನಮೂದಿಸಿದ್ದಾರೆ

#ಪುಸ್ತಕ_ಬೇಕಾದವರು_ಹೊಸನಗರದ_ಪತ್ರಕರ್ತ

#ಶ್ರೀಕಂಠ_ಅವರ_ಫೋನ್_ನಂಬರ್_9483016851_ಸಂಪರ್ಕಿಸಿ

https://youtu.be/VV7Wq-D2Xek?feature=shared

 
   ಹೊಸನಗರದ ಮಾಜಿ ಶಾಸಕರಾದ ಸಜ್ಜನ ರಾಜ ಕಾರಣಿ 94 ನೆ ತಮ್ಮ ವಯಸ್ಸಿನಲ್ಲಿ ತಮ್ಮ ಜೀವನ ವೃತ್ತಾಂತದಲ್ಲಿ ಇದನ್ನೆಲ್ಲ ದಾಖಲಿಸಿದ್ದಾರೆ ನೋಡಿ......
  
 "1962ರಲ್ಲಿ ಚುನಾವಣಾ ಪ್ರಚಾರದ ವೇಳೆ ಮನೆ ಮನೆಗೆ ಭೇಟಿ ನನಗೆ ಮಾಮೂಲಾಗಿತ್ತು....
 ಉತ್ತಮ ಜನಾಂಗದ ಮನೆಯಲ್ಲಿ ಕಾಪಿ ಕುಡಿದ ಬಳಿಕ ಆ ಲೋಟ ಹಿಂದುಳಿದ ವರ್ಗದವ ತೊಳೆದಿಟ್ಟು ಬರುವ ಪದ್ದತಿ ಅಂದು ರೂಡಿಯಲ್ಲಿತ್ತು....
  ಊಟ ಮಾಡಿದ ಮೇಲೆ ಬಾಳೆ ಎಲೆ ತೆಗೆದು ಗೋಮಯ ಹಾಕಿ ಸಾರಿಸಿದ್ದೂ ಸ್ವಾಮಿ ರಾವ್ ಬರೆದಿದ್ದಾರೆ.
  ಕಾಗೋಡು ಚಳುವಳಿಯಲ್ಲಿ  ನಾನು ಮತ್ತು ಕಾಗೋಡು ತಿಮ್ಮಪ್ಪ ಭಾಗವಹಿಸಲಿಲ್ಲ ಕಾಗೋಡು ಚಳವಳಿ ನೇತಾರ ಹೆಚ್.ಗಣಪತಿಯಪ್ಪ ಮಾತ್ರ ಇದನ್ನು ಗಣಪತಿಯಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕಾಗೋಡು ತಿಮ್ಮಪ್ಪ ಅವರ ಸಮ್ಮುಖದಲ್ಲಿಯೇ ಪ್ರಸ್ತಾಪಿಸುವ ಮೂಲಕ ಸೃಷ್ಟೀಕರಿಸಿದ್ದೇನೆ.
   ನನ್ನ ತಂದೆ ಕುಂಬತ್ತಿ ಬೈರನಾಯಕರು ಕಾಗೋಡು ತಿಮ್ಮಪ್ಪ ಅವರನ್ನ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಆ ಕಾಲದಲ್ಲಿ ಹದಿನೈದು ರೂಪಾಯಿ ಧನ ಸಹಾಯ ಮಾಡಿದ್ದರೆಂಬ ಅವರ ಮಾತುಗಳು ನನಗೆ ಈಗಲೂ ನೆನಪಿನಲ್ಲಿದೆ. "....

ಸ್ವಾಮಿ ರಾವ್ ಬರೆದ ಜೀವನ ವೃತ್ತಾಂತದಲ್ಲಿ ಅನೇಕ ನಿಜ ಘಟನೆಗಳು ದಾಖಲಾಗಿದೆ ಅವುಗಳು ಶಿವಮೊಗ್ಗ ಜಿಲ್ಲೆಯ ರಾಜಕಾರಣದ ಒಳಗುಟ್ಟುಗಳೂ ಹೌದು ಇದನ್ನೆಲ್ಲ ಬರೆಯಲು ರಾಜಕಾರಣಿಗೆ ಎಂಟು ಎದೆ ಬೇಕು ವೈಯಕ್ತಿಕವಾಗಿ ಪ್ರಾಮಾಣಿಕರಾದ ಸ್ವಾಮಿ ರಾವ್ ನಾನು ಹೇಳುವುದೆಲ್ಲ ಸತ್ಯ ಎಂಬ ಅನ್ವರ್ಥಕ ಹೆಡ್ಡಿಂಗ್ ಈ ಪುಸ್ತಕಕ್ಕೆ ನೀಡಿದ್ದು ಸಾರ್ಥಕವಾಗಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...