Skip to main content

Blog number 2194. ಮಾತುಕಥೆ ಭಾಗ 6. ಹೊಸನಗರದ ಮಾಜಿ ಶಾಸಕ ಬಿ.ಸ್ಟಾಮಿ ರಾವ್ ಜೀವನ ವೃತ್ತಾಂತ ಪುಸ್ತಕ

#ಸ್ವಾಮಿರಾವ್_ಮಾತುಕಥೆ_ಭಾಗ_6.

#ಅವರ_ಜೀವನ_ವೃತ್ತಾಂತದ_ನಾನು_ಹೇಳುವುದೆಲ್ಲ_ಸತ್ಯ

#ಪ್ರತಿಯೊಬ್ಬರೂ_ಓದಲೇ_ಬೇಕು.

#ಹಿಂದುಳಿದ_ವರ್ಗದ_ಅಭ್ಯರ್ಥಿ_1962ರಲ್ಲಿ_ಮೇಲ್ವರ್ಗದ_ಮನೆಯಲ್ಲಿ

#ಲೋಟ_ತಟ್ಟೆ_ತೋಳೆದು_ಇಟ್ಟು_ಬರಬೇಕಿತ್ತು.

#ದೀವರ_ಸಮಾಜ_ಅಭಿವೃದ್ಧಿಗಾಗಿ_ಸ್ವಾಮಿರಾವ್_ಕುಟುಂಬದ_ಕೊಡುಗೆ

#ಸ್ವಾಮಿರಾವ್_ದೀವರ_ಸಮಾಜಕ್ಕೆ_ಏನು_ಮಾಡಿದ್ದಾರೆ_ಎಂಬ_ಪ್ರಶ್ನೆಗೆ_ಉತ್ತರ

#ನಾನು_ಹೇಳುವುದೆಲ್ಲ_ಸತ್ಯ_ಪುಸ್ತಕದಲ್ಲಿ_ನಮೂದಿಸಿದ್ದಾರೆ

#ಪುಸ್ತಕ_ಬೇಕಾದವರು_ಹೊಸನಗರದ_ಪತ್ರಕರ್ತ

#ಶ್ರೀಕಂಠ_ಅವರ_ಫೋನ್_ನಂಬರ್_9483016851_ಸಂಪರ್ಕಿಸಿ

https://youtu.be/VV7Wq-D2Xek?feature=shared

 
   ಹೊಸನಗರದ ಮಾಜಿ ಶಾಸಕರಾದ ಸಜ್ಜನ ರಾಜ ಕಾರಣಿ 94 ನೆ ತಮ್ಮ ವಯಸ್ಸಿನಲ್ಲಿ ತಮ್ಮ ಜೀವನ ವೃತ್ತಾಂತದಲ್ಲಿ ಇದನ್ನೆಲ್ಲ ದಾಖಲಿಸಿದ್ದಾರೆ ನೋಡಿ......
  
 "1962ರಲ್ಲಿ ಚುನಾವಣಾ ಪ್ರಚಾರದ ವೇಳೆ ಮನೆ ಮನೆಗೆ ಭೇಟಿ ನನಗೆ ಮಾಮೂಲಾಗಿತ್ತು....
 ಉತ್ತಮ ಜನಾಂಗದ ಮನೆಯಲ್ಲಿ ಕಾಪಿ ಕುಡಿದ ಬಳಿಕ ಆ ಲೋಟ ಹಿಂದುಳಿದ ವರ್ಗದವ ತೊಳೆದಿಟ್ಟು ಬರುವ ಪದ್ದತಿ ಅಂದು ರೂಡಿಯಲ್ಲಿತ್ತು....
  ಊಟ ಮಾಡಿದ ಮೇಲೆ ಬಾಳೆ ಎಲೆ ತೆಗೆದು ಗೋಮಯ ಹಾಕಿ ಸಾರಿಸಿದ್ದೂ ಸ್ವಾಮಿ ರಾವ್ ಬರೆದಿದ್ದಾರೆ.
  ಕಾಗೋಡು ಚಳುವಳಿಯಲ್ಲಿ  ನಾನು ಮತ್ತು ಕಾಗೋಡು ತಿಮ್ಮಪ್ಪ ಭಾಗವಹಿಸಲಿಲ್ಲ ಕಾಗೋಡು ಚಳವಳಿ ನೇತಾರ ಹೆಚ್.ಗಣಪತಿಯಪ್ಪ ಮಾತ್ರ ಇದನ್ನು ಗಣಪತಿಯಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕಾಗೋಡು ತಿಮ್ಮಪ್ಪ ಅವರ ಸಮ್ಮುಖದಲ್ಲಿಯೇ ಪ್ರಸ್ತಾಪಿಸುವ ಮೂಲಕ ಸೃಷ್ಟೀಕರಿಸಿದ್ದೇನೆ.
   ನನ್ನ ತಂದೆ ಕುಂಬತ್ತಿ ಬೈರನಾಯಕರು ಕಾಗೋಡು ತಿಮ್ಮಪ್ಪ ಅವರನ್ನ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಆ ಕಾಲದಲ್ಲಿ ಹದಿನೈದು ರೂಪಾಯಿ ಧನ ಸಹಾಯ ಮಾಡಿದ್ದರೆಂಬ ಅವರ ಮಾತುಗಳು ನನಗೆ ಈಗಲೂ ನೆನಪಿನಲ್ಲಿದೆ. "....

ಸ್ವಾಮಿ ರಾವ್ ಬರೆದ ಜೀವನ ವೃತ್ತಾಂತದಲ್ಲಿ ಅನೇಕ ನಿಜ ಘಟನೆಗಳು ದಾಖಲಾಗಿದೆ ಅವುಗಳು ಶಿವಮೊಗ್ಗ ಜಿಲ್ಲೆಯ ರಾಜಕಾರಣದ ಒಳಗುಟ್ಟುಗಳೂ ಹೌದು ಇದನ್ನೆಲ್ಲ ಬರೆಯಲು ರಾಜಕಾರಣಿಗೆ ಎಂಟು ಎದೆ ಬೇಕು ವೈಯಕ್ತಿಕವಾಗಿ ಪ್ರಾಮಾಣಿಕರಾದ ಸ್ವಾಮಿ ರಾವ್ ನಾನು ಹೇಳುವುದೆಲ್ಲ ಸತ್ಯ ಎಂಬ ಅನ್ವರ್ಥಕ ಹೆಡ್ಡಿಂಗ್ ಈ ಪುಸ್ತಕಕ್ಕೆ ನೀಡಿದ್ದು ಸಾರ್ಥಕವಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...