Skip to main content

Blog number 2198. ಕುಂಚಿಕಲ್ ಜಲಪಾತ ನಮ್ಮ ದೇಶದ ಅತ್ಯಂತ ಎತ್ತರದ ಜಲಪಾತ ಅದು ಇರುವುದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ವರಾಹಿ ನದಿಯ ಜಲಪಾತ.

#ಕುಂಚಿಕಲ್_ಪಾಲ್ಸ್

#ಭಾರತ_ದೇಶದ_ಅತ್ಯಂತ_ಎತ್ತರದ_ಜಲಪಾತ

#ಇದು_ಇರುವುದು_ಶಿವಮೊಗ್ಗ_ಜಿಲ್ಲೆಯ_ಹೊಸನಗರ_ತಾಲ್ಲೂಕಿನ

#ಮಾಸ್ತಿಕಟ್ಟೆ_ಸಮೀಪದ_ವರಾಹಿ_ನದಿ_ಜಲಪಾತ

#ವಿಶ್ವದ_ಸುಂದರ_ಜಲಪಾತ_ಜೋಗ್_ಜಲಪಾತ_ಕೂಡ_ಶಿವಮೊಗ್ಗ_ಜಿಲ್ಲೆಯಲ್ಲಿದೆ.


    ಅನೇಕ ಸಾಹಸಿಗಳು ಕುಂಚಿಕಲ್ ಪಾಲ್ಸ್ ಪ್ರದೇಶಕ್ಕೆ ಹೋಗಿ ಚಿತ್ರಗಳನ್ನು ತೆಗೆದು ಗೂಗಲ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.
   ಆದರೆ ಅವರು ಆ ಸ್ಥಳಕ್ಕೆ ಹೋದಾಗ ಅವರಿಗೆ ಇದು ಭಾರತ ದೇಶದ ಜಲಪಾತಗಳಲ್ಲಿ ಎತ್ತರದಲ್ಲಿ ಮೊದಲ ಸ್ಥಾನದಲ್ಲಿದೆ ಎಂಬ ಅರಿವಿರಲಿಲ್ಲ.
   ಇಲ್ಲಿಗೆ ಬೇಟಿ ನೀಡಿದ ಚಾರಣಿಗರಿಗೆ ಈ ಜಲಪಾತ ಹೊರ ಜಗತ್ತಿಗೆ ಗೊತ್ತಾದರೆ ಈ ಪರಿಸರ ಹಾಳಾದೀತೆಂಬ ಕಾಳಜಿ ಹೊಂದಿದ್ದವರು.
  ಈ ಜಲಪಾತ ವೀಕ್ಷಣೆಗೆ ಹೋಗಲು ವರಾಹಿ ವಿದ್ಯುತ್ ಉತ್ಪಾದನ ಸ್ಥಾವರದ ಅನುಮತಿ ಮತ್ತು ಅರಣ್ಯ ಇಲಾಖೆ ಅನುಮತಿ ಕೂಡ ಕಡ್ಡಾಯವಾಗಿ ಪಡೆಯಲೇ ಬೇಕು.
  ಮುಂಗಾರು ಮಳೆಗಾಲ ಮತ್ತು ಚಳಿಗಾಲಗಳಲ್ಲಿ ಇಲ್ಲಿ ವಿಪರೀತ ಜಿಗಣೆ ಮತ್ತು ಮಂಜು ಮುಸುಕಿದ ವಾತಾವರಣ ಇರುತ್ತದೆ ಮತ್ತು ಜಾರಿಕೆ ಇರುವುದರಿಂದ ಸಾಹಸಿ ಚಾರಣಿ ಗರಿಗೆ ದೊಡ್ಡ ಸವಾಲು ಮತ್ತು ಅಪಾಯ ಇದೆ.
  ಆದ್ದರಿಂದ #ಕುಂಚಿಕಲ್_ಪಾಲ್ಸ್ ನಿಗೂಡ ಜಲಪಾತವಾಗಿದೆ.
  2023ರಿಂದ ಜಲಪಾತಗಳ ಪಟ್ಟಿ ಪರಿಷ್ಕರಣೆ ಆಗಿ ಕುಂಚಿಕಲ್ ಪಾಲ್ಸ್ ದೇಶದ ಅತ್ಯಂತ ಎತ್ತರದ ಜಲಪಾತ ಎಂದಾಗಿದೆ ಈಗ ಸಂಬಂದ ಪಟ್ಟ ಇಲಾಖೆಯ ಅನುಮತಿ ಪಡೆದು ಈ ಜಲಪಾತ ಸಂದರ್ಶಿಸುವ ಯಾವುದೇ ತಂಡ ಮೊದಲಿಗರಾಗಲಿದ್ದಾರೆ.
   2018ರಲ್ಲಿ ಬಿದನೂರು ನಗರದ ಗ್ರಾಮ ಪಂಚಾಯಿತಿ ಸದಸ್ಯರು, ಸಮಾಜ ಸೇವಕರು ಮತ್ತು ಸ್ಥಳೀಯ ಉರಗ ಸಂರಕ್ಷಕರಾದ ನಗರ ನಾರಾಯಣ ಕಾಮತ್ ಮತ್ತು ಅವರ ಮಿತ್ರವೃಂದ ಮಳೆಗಾಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆದು ಈ ಸ್ಥಳ ಸಂದರ್ಶಿಸಿ ತೆಗೆದ ವಿಡಿಯೋ ನಮ್ಮ ದೇಶದ ಅತ್ಯಂತ ಎತ್ತರದ ಜಲಪಾತ ಕುಂಚಿಕಲ್ ಪಾಲ್ಸ್ ನ ಮೊದಲ ವಿಡಿಯೋ ಆಗಿದೆ.
  ನಂತರ ಅನೇಕ ಪರಿಸರ ಪ್ರೇಮಿ ಸಾಹಸಿ ಚಾರಣಿಗರು ಈ ಜಲಪಾತದ ಸ್ಥಳಕ್ಕೆ ಹೋಗಿ ತೆಗೆದ ವಿಡಿಯೊ ಗೂಗಲ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಅದನ್ನು ಇವತ್ತಿನಿಂದ ದಿನಕ್ಕೊಂದು ಪೋಸ್ಟ್ ಮಾಡುತ್ತೇನೆ.
  ಇವತ್ತಿನ ಪೋಟೋ ಕಿರಣ್ ನಾಯಕ್ ಅವರದ್ದು ಅವರ ಪರಿಚಯ ನನಗಿಲ್ಲ ಅವರಿಗೆ ದೇಶದ ಅತ್ಯಂತ ಎತ್ತರದ ನಂಬರ್ 1 ಜಲಪಾತದ ಚಿತ್ರ ಬಿಡುಗಡೆ ಮಾಡಿದ್ದಕ್ಕೆ ಶಿವಮೊಗ್ಗ ಜಿಲ್ಲೆಯ ಮತ್ತು ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...