Skip to main content

Blog number 2199. ಕೆಳದಿ ಅರಸರ ಮೂರನೆ ರಾಜದಾನಿ ಬಿದನೂರು ನಗರದ ಐತಿಹಾಸಿಕ ಕೋಟೆಯ ಇಂಚಿಂಚು ವಿವರಗಳನ್ನ ಡಿಜಿಟಲ್ ಮಾಧ್ಯಮದ 10 ಕಂತುಗಳಲ್ಲಿ ಖ್ಯಾತ ಇತಿಹಾಸಕಾರ ಅಂಬ್ರಯ್ಯ ಮಠ ವಿವರಿಸಿದ್ದಾರೆ ನೋಡಿ.

#ನಮ್ಮ_ಜಿಲ್ಲೆಯ_ಹೆಮ್ಮೆಯ

#ಬಿದನೂರು_ಕೋಟೆ_ನೋಡ_ಬನ್ನಿ

#ಸಾಧ್ಯವಾಗದಿದ್ದರೆ_ಡಿಜಿಟಲ್_ಮಾಧ್ಯಮದ

#ಈ_ಸರಣಿಗಳನ್ನ_ನೋಡಿ_50_ಎಕರೆ_ವಿಸ್ತಾರದ

#ಕೋಟೆಯ_ಇಂಚಿಂಚು_ಜಾಗದ_ಮಾಹಿತಿ

#ಖ್ಯಾತ_ಇತಿಹಾಸ_ತಜ್ಞ_ಅಂಬ್ರಯ್ಯ_ಮಠ_ವಿವರಿಸುತ್ತಿದ್ದಾರೆ

#ಬಿದನೂರು_ನಗರ_ಕೆಳದಿ_ರಾಜರ_ಮೂರನೆ_ರಾಜದಾನಿ

#ಬಿದನೂರು_ನಗರ_ವಾಸಿ_ಸಂಶೋದಕ_ಲೇಖಕ_ಅಂಬ್ರಯ್ಯ_ಮಠ

#ಕೆಳದಿ_ಕುಲತಿಲಕ_ಹಿರಿಯ_ವೆಂಕಟಪ್ಪ_ನಾಯಕ_ಐತಿಹಾಸಿಕ_ಕಾದಂಬರಿ_2012ರಲ್ಲಿ_ಪ್ರಕಟಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಜನಪ್ರತಿನಿದಿಗಳು ಹೈದ್ರಾಬಾದ್ ಸಮೀಪದ ಗೋಲ್ಕೊಂಡ ಕೋಟೆಗೆ ಒಮ್ಮೆ ಹೋಗಿ ಬರಬೇಕು 2000 ರಿಂದ 2004ರಲ್ಲಿ ಅಲ್ಲಿನ ಮುಖ್ಯಮಂತ್ರಿ ಅದನ್ನು ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿ ಮಾಡಿದಾರೆ.
  ಅಲ್ಲಿಗೆ ರಸ್ತೆ, ಪ್ರವಾಸಿಗಳಿಗೆ ಕುಡಿಯುವ ನೀರು ಶೌಚಾಲಯ ವ್ಯವಸ್ತೆ, ಪ್ರತಿ ಎರಡು ಗಂಟೆಗೆ ಆ ಕೋಟೆಯ ಇತಿಹಾಸ ವಿವರಿಸುವ ಸಾಕ್ಷಾಚಿತ್ರ, ರಾತ್ರಿ ವಿದ್ಯುತ್ ಬೆಳಕಿನ ಪ್ರದರ್ಶನ, ಪರಿಣಿತ ಗೈಡ್ ವ್ಯವಸ್ತೆ ಮಾಡಿದ್ದಾರೆ ಅಂತಹ ವ್ಯವಸ್ಥೆ ಬಿದನೂರು ನಗರ ಕೋಟೆಗೆ ಮಾಡಲು ಸಾಧ್ಯವಿದೆ ಜಿಲ್ಲೆಯ ಜನಪ್ರತಿನಿದಿಗಳಿಗೆ ಸಲಹೆ ನೀಡಲು ಸಾಧ್ಯವಿರುವವರು ಅವರಿಗೆ ತಿಳಿಸಬೇಕು.
  ಜಿಲ್ಲೆಯ ಉತ್ಸಾಹಿ ಇತಿಹಾಸ ಸಂಶೋದಕರುಗಳು, ಯೂಟ್ಯೂಬರ್ಸ್ಗಳು ಡಿಜಿಟಲ್ ಮಾಧ್ಯಮದ ಈ ಕಂತುಗಳ ಪ್ರೇರಣೆ ಪಡೆದು ಮುಂದಿನ ದಿನಗಳಲ್ಲಿ ಅವರ ಚಾನಲ್ ಗಳಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸ ದಾಖಲಿಸಲಿ ಎಂದು ಆಶಿಸುತ್ತೇನೆ.
  ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಟಿತ ಇತಿಹಾಸ ಪ್ರಸಿದ್ಧ ಕೆಳದಿ ರಾಜರ ಮೂರನೇ ರಾಜದಾನಿ ಬಿದನೂರು ನಗರದ ಕೋಟೆಯ ನೋಡ ಬನ್ನಿ...
 1)https://youtu.be/HZkuDH2yRVM?si=R3MKx6xmrnUhGajk.
2)https://youtu.be/8CJN-jY4i4s?si=Z0sT8dMV8xQXWX41

3)https://youtu.be/wp04rFtm_T4?si=5M6SE1A3WCZ43C96

4)https://youtu.be/SVRerB1-IiU?si=4twMb2pmiB3Wo4Ji

5)https://youtu.be/S165s9YqAHU?si=XOyLKbXK9n8TM_CH

6)https://youtu.be/dzM_UX5BXxY?si=ilf1gHTyYq2HnXpt

7)https://youtu.be/5y85oTgB54U?si=6vos7G1PLgTBiZT2

8)https://youtu.be/HqNY5HrOt6o?si=7ddw3TvtlkmJE4Pc

9)https://youtu.be/j4hM46Ofzus?si=24dkFsuO9_JxubpF

10)https://youtu.be/rjwQ3KWjqvs?si=8KX74j-_Up6_5FLK

   ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ #ಅಂಬ್ರಯ್ಯಮಠ 2012 ರಲ್ಲಿ #ಕೆಳದಿ_ಕುಲತಿಲಕ_ಹಿರಿಯ_ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಪ್ರಕಟಿಸಿದ್ದಾರೆ,ಈ ಪುಸ್ತಕ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜನ ಮತ್ತು ಕೆಳದಿ ಇತಿಹಾಸದ ಬಗ್ಗೆ ತಿಳಿದು ಕೊಳ್ಳುವ ಆಸಕ್ತಿ ಇದ್ದವರು ಓದಲೇ ಬೇಕು.
    ಸಾಗರ ಪಟ್ಟಣ ಕಟ್ಟಿದ ರಾಜ ವೆಂಕಟಪ್ಪ ನಾಯಕರ ಹೆಸರು ಎಲ್ಲಿಯೂ ಸ್ಮಾರಕವಾಗಿ ಸಾಗರದಲ್ಲೇ ಇಲ್ಲ!! ಎಂದರೆ ಅಥ೯ವಾದೀತು ರಾಜ ಮನೆತನದ ಹುನ್ನಾರ, ಅಂತರ್ ಜಾತಿ ಪ್ರೇಮ ವಿವಾಹ ಇದಕ್ಕೆ ಕಾರಣವೇ? ದುರಂತ ನಾಯಕಿ ಚಂಪಕಾರಾಣಿಯಿಂದ ಹೀಗಾಯಿತೆ? ಎಂಬ ಬಗ್ಗೆ ಮುಂದಿನ ದಿನದಲ್ಲಿ ಸಂಶೋದನೆ ಆಗಬೇಕು.
   ಮುಂದಿನ ದಿನದಲ್ಲಿ ಇತಿಹಾಸ ಸಂಶೋದಕರು, ಶಾಲಾ ಕಾಲೇಜುಗಳಲ್ಲಿ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚಿನ ವಿಷಯ ತಿಳಿಸಲು ಈ ಪುಸ್ತಕ ಪ್ರೇರಣೆ ಆಗಬೇಕು.
  ಇಟಲಿಯ ಪ್ರವಾಸಿ ಡಲ್ಲೊ ವಿಲ್ಲಾ ಇಕ್ಕೇರಿಯಲ್ಲಿ ವೆಂಕಟಪ್ಪ ನಾಯಕರ ಬೇಟಿ ಮಾಡಿದ ಬಗ್ಗೆ ಬರೆದ ದಾಖಲೆ ಈ ಪುಸ್ತಕದಲ್ಲಿದೆ, ರಾಣಿ ಅಬ್ಬಕ್ಕ, ಕಾಳು ಮೆಣಸಿನ ರಾಣಿ ಚೆನ್ನ ಬೈರಾದೇವಿ, ಬಿದನೂರಿನ ರಾಣಿ ಅಮ್ಮಿದೇವಮ್ಮ ವೆಂಕಟಪ್ಪ ನಾಯಕರಿಂದ ಸಹಾಯ ಕೇಳಿ ರಾಜ್ಯ ಕಳೆದುಕೊಂಡ ಕಥೆ ಅವರೇ ಪಾತ್ರಗಳಾಗಿ ಈ ಕಾದಂಬರಿಯಲ್ಲಿ ಅಂಬ್ರಯ್ಯ ಮಠರು ಸ್ವಾರಸ್ಯವಾಗಿ ಹೇಳಿಸಿದ್ದಾರೆ.
  ಅದೇ ರೀತಿ ಪಟ್ಟದ ರಾಣಿ ಭದ್ರಮ್ಮಾಜಿ, ಚಂಪಕಾ ಮತ್ತು ಶಿವಪ್ಪ ನಾಯಕರಿಂದಲೂ ಇತಿಹಾಸ ನಮಗೆ ಮನನ ಮಾಡುವಂತೆ ಬರೆದಿದ್ದಾರೆ.
   ಅನೇಕ ಬರಹ ಕಾದಂಬರಿಗಳನ್ನು ಬರೆದ ಅಂಬ್ರಯ್ಯ ಮಠರು ತಮ್ಮ ಸಂಶೋದನೆಗಾಗಿಯೇ ಕೆಳದಿ ರಾಜರ ಹಾಲಿ  ಪಳಯುಳಿಕೆ ಆಗಿರುವ ರಾಜದಾನಿ ಬಿದನೂರು ನಗರದಲ್ಲಿ ನೆಲೆಸಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ಪುಸ್ತಕಕ್ಕಾಗಿ   ಅಂಬ್ರಯ್ಯ ಮಠರ  94804 02712  ವಾಟ್ಸ್ ಪ್ ನಂಬರ್ ಗೆ ಸಂಪಕಿ೯ಸಬಹುದು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ