Skip to main content

Blog number 2202. ಆತ್ಮೀಯ ಮಿತ್ರ ಸಮಾಜ ಸೇವಕ ಬಿ.ಡಿ.ರವಿ ಅವರಿಗೆ 50 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿ ಶುಭ ಹಾರೈಕೆಗಳು.

#ನಮ್ಮ_ಊರಿನ_ಉತ್ಸಾಹಿ_ಸಮಾಜ_ಸೇವಕ

#ಬಿ_ಡಿ_ರವಿ_ಅವರಿಗೆ_50ನೇ_ಹುಟ್ಟು_ಹಬ್ಬದ_ಶುಭಹಾರೈಕೆಗಳು

#ಪತ್ರಕರ್ತರು_ಸಾಹಿತಿಗಳು

#ಶಿವಮೊಗ್ಗ_ಜಿಲ್ಲಾ_ವೈಜ್ಞಾನಿಕ_ಪರಿಷತ್_ಅಧ್ಯಕ್ಷ

#ದರ್ಮಜಾಗೃತಿ_ಪ್ರಾಂತ್ಯ_ಪರಿಯೋಜನಾ_ಪ್ರಮುಖ

#ರಾಷ್ಟ್ರೀಯ_ಮೀನುಗಾರ_ಸಂಘದ_ರಾಜ್ಯ_ಪ್ರದಾನ_ಕಾರ್ಯದರ್ಶಿ

#ಭಾರತ್_ಸೇವಾದಳದ_ತಾಲ್ಲೂಕ್_ಖಜಾಂಚಿ

#ಆನಂದಪುರಂ_ಹೋಬಳಿ_ಸಾಹಿತ್ಯ_ಪರಿಷತ್_ಅಧ್ಯಕ್ಷ

#ಇತಿಹಾಸ_ಪರಂಪರೆ_ಉಳಿಸಿ_ಟ್ರಸ್ಟ್_ಸಂಸ್ಥಾಪಕ

   ಬಿ.ಡಿ.ರವಿ ಆನಂದಪುರಂನ ಉತ್ಸಾಹಿ ಸಮಾಜ ಸೇವಕರು ಇವರು ಪತ್ರಕರ್ತರೂ, ಸಾಹಿತಿಗಳು, ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವೈಜ್ಞಾನಿಕ ಪರಿಷತ್ ಅಧ್ಯಕ್ಷರು, ದಮ೯ ಜಾಗೃತಿ ಪ್ರಾಂತ್ಯ ಪರಿಯೋಜನಾ ಪ್ರಮುಖರಾಗಿ 12 ಜಿಲ್ಲೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ರಾಷ್ಟ್ರೀಯ ಮೀನುಗಾರ ಸಂಘದ ರಾಜ್ಯ ಪ್ರದಾನ ಕಾಯ೯ದರ್ಶಿಗಳು, ಭಾರತ ಸೇವಾದಳದ ತಾಲ್ಲೂಕು ಖಜಾಂಚಿ, ಇತಿಹಾಸ ಪರಂಪರೆ ಉಳಿಸಿ ಟ್ರಸ್ಟ್ ಸಂಸ್ಥಾಪಕರು ಹೀಗೆ ಇವರ ಸಮಾಜ ಸೇವೆಯ ಪಟ್ಟಿ ಉದ್ದ ಇದೆ.
   ಆರ್.ಎಸ್.ಎಸ್,ಎಬಿವಿಪಿ ಇಂದ ಬಂದವರು ಕೆಲಕಾಲ ಖಾಸಾಗಿ ಶಾಲಾ ಶಿಕ್ಷಕರಾಗಿದ್ದರು.
   ಇವರ ತಂದೆ ಟೀಕಪ್ಪ ಮಾಸ್ತರ್ ಶಿಸ್ತಿನ ಸರಳ ಸಂಪನ್ನ ಶಿಕ್ಷಕರಾಗಿದ್ದವರು ಇವರ ತಾಯಿ ಮನೆತನ ಆನಂದಪುರಂ ಮಸೀದಿ ಎದುರಿನ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೂ ದಾನ ಮಾಡಿದ ಸ್ಕೂಲ್ ಪುಟ್ಟಣ್ಣರ ಮನೆತನದವರು ಈ ಶಾಲೆಯಲ್ಲಿ ಓದಿದ ಎ.ಆರ್. ಬದರಿ ನಾರಾಯಣ ಅಯ್ಯಂಗಾರ್ ವಿದ್ಯಾಮಂತ್ರಿ ಆಗುತ್ತಾರೆ.
  ಈ ಶಾಲಾ ಜಾಗ ಕೆಳದಿ ರಾಜ ವೆಂಕಟಪ್ಪ ನಾಯಕ ವಿವಾಹವಾದ ರಂಗೋಲಿ ಪ್ರವೀಣೆ ಚಂಪಕಳ ತಂದೆ ಮನೆ ಇದ್ದ ಜಾಗ, ದುರಂತ ಪ್ರೇಮದ ಸ್ಮಾರಕ #ಚಂಪಕ_ಸರಸ್ಸು ನಿರ್ಮಾಣವಾದ ಮೇಲೆ ಚಂಪಕಳ ಮನೆತನದ ಮೇಲೆ ದೊಡ್ಡ ರೀತಿಯ ಪ್ರಹಾರಗಳು ಆಗುತ್ತದೆ.
   ಚಂಪಕಾಳ ಆಸ್ತಿ ಶಾಪಗ್ರಸ್ತ ಎಂದು ಬ್ರಿಟೀಶರಿಗೆ ಶಾಲೆ ನಿರ್ಮಿಸಲು ಭೂದಾನ ಮಾಡುತ್ತಾರೆ ಇದು ಅಸಲಿ ಕಥೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪೂರ್ಣ ಮಾಹಿತಿ ಓದ ಬಹುದು
https://arunprasadhombuja.blogspot.com/2021/05/22-125.html
  ಬಿ.ಡಿ.ರವಿ ನಾನು 2004ರಲ್ಲಿ ಸಾಗರ ತಾಲೂಕಿನಾದ್ಯಂತ ನಡೆಸಿದ ತುಮರಿ ಸೇತುವೆ - ಹಂದಿಗೋಡು ಕಾಯಿಲೆ ಪೀಡಿತರಿಗೆ ಪುನರ್ವಸತಿ- ಜೋಗ್ ಫಾಲ್ಸ್ ಅಭಿವೃದ್ಧಿ - ಶಿವಮೊಗ್ಗ ತಾಳಗುಪ್ಪ ಬ್ರಾಡ್ ಗೇಜ್ ಒತ್ತಾಯಿಸಿ ನಡೆಸಿದ 13 ದಿನಗಳ ಪಾದಯಾತ್ರೆಯ ನೇತೃತ್ವವಹಿಸಿ ಎಲ್ಲಾ ಊರುಗಳಲ್ಲಿ ಪ್ರಸ್ತಾವಿಕ ಭಾಷಣ ಮಾಡಿದವರು, ಇವರ ಆ ದಿನದ ಸಹಾಯ ಸಹಕಾರ ನಾನು ಜೀವನ ಪರ್ಯಂತ ಮರೆಯಬಾರದು.
  ಇವತ್ತು ವರದಳ್ಳಿ ಶ್ರೀಧರ ಆಶ್ರಮಕ್ಕೆ ಹೋಗಿ ಪ್ರಸಾದ ಮತ್ತು ಸಿಹಿಯೊಂದಿಗೆ ಬಂದು ತನ್ನದು 50 ನೇ ಹುಟ್ಟು ಹಬ್ಬ ಎಂದಾಗ ನಂಬಲಾಗಲಿಲ್ಲ ನಾನು ರವಿಗೆ 40 ವರ್ಷ ಇರಬಹುದೆಂದು ಭಾವಿಸಿದ್ದೆ.
   50 ನೇ ಹುಟ್ಟುಹಬ್ಬ ಆಚರಿಸಿ ಕೊಳ್ಳತ್ತಿರುವ ಬಿ.ಡಿ. ರವಿಗೆ ನಮ್ಮ ಪುರ ದೈವ ಶ್ರೀವರಸಿದ್ದಿ ವಿನಾಯಕ ದೇವರಲ್ಲಿ ಆಯುರಾರೋಗ್ಯ- ಆಯಸ್ಸು-ಯಶಸ್ಸು - ಐಶ್ವರ್ಯ ದಯಪಾಲಿಸಲು ಪ್ರಾರ್ಥಿಸಿ ನಮ್ಮ ಸಂಸ್ಥೆವತಿಯಿಂದ ಗೌರವಿಸಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ