Skip to main content

Blog number 2206. ಕುಂಚಿಕಲ್ ಜಲಪಾತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ನಿಡುಗೋಡಿನ ಸಮೀಪ ಇರುವ ವರಾಹಿ ನದಿ ಜಲಪಾತ ಏಷ್ಯಾ ಖಂಡದ ಎರಡನೆ ಮತ್ತು ಭಾರತದ ಅತ್ಯಂತ ಎತ್ತರದ ಜಲಪಾತ

#ಖ್ಯಾತ_ವೈಚಾರಿಕ_ಲೇಖಕ_ಮುಷ್ತಾಕ್_ಹೆನ್ನಾಬೈಲು

#ಅವರು_ಕುಂಚಿಕಲ್_ಪಾಲ್ಸ್_ಬಗ್ಗೆ_ಬರೆಯಬೇಡಿ

#ಎಂದವರಿಗೆ_ನೀಡಿದ_ಉತ್ತರ

#ನಾವೆಲ್ಲ_ಕುಂಚಿಕಲ್_ಪಾಲ್ಸ್_ತಲೆಯ_ಕಡೆ_ಇದ್ದರೆ

#ಮುಷ್ತಾಕ್_ಹೆನ್ನಾಭೈಲು_ಕುಂಚಿಕಲ್_ಪಾಲ್ಸ್_ಕಾಲ_ಬುಡದಲ್ಲಿ_ಅತೀ_ಸಮೀಪದಲ್ಲಿದ್ದಾರೆ.

   ಬರೀ ಗೂಗಲ್ ನೋಡಿಕೊಂಡು ವಿವರಣೆ ಕೊಡುತ್ತಾ ಹೋದರೆ ನೀವು ತಿಳಿದಂತೆ ಎಲ್ಲರೂ ತಿಳಿಯುತ್ತಾರೆ,, ಭಾರತದ ಅತ್ಯಂತ ದೊಡ್ಡ ಜಲಪಾತ ಎಂದು ಪರಿಗಣಿಸಿರುವುದು ಮತ್ತು ಅದನ್ನು ಅಂಗೀಕಾರಗೊಳಿಸಿರುವುದು ನಾನಲ್ಲ,  🤣🤣 ಭಾರತದ ಸರ್ಕಾರದ ಸಂಬಂಧಪಟ್ಟ ಇಲಾಖೆ.. 
   ಜಲಪಾತವನ್ನು ಸೂಕ್ತ ಸಂಸ್ಥೆಗಳಿಂದ ಅಳತೆಯನ್ನು ಮಾಡಿದ ನಂತರವೇ ಹೀಗೆ ಅಂಗೀಕಾರಗೊಂಡಿದೆ.. ಜಲಪಾತವನ್ನು ಅಳೆಯ ಬೇಕಾಗಿರುವುದು ಒಂದು ಹಂತದ ನೀರಿನ ಆಧಾರದ ಮೇಲೆ ಅಲ್ಲ. 
   ಜೋಗ ಜಲಪಾತವು ಸೇರಿದಂತೆ ಹೆಚ್ಚಿನ ಜಲಪಾತಗಳು ಹಲವು ಹೀಗಿನ ಹಂತಗಳನ್ನು ಹೊಂದಿದೆ,ಇದನ್ನು ಏಷ್ಯಾದ ಎರಡನೇ ಅತಿ ದೊಡ್ಡ ಜಲಪಾತ ಮತ್ತು ಭಾರತದ ಅತಿ ದೊಡ್ಡ ಜಲಪಾತ ಎಂದು ಪರಿಗಣನೆ ಮಾಡಿದ ಕೇಂದ್ರ ಸರ್ಕಾರ ಮತ್ತು ಅದನ್ನು ಕಣ್ಣಾರೆ ಕಂಡ ನಾವೆಲ್ಲ ಪೆದ್ದರಾಗಿ ಬರೀ ಗೂಗಲ್ ಮ್ಯಾಪ್ ನಲ್ಲಿ ಮಾತ್ರ ಕಂಡ ನೀವು ಬುದ್ಧಿವಂತರು ಎಂದು ನೀವು ಸ್ವಯಂ ಸಾರುತ್ತಿರುವುದು ಕಂಡು ನನಗೆ ನಗು ಬರುತ್ತಿದೆ. 
   ಜಗತ್ತಿನ ಪ್ರಮುಖ 10 ಜಲಪಾತಗಳು ಹಂತ ಹಂತವಾಗಿಯೇ ಹಾರುತ್ತಿವೆ,ಜಲಪಾತ ನೋಡದೆ ನೋಡಲು ಬಂದರೆ ನಿಸರ್ಗ ಹಾಳಾಗುತ್ತದೆ ಎನ್ನುವ ಪಾಠ ನನ್ನಂಥವರಿಗೆ ಹೇಳಬೇಡಿ. 
   ನಾನು ಅರಣ್ಯ ಇಲಾಖೆಯ ಉದ್ಯೋಗಿಯ ಮಗ, ನಿಸರ್ಗ ಹಾಳಾಗುವುದು ಯಾರಿಂದ ಎನ್ನುವುದು ನನಗೆ ಸ್ಪಷ್ಟ ಅರಿವಿದೆ.
   ಆದರೂ  ದೇಶದ ನಂಬರ್ ಒನ್ ಜಲಪಾತವನ್ನು ಪ್ರವಾಸಿಗರಿಗೆ ತೋರಿಸಬಾರದು ಎಂಬ ನಿಮ್ಮ ಮನಸ್ಥಿತಿ ಇದೆಯಲ್ಲ ಇದು ಇಡೀ ಲೋಕದಲ್ಲಿ ಯಾರಿಗೂ ಅರ್ಥವಾಗದು. 
    ಒಂದು ವೇಳೆ ಜೋಗ ಜಲಪಾತವಾಗಲಿ ನಯಾಗಾರ ಜಲಪಾತವಾಗಲಿ ಪ್ರವಾಸಿಗರಿಗೆ ತೋರಿಸುವುದಿಲ್ಲ ಎಂಬ ನಿರ್ಣಯ ತೆಗೆದುಕೊಂಡರೆ ಏನಾದೀತು?.
   ವಿಮಾನವನ್ನು ಕೆಳಗಿನಿಂದ ಮೇಲೆ ನೋಡಿದಾಗ ಇರುವ ಗಾತ್ರಕ್ಕಿಂತ ಅದೆಷ್ಟೋ ಚಿಕ್ಕದಾಗಿ ಕಾಣುತ್ತದೆ ಸ್ವಾಮಿ, ಜಲಪಾತವನ್ನು ಮೇಲಿನಿಂದ ಕೆಳಗೆ ನೋಡಿದಾಗ ಅದು ನೆಲದ ಮೇಲೆ ಹರಿದಂತೆ ಕಾಣುತ್ತದೆ. ಜಲಪಾತವನ್ನು ಮತ್ತು ವಿಮಾನವನ್ನು ಕಾಣಬಾರದ ಜಾಗದಿಂದ ಕಂಡು ಅಳೆಯಬಾರದು. ಏನಂತೀರಿ?...

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...