Skip to main content

Blog Number 2210. ಮುಳುಗಿದ ಎಸ್.ಎಸ್. ಗೇರುಸೊಪ್ಪಾ ಬ್ರಿಟೀಷ್ ಹಡುಗಿನಿಂದ ತೆಗೆದ ಬೆಳ್ಳಿ ಗಟ್ಟಿಗಳಿಂದ ನಾಣ್ಯಗಳನ್ನ ಟಂಕಿಸಿ ಆನ್ ಲೈನ್ ನಲ್ಲಿ ಮಾರಾಟಕ್ಕೆ ಇಡಲಾಗಿದೆ.

#ಎಸ್_ಎಸ್_ಗೇರುಸೊಪ್ಪಾ

#ಎರಡನೆ_ಮಹಾಯುದ್ದದಲ್ಲಿ_ಮುಳುಗಿದ_ಹಡಗು

#ಅದರಲ್ಲಿದ್ದ_200_ಟನ್_ಬೆಳ್ಳಿಗಟ್ಟಿಗಳು

#ಮುಳುಗಿದ_ಬೆಳ್ಳಿ_ತೆಗೆದ_ಅಮೆರಿಕಾದ_ಒಡಿಸ್ಸಿ_ಮೆರಿನ್_ಎಕ್ಸಪ್ಲೋರೇಷನ್_ಕಂಪನಿ

#ಈ_ರೀತಿ_ಸಮುದ್ರದಿಂದ_ತೆಗೆದ_ಬೆಳ್ಳಿಯಿಂದ_ನಾಣ್ಯ_ಟಂಕಿಸಿದೆ

#ಇತಿಹಾಸದ_ಆಸಕ್ತರು_ಖರೀದಿಸುತ್ತಾರೆ

#ಆನ್_ಲೈನ್_ನಲ್ಲಿ_ಲಭ್ಯವಿದೆ.
  1941 ರಲ್ಲಿ ಮುಳುಗಿದ ಬ್ರಿಟನ್ ಸರ್ಕಾರದ ಹಡುಗಿನ ಹೆಸರು S.S.GERUSOPPA ಬ್ರಿಟಿಷರು ಜೋಗ್ ಜಲಪಾತವನ್ನು ಗೇರುಸೊಪ್ಪ ಜಲಪಾತವೆಂದೇ ಕರೆಯುತ್ತಿದ್ದರು ಈ ಪ್ರದೇಶ ಗೇರುಸೊಪ್ಪೆ ಸಂಸ್ಥಾನಕ್ಕೆ ಸೇರಿತ್ತು.
  ಇಲ್ಲಿ ಆಳಿದ ಪ್ರಖ್ಯಾತ ಜೈನರ ರಾಣಿ ಚೆನ್ನಬೈರಾದೇವಿ ಅವಳು ಯುರೋಪಿನ ದೇಶದೊಂದಿಗೆ ನೇರವಾಗಿ ಕಾಳು ಮೆಣಸಿನ ವ್ಯವಹಾರ ನಡೆಸುತ್ತಿದ್ದರಿಂದ ಪೋರ್ಚ್ಗೀಸರು ಅವಳಿಗೆ ನೀಡಿದ ಬಿರುದು #ರೀನಾ_ಡಾ_ಪಿಮೆಂಟಾ ಅಂದರೆ ಕಾಳು ಮೆಣಸಿನ ರಾಣಿ.
   ಅವಳ ಈ ವ್ಯವಹಾರಗಳು ಬೆಳ್ಳಿಯ ಗಟ್ಟಿಯೊಂದಿಗೆ (ಬಾರ್ ಗಳೊಂದಿಗೆ) ವಿನಿಮಯ ಮಾಡಿಕೊಳ್ಳುತ್ತಿದ್ದಳು ಮತ್ತು ಈ ರೀತಿ ಸಂಗ್ರಹವಾದ ಅಪಾರ ಸಂಪತ್ತು ಗುಪ್ತವಾಗಿ ನಿದಿಯಾಗಿ ಇಟ್ಟಿದ್ದಳು ಇದು ಯುರೋಪಿನವರಿಗೆ ಕಣ್ಣು ಕುಕ್ಕುತ್ತಿತ್ತು.
   ಈ ನಿದಿಯ ಕೆಲ ಬಾಗ ಬ್ರಿಟಿಷರು ಕೈವಶ ಆಯಿತು ಎಂಬ ಸುದ್ದಿಗಳನ್ನ ಪುರಸ್ಕರಿಸುವಂತೆ ಗೇರುಸೊಪ್ಪ ಸಂಸ್ಥಾನದ ಹೆಸರಿನಲ್ಲಿಯೇ  ಬ್ರಿಟಿಷರ ಹಡುಗು ಒಂದು ಇದ್ದಿದ್ದು ಆ ಹಡಗು ಎರಡನೆ ಮಹಾ ಯುದ್ದ ಕಾಲದಲ್ಲಿ ಜರ್ಮನ್ ರು ಹೊಡೆದು ಊರುಳಿಸುವುದು ಸುಮಾರು 70 ವರ್ಷದ ನಂತರ ಮುಳುಗಿದ ಹಣಗಿನ ಅವಶೇಷ ಪತ್ತೆ ಮಾಡಲಾಯಿತು ಈ ಹಡಗು ಟೈಟಾನಿಕ್ ಹಡುಗು ಮುಳುಗಿದ ಆಳಕ್ಕಿಂತ ಹೆಚ್ಚು ಆಳದಲ್ಲಿ ಮುಳುಗಿದ್ದು ಅದರಿಂದ 200 ಟನ್ ಬೆಳ್ಳಿ ಗಟ್ಟಿ ಹೊರ ತೆಗೆಯಲಾಯಿತು ಆ ಬೆಳ್ಳಿ ಗಟ್ಟಿಯಿಂದ ವಿವಿದ ಆಕಾರ ಮತ್ತು ತೂಕದ ನಾಣ್ಯ ಮತ್ತು ಸಣ್ಣ ಬಾರ್ ಗಳನ್ನ ಟಂಕಿಸಿ ಆನ್ ಲೈನ್ ಮುಖಾಂತರ ಮಾರಾಟ ಮಾಡುತ್ತಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...