Skip to main content

Blog number 2225. ಜೋಗ ಜಲಪಾತ ಅದರ ವಿಶೇಷತೆಗಳು

#ಜೋಗ_ಜಲಪಾತ

#ವಿಶ್ವ_ವಿಖ್ಯಾತ_ವಿಶ್ವದ_ಸುಂದರ_ಜಲಪಾತ

#ಶಿವಮೊಗ್ಗ_ಜಿಲ್ಲೆಯ_ತೀರ್ಥಹಳ್ಳಿ_ತಾಲ್ಲೂಕಿನ

#ಅಂಬೂತೀರ್ಥದಲ್ಲಿ_ಉಗಮ_ಆಗುವ_ಶರಾವತಿ_ನದಿ

#ಶಿವಮೊಗ್ಗ_ಉತ್ತರಕನ್ನಡ_ಜಿಲ್ಲೆಗಳ_ಗಡಿ_ಬಳಿ_ಪಶ್ಚಿಮಕ್ಕೆ_ತಿರುಗಿ

#ಗೇರುಸೊಪ್ಪೆ_ಪ್ರಪಾತಕ್ಕೆ_ದುಮುಕುತ್ತದೆ

https://youtu.be/FFsMJFRkvc8?si=2EvyVQE971U2MMi2

  ಇದರ ಎತ್ತರ 829 ಅಡಿ, ಕೆಳಗೆ ಜಲಪಾತದ ತಳದ ಮಡುವಿನ ಆಳ 132 ಅಡಿ 
1856 ರಲ್ಲಿ ಬ್ರಿಟೀಶ್ ನೌಕಾದಳದ ಅಧಿಕಾರಿಗಳು ಸ್ಥಳಿಯ ಕೆಲಸಗಾರರ ಸಹಾಯದಿಂದ ಅಳತೆ ಮಾಡಿದ್ದಾರೆ.
 ಈ ಬೋರ್ಗರೆಯುವ ಜಲಪಾತದ ಶಬ್ದ ಕೇಳಿ ಬ್ರಿಟೀಶ್ ಸೈನಿಕರು ಟಿಪ್ಪು ಸೈನ್ಯದ ಅರ್ಭಟ ಎಂದು ಮೋಸ ಹೋಗಿದ್ದರಂತೆ.
  ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚು ಆಗ ನೀರಿನಿಂದ ಏಳುವ ಮಂಜು ಜಲಪಾತದ ಪ್ರಪಾತ ಆವರಿಸುತ್ತದೆ.
 ಆಗ ನೀರಿನ ಬೋರ್ಗರೆತದ ಶಬ್ದ ಹೃದಯ ಕಂಪಿಸುತ್ತದೆ.
  ಸೂರ್ಯಕಿರಣದಿಂದ ಜಲಪಾತ್ ದಿನದ ವಿವಿಧ ಕಾಲದಲ್ಲಿ ವೈವಿಧ್ಯ ತಾಳುತ್ತದೆ ಮತ್ತು ಕಾಮನ ಬಿಲ್ಲು ಮೂಡಿಸುತ್ತದೆ, ಬೆಳದಿಂಗಳ ರಾತ್ರಿಯಲ್ಲೂ ಜಲಪಾತ ವಿಭಿನ್ನವಾಗಿ ಕಾಣುತ್ತದೆ.
 ರಾಜ-ರೋರರ್ - ರಾಕೆಟ್ - ರಾಣಿ ಎಂಬ ನಾಲ್ಕು ಕವಲುಗಳಾಗಿ ಬೀಳುತ್ತದೆ.
  ಸೊಂದೆಯ ತಾಳಿ ರಾಜಾ ಈ ಕವಲಿರುವ ಕಡೆಯಲ್ಲಿ ಕಟ್ಟಿಸಲು ಉದ್ದೇಶಿಸಿದ್ದ ಮಂಟಪದ ತಳಪಾಯದ ಗುರುತುಗಳನ್ನ ಈಗಲೂ ನೋಡಬಹುದು.
 ರಾಜ ಜಲಪಾತದ ಕೆಳಗೆ ಬಂಡೆ ಬಿರುಕಿನಿಂದ ಹರಿದು ಬೀಳುವ ರೋರರ್ ಜಲಪಾತ ಅಪ್ಪಿಕೊಂಡು ಕಮರಿಗೆ ಬೀಳುತ್ತದೆ.
  ಮೂರನೆ ಕವಲು ರಾಕೆಟ್ ಬಂಡೆಯ ಮೇಲಿಂದ ಹಲವು ದಾರೆಗಳಲ್ಲಿ ಚಿಮ್ಮಿ ತಳಕ್ಕೆ ಕುಪ್ಪಳಿಸುತ್ತದೆ.
  ನಾಲ್ಕನೆ ರಾಣಿ ತಾನು ಬೀಳುವ ರಭಸದಿಂದೇಳುವ ನೊರೆಯಿಂದ ತುಂಬಿ ಸೊಗಸುಗಾತಿಯಂತೆ ಪ್ರಪಾತಕ್ಕೆ ಇಳಿಯುತ್ತದೆ.
  ವಿಶ್ವದ ಪ್ರಸಿದ್ಧ ಜಲಪಾತ ನಯಾಗರ ಜಲಪಾತದ ಹರಿವು ಅಗಾದ ಆದರೆ ಅದರ ಎತ್ತರ 164 ಅಡಿ ಮಾತ್ರ.
 ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬೂತೀರ್ಥದಲ್ಲಿ ಉಗಮವಾಗುವ ಶರಾವತಿ ನದಿ ಪತ್ತೀಪೇಟೆ ಬಳಿ ವಾಯುವ್ಯಕ್ಕೆ ತಿರುಗಿ ನಂತರ ಹರಿದ್ರಾವತಿ ಹೊಳೆ ಮತ್ತು ಎಣ್ಣೆ ಹೊಳೆ ಜೊತೆ ಕೂಡಿಕೊಂಡು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿ ಬಳಿ ಪಶ್ಚಿಮಕ್ಕೆ ತಿರುಗಿ ಗೇರುಸೊಪ್ಪೆ ಪ್ರಪಾತಕ್ಕೆ ದುಮುಕುತ್ತದೆ.
   ನಂತರ 29 ಕಿ.ಮಿ. ದೂರದ ಗೇರುಸೊಪ್ಪ ಗ್ರಾಮದತ್ತ ಸಾಗಿ ಮುಂದೆ ಹೊನ್ನಾವರದ ಬಳಿ ಅರಬ್ಬೀ ಸಮುದ್ರ ಸೇರುತ್ತದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...