Skip to main content

Blog 2246.ದೊಂಡಿಯಾ ವಾಘ್ ಭಾಗ - 3

#ದೊಂಡಿಯಾ_ವಾಘ್_ಭಾಗ_3

#ಶಿವಮೊಗ್ಗ_ಜಿಲ್ಲೆಯ_ವೀರಸೇನಾನಿ_ಬೆಂಕಿಚೆಂಡು

#ಮರಾಠರ_ಬ್ರಿಟೀಷರ_ವಿರುದ್ದ_ಹೋರಾಡಲು_ಟಿಪ್ಪು_ಸಹಾಯ_ಕೇಳಿ_ಹೋದ_ದೊಂಡಿಯ

#ಇವರಿಬ್ಬರ_ವೈಮನಸ್ಸಿನಿಂದ_ಮತ್ತು_ಮೀರ್_ಸಾದಿಕ್_ಕುತಂತ್ರದಿಂದ_ದೊಂಡಿಯಾ_ಸೆರೆಮನೆಗೆ

#ಟಿಪ್ಪೂಸುಲ್ತಾನ್_ನಾಲ್ಕನೇ_ಆಂಗ್ಲೋ_ಮ್ಮೆಸೂರು_ಕದನದಲ್ಲಿ_ಹತರಾದಾಗ

#ಶ್ರೀರಂಗಪಟ್ಟಣದ_ಸೆರೆವಾಸದಿಂದ_ತಪ್ಪಿಸಿಕೊಂಡು_ಬಂದು_ಪುನಃ_ಸೈನ್ಯ_ಕಟ್ಟುತ್ತಾರೆ.

https://youtu.be/244mWNyxjr4?si=J_CmKdy1uEPM4DZg

  ಮೂರನೇ ಮೈಸೂರು ಯುದ್ಧದಲ್ಲಿ (1792) ಟಿಪ್ಪು ತಲ್ಲೀನನಾಗಿದ್ಡ ಈ ಸಮಯವನ್ನು ಉಪಯೋಗಿಸಿ ಧೊಂಡಿಯ ಟಿಪ್ಪುವಿನ ಸೈನ್ಯ ತೊರೆದು ಹೋಗಲು ನಿಶ್ಚಯಿಸಿ, ಯೋಜನೆ ಮಾಡಿ ಸಫಲನಾದ.
 ತನ್ನೊಂದಿಗೆ ಇನ್ನು ಕೆಲವು ಸಹಚರರನ್ನು ಸೇರಿಸಿಕೊಂಡು ಈಗಿನ ಗದಗದಲ್ಲಿರುವ ಲಕ್ಷ್ಮೇಶ್ವರದ ದೇಸಾಯಿಯನ್ನು (ಕಂದಾಯ ವಸೂಲಿ ಮಾಡುವ ಹಕ್ಕಿರುವ ಸ್ಥಾನ) ಸೇರಿದ.    
    ದೇಸಾಯಿಯು ಟಿಪ್ಪುವಿಗೆ ಕಪ್ಪ ಕಾಣಿಕೆ ಕೊಡುವ ಬದಲು ತನಗೆ ಕೊಡಬೇಕು ತಾನು ಅವನ ಸಹಾಯಕ್ಕೆ ಇರುವುದಾಗಿ ಒಪ್ಪಿಸಿದ. 
   ಬ್ರಿಟೀಶರೊಂದಿಗೆ ಯುದ್ಧದಲ್ಲಿ  ಟಿಪ್ಪುವಿನ ಸೋಲಾಯಿತು ಆಂಗ‍್ಲರ ಬಳಿ ತನ್ನ ಇಬ್ಬರು ಮಕ್ಕಳನ್ನು ಒತ್ತೆಯಾಗಿ ಇಡುವ ಪರಿಸ್ಥಿತಿ ಬಂದಿತು, ಧೊಂಡಿಯ ಟಿಪ್ಪುವಿನ ಸಧ್ಯದ ದೌರ್ಬಲ್ಯದ ಲಾಭ ಪಡೆದು ಮೈಸೂರು ಮತ್ತು ಮರಾಠರ ಗಡಿ ಭಾಗದಲ್ಲಿ ಒಂದೊಂದಾಗಿ ಪ್ರದೇಶಗಳನ್ನು ಗೆಲ್ಲುತ್ತಾ ಹೋದ.
   ಧಾರವಾಡ ಸೀಮೆಯ ಪ್ರದೇಶದಲ್ಲಿ ಕಪ್ಪ ಕಾಣಿಕೆ ಪಡೆಯುತ್ತಾ ಹೋದ 1793 ಜನವರಿಯಲ್ಲಿ ಹಾವೇರಿ ಮತ್ತು ಸವಣೂರನ್ನು ಗೆದ್ದು ತನ್ನ ರಾಜ್ಯವನ್ನು ವಿಸ್ತರಿಸಿದ.   
    ಶ್ರೀರಂಗಪಟ್ಟಣದ ಒಪ್ಪಂದದ ಪ್ರಕಾರ ಟಿಪ್ಪು ಮರಾಠರಿಗೆ ಬಿಟ್ಟುಕೊಟ್ಟ ಊರುಗಳನ್ನು ಗೆಲ್ಲುತ್ತಾ ಹೋದ ಇದರ ಪ್ರಭಾವ ಶಿವಮೊಗ್ಗ, ಬಿದನೂರು, ಶಿಕಾರಿಪುರ ಮುಂತಾದ ಪ್ರದೇಶಗಳ ಮೇಲೂ ಆಯಿತು.
  ಧೊಂಡಿಯನ ಬೆಳೆಯುತ್ತಿರುವ ಪ್ರಭಾವದಿಂದ ಮರಾಠರು ಚಿಂತಾಕ್ರಾಂತರಾದರು ಅವನ ಪ್ರಭಾವವನ್ನು ಮೊಳಕೆಯಲ್ಲಿ ಚಿವುಟಿ ಮತ್ತು ಅವನನ್ನು ಮರಾಠರ ಸೀಮೆಯಿಂದ ಹೊರದೂಡಲು ಮರಾಠರ ದಂಡನಾಯಕ ಪರಶುರಾಮ ಭಾವು 1794ರಲ್ಲಿ ಮರಾಠಾ ಸೈನ್ಯವನ್ನು ದೊಂಡೋಪಂತ್ ಗೋಖಲೆ ನೇತೃತ್ವದಲ್ಲಿ ಕಳಿಸಿದ. 
   ದೊಂಡೋಪಂತ್ ಗೋಖಲೆ ತನ್ನ ಸೈನ್ಯದೊಂದಿಗೆ ಸವಣೂರಿನ ಕೋಟೆಗೆ ಮುತ್ತಿಗೆ ಹಾಕಿದ ಧೊಂಡಿಯ ಅವನೊಡನೆ ಸ್ನೇಹ ಬಯಸಿದ ಆದರೆ ದೊಂಡೋಪಂತ್ ಒಪ್ಪಲಿಲ್ಲ ಹಲವು ದಿನಗಳ ಕದನದ ನಂತರ ಧೊಂಡಿಯ ಅಲ್ಲಿಂದ ಕದಲಬೇಕಾಯಿತು.
  ಧೊಂಡಿಯ ಆಗ ಎಂದಾದರೊಂದು ದಿನ ದೊಂಡೋಪಂತ್ ಗೋಖಲೆಯನ್ನು ಕೊಂದು ಅವನ ರಕ್ತದಲ್ಲಿ ತನ್ನಿ ಮೀಸೆಯನ್ನು ತೋಯ್ದುಕೊಳ್ಳುವೆನೆಂದು ಶಪಥ ಮಾಡಿದ.
  ಧೊಂಡಿಯ ಅಲ್ಲಿಂದ ಸೀದಾ ಟಿಪ್ಪುವಿನ ಸಹಾಯ ಕೇಳಲು ಶ್ರೀರಂಗಪಟ್ಟಣಕ್ಕೆ ತೆರಳಿದ,ಟಿಪ್ಪುವಿನ ಸಹಾಯ ಪಡೆಯಲು ಪ್ರಯತ್ನಿಸಿದ ಆದರೆ ಇದು ಕೈಗೂಡದೆ ಟಿಪ್ಪುವಿನ ಸೈನ್ಯವನ್ನು ಮತ್ತೆ ಸೇರುವ ಪ್ರಸ್ತಾಪ ಬಂದಿತು,ಟಿಪ್ಪು ಅವನಿಗೆ ಇಸ್ಲಾಮಿಗೆ ಮತಾಂತರ ಹೊಂದಲು ಆಮಿಷ ಒಡ್ಡಿದ ಆದರೆ ಸ್ವಲ್ಪ ಸಮಯದಲ್ಲಿ ಟಿಪ್ಪುವಿನೊಡನೆ ವೈಮನಸ್ಯದ ಕಾರಣ ಅವನನ್ನು ಬಂದೀಖಾನೆಗೆ ಹಾಕಲಾಯಿತು (ಇದಕ್ಕೆ ಮೀರ್ ಸಾದಿಕನೇ ಕಾರಣ ಎಂದು ನಂಬಲಾಗಿದೆ ಅವನು ಸೆರೆಮನೆಯಲ್ಲಿಯೇ ಸುಮಾರು ೫ ವರ್ಷಗಳ ಕಾಲ ಕಳೆಯುತ್ತಾನೆ.
 ಬ್ರಿಟೀಶರ ವಿರುದ್ಧ 1799 ರಲ್ಲಿ ನಾಲ್ಕನೆಯ ಮೈಸೂರು ಯುದ್ಧ ಟಿಪ್ಪು ಸೋಲುವವರೆಗೂ ದೊಂಡಿಯ ಸೆರೆಮನೆಶಿಕ್ಷೆ ಅನುಭವಿಸುತ್ತಿರುತ್ತಾನೆ.
     ನಾಲ್ಕನೆಯ ಮೈಸೂರು ಯುದ್ಧದ ಕಡೆಯ ದಿನ
ನಾಲ್ಕನೆಯ ಮೈಸೂರು ಯುದ್ಧದಲ್ಲಿ (1799) ಟಿಪ್ಪು ಬ್ರಿಟೀಶರ ವಿರುದ್ಧ ಸೋಲುವುದರ ಜೊತೆಗೆ ಟಿಪ್ಪುವಿನ ಸಾವಾಯಿತು ಜೊತೆಗೆ ಅವನ ಸೈನ್ಯ ಛಿದ್ರಛಿದ್ರವಾಯಿತು.
   ಧೊಂಡಿಯ ಅಲ್ಲಿಯವರೆಗೂ ಶ್ರೀರಂಗಪಠ್ಠಣದಲ್ಲಿ ಐದು ವರ್ಷಗಳಿಂದ ಬಂಧನದಲ್ಲಿದ್ದರೂ ತಪ್ಪಿಸಿಕೊಳ್ಳಲು ಸಮಯ ಕಾಯುತ್ತಿದ್ದ ತನ್ನ ಮತ್ತು ತನ್ನ ಸಹಚರರ ಮನ:ಶಕ್ತಿಯನ್ನು ಯಾವಾಗಲೂ ಮೇಲ್ಮಟ್ಟದಲ್ಲಿರುವ ಹಾಗೆ ನೋಡಿಕೊಳ್ಳುತ್ತಿದ್ದ. 
  ಟಿಪ್ಪುವಿನ ಸಾವಿನಿಂದ ಸಿಕ್ಕ ಅವಕಾಶ ಉಪಯೋಗಿಸಿ ಹಲವು ಸಹಚರರೊಡನೆ ತಪ್ಪಿಸಿಕೊಂಡು ಹೋದನು ಆ ಸಮಯದಲ್ಲಿ ಟಿಪ್ಪುವಿನ ಹಲವು ಸೈನಿಕರು ತಪ್ಪಿಸಿಕೊಳ್ಳುತ್ತಿದ್ದದ್ದು ಇವರಿಗೆಲ್ಲಾ ಒಳ್ಳೆಯದಾಯಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ