Skip to main content

Blog number 2231.ನಿಷೇದಿತ ಆಫ್ರಿಕನ್ ಕ್ಯಾಟ್ ಪಿಶ್ ಮಲೆನಾಡಿನ ಮೀನು ಮಾರುಕಟ್ಟೆಯಲ್ಲಿ ರಾಜೋರೋಶವಾಗಿ ಬಿಕರಿ ಆಗುತ್ತಿದೆ ಜಿಲ್ಲೆಯ ತುಂಗ-ಭದ್ರ-ಶರಾವತಿ ನದಿಗಳಲ್ಲಿ ಆಫ್ರಿಕನ್ ಕ್ಯಾಟ್ ಪಿಶ್ ಸ೦ತಾನ ದ್ವಿಗುಣಗೊಳ್ಳುತ್ತಿದೆ

#ಭಾರತದ_ಜಲಮೂಲಗಳಿಗೆ_ವಿದೇಶಿ_ಮೀನಿನ_ತಳಿ

#ಆಫ್ರಿಕನ್_ಕ್ಯಾಟ್_ವಿಶ್_ನಿಂದ_ಅಪಾಯವಿದೆ

#ಆದ್ದರಿಂದ_ಕೇಂದ್ರ_ಸರ್ಕಾರ_ಈ_ಮೀನು_ಸಾಕಾಣಿಕೆ_ಮತ್ತು_ಮಾರಾಟ_ನಿಷೇದ_ಮಾಡಿದೆ

#ಆದರೆ_ಎಲ್ಲಾ_ಮೀನು_ಮಾರುಕಟ್ಟೆಯಲ್ಲಿ_ಸಂತೆಯಲ್ಲಿ_ಮಾರಾಟ_ಆಗುತ್ತಿದೆ 

#ಮಲೆನಾಡಿನ_ಶರಾವತಿ_ತುಂಗಾ_ಭದ್ರಾ_ನದಿಗಳಲ್ಲಿ_ಆಫ್ರಿಕನ್_ಕ್ಯಾಶ್_ಪಿಶ್_ಹೆಚ್ಚಾಗುತ್ತಿದೆ.

https://youtu.be/X-Amzaud9iM?si=kFBJjanIEalT8C95.
  ಭಾರತೀಯ ದೇಶಿ ಮೀನಿನ ತಳಿ ಮುರುಗೋಡು ಮತ್ತು ಆಪ್ರಿಕನ್ ಕ್ಯಾಟ್ ಪಿಶ್ ಒಂದೇ ರೀತಿ ಕಾಣುತ್ತದೆ ಆದರೆ ದೇಶಿ ತಳಿ ಮುರುಗೋಡು ಗರಿಷ್ಟ 2 ರಿಂದ 3 ಕೇಜಿ ಬೆಳೆಯುತ್ತದೆ ಮತ್ತು ಅದರ ಚರ್ಮ ತೆಳು ಆದರೆ ಆಫ್ರಿಕನ್ ಕ್ಯಾಟ್ ಫಿಶ್ 60 ಕೇಜಿ ಗರಿಷ್ಟ ತೂಕ ತೂಗುತ್ತದೆ ಮತ್ತು 8 ವರ್ಷ ಪೂರ್ತಿ ಜೀವಿತಾವಧಿ ಇದೆ.
   ತನ್ನ ಸುತ್ತಲಿನ ಸ್ಥಳಿಯ ಮೀನು, ಏಡಿ, ಹಕ್ಕಿ ಇತ್ಯಾದಿ ಕಬಳಿಸುತ್ತದೆ ಅಷ್ಟೆ ಅಲ್ಲ ಸತ್ತ ನಾಯಿ ಕೋಳಿ ಮತ್ತು ಅವರ ತ್ಯಾಜ್ಯದಿಂದಲೂ ಸಾಕುತ್ತಾರೆ.
  ಕಡಿಮೆ ನೀರಿನಲ್ಲಿ ಕೊಳಕು ನೀರಿನಲ್ಲೂ ಕಡಿಮೆ ಆಮ್ಲಜನಕ ದಲ್ಲೂ ಆಫ್ರಿಕನ್ ಕ್ಯಾಟ್ ಫಿಶ್ ಬದುಕುತ್ತದೆ.
  ಕೇಂದ್ರ ಸರ್ಕಾರ ಆಪ್ರಿಕನ್ ಕ್ಯಾಟ್ ಫಿಶ್ ನಿಷೇದ ಮಾಡಿದೆ ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಶರಾವತಿ - ವರದಾ - ತು೦ಗಾ - ಭದ್ರ ನದಿಗಳಲ್ಲಿ ಈ ಮೀನಿನ ಸಂಖ್ಯೆ ಈಗಾಗಲೇ ಹೆಚ್ಚಾಗಿದೆ ಇದನ್ನು ತಿನ್ನುವರು ಮಾರುವವರೂ ಹೆಚ್ಚಾಗಿದ್ದಾರೆ.
   ಭಾರತದಲ್ಲಿ ನಿಷೇಧಿಸಲಾಗಿರುವ ಆಫ್ರಿಕನ್ ಕ್ಯಾಟ್ ಫಿಶ್ (ಕ್ಲಾರಿಯಾಸ್ ಗ್ಯಾರಿಪಿನಸ್) ಸಾಕಣೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಮೀನುಗಾರಿಕಾ ಇಲಾಖೆ ಎಚ್ಚರಿಕೆ ನೀಡಿದೆ.
 ಇಲಾಖೆಯ ಪ್ರಕಾರ ಆಪ್ರಿಕನ್ ಕ್ಯಾಟ್ ಪಿಶ್ ಸಿಹಿನೀರಿನ ಮೀನುಗಳನ್ನ,ಸ್ಥಳೀಯ ಮೀನು ಪ್ರಭೇದಗಳನ್ನು ತಿನ್ನುತ್ತವೆ, ವೇಗವಾಗಿ ಸಂತಾನೋತ್ಪತ್ತಿ ಮಾಡುತ್ತವೆ ಮತ್ತು ಹೆಚ್ಚು ಆಕ್ರಮಣಕಾರಿಯಾಗಿದ್ದು, ಕಡಿಮೆ ಅವಧಿಯಲ್ಲಿ ಸ್ಥಳೀಯ ಪ್ರಭೇದಗಳನ್ನು ನಾಶಮಾಡುತ್ತವೆ.  
   ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ತಪ್ಪಿಸಿಕೊಳ್ಳುವ ಕ್ಯಾಟ್ ಪಿಶ್ ಗಳು ವೇಗವಾಗಿ ಬೆಳೆಯುತ್ತವೆ, ಎಂಟು ವರ್ಷಗಳ ದೀರ್ಘಾಯುಷ್ಯವನ್ನು ಹೊಂದಿವೆ ಮತ್ತು ಜಲಮೂಲಗಳನ್ನು ಆಕ್ರಮಿಸುತ್ತದೆ ಒಮ್ಮೆ ಅದು ಜಲಮೂಲಗಳನ್ನು ಆಕ್ರಮಿಸಿದರೆ ಅವುಗಳ ನಿರ್ಮೂಲನೆ ಕಷ್ಟವಾಗುತ್ತದೆ.
   ಆಫ್ರಿಕನ್ ಕ್ಯಾಟ್‌ಫಿಶ್ ಸ್ಥಳೀಯ ಪ್ರಭೇದಗಳನ್ನು ನಾಶ ಮಾಡುತ್ತಿದೆ, ಇದರಿಂದ ಮುಂದಿನ ದಿನಗಳಲ್ಲಿ ಆಹಾರದ ಮೂಲ ಮತ್ತು ಮೀನುಗಾರರ ಜೀವನೋಪಾಯವನ್ನು ನಾಶಪಡಿಸುತ್ತದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...