Skip to main content

Blog number 2240. ಶಿವಮೊಗ್ಗ ಜಿಲ್ಲೆಯ ಚೆನ್ನಗಿರಿಯಲ್ಲಿ ಜನಿಸಿದ ಮಹಾ ಸಾಹಸಿ ದೊಂಡಿಯಾ ವಾಘ್ ಭಾಗಗ - 1.

#ದೊಂಡಿಯಾ_ವಾಘ್_ಭಾಗ_1

#ಕೆಳದಿ_ಸಾಮ್ರಾಜ್ಯ_ಇತಿಹಾಸ_ಮರೆತ

#ಚೆನ್ನಗಿರಿಯ_ವೀರ_ಸೇನಾನಿ

#ಶಿಕಾರಿಪುರದ_ಕಾಡಿನಲ್ಲಿ_ಸ್ಥಳೀಯ_ಬಂಜಾರ_ಜನರಿಂದ

#ಶಶ್ರೂಸೆ_ಸಹಕಾರ_ಪಡೆದು_ಶಿಕಾರಿಪುರದ

#ಪುರದೈವ_ಹುಚ್ಚರಾಯ_ಸ್ವಾಮಿಗೆ_ತನ್ನ_ವೀರಕತ್ತಿ_ಅರ್ಪಿಸುವ_ದೊಂಡಿಯಾ_ವಾಘ್

#ವಿಜಯದಶಮಿಯಲ್ಲಿ_ತಾಲ್ಲೂಕು_ದಂಡಾದಿಕಾರಿ_ಈ_ಕತ್ತಿಯಿಂದ_ಬನ್ನಿಯ_ಬಾಳೆಕಂದು_ಕಡಿಯುತ್ತಾರೆ.

https://youtu.be/6YyzSKZKai0?si=1R0jZIS_fBOYARZV


   ಧೊಂಡಿಯ ಚೆನ್ನಗಿರಿಯಲ್ಲಿ ೧೮ನೇ ಶತಮಾನದ ಉತ್ತರ ಭಾಗದಲ್ಲಿ ಹುಟ್ಟಿದ. ಮರಾಠಿ ಪವಾರ್ ಪಂಗಡದ ಒಂದು ಸಾಮಾನ್ಯ ಪರಿವಾರದಲ್ಲಿ ಅಥವ ಬಂಜಾರ ಸಮಾಜದಲ್ಲಿ ಇವರ ಜನನ. 
   ಆ ಕಾಲ ಘಟ್ಟದಲ್ಲಿ ಚೆನ್ನಗಿರಿಯು ಕೆಳದಿಯ ಸಂಸ್ಥಾನದ ಅಡತಕ್ಕೆ ಒಳಪಟ್ಟಿತ್ತು. 
   ಧೊಂಡಿಯ ಕೆಳದಿಯ ಚೆನ್ನಮ್ಮನ ಕಥೆಗಳನ್ನು ಕೇಳುತ್ತಾ ಬೆಳದವನು,ಗುರು ಸಿದ್ದಪ್ಪ ಶೆಟ್ಟರ ಗರಡಿಯಲ್ಲಿ ಅಶ್ವಾರೋಹಣ, ಕತ್ತಿ ವರಸೆ, ಮಲ್ಲಯುದ್ಧಗಳ ಅಭ್ಯಾಸವನ್ನು ಮಾಡಿ ಇಡೀ ಚೆನ್ನಗಿರಿ ಸೀಮೆಗೆ ಉದಯೋನ್ಮುಖ ಯೋಧನೆನಿಸಿಕೊಂಡಿದ್ದ.
 ಆ ಸಮಯದಲ್ಲಿ ಕೆಳದಿಯ ರಾಜಮನೆತನದಲ್ಲಿ ಅಂತಃಕಲಹಗಳು ಏರ್ಪಟ್ಟಿತ್ತು. ಇವೆಲ್ಲದರ ನಡುವೆ ಎತ್ತರದ ನಿಲುವಿನ, ಶಕ್ತಿಶಾಲಿ, ಯುವ ಪ್ರಭಾವಿ ವ್ಯಕ್ತಿತ್ವದ ಧೊಂಡಿಯನಿಗೆ ಕೆಳದಿಯ ಸಂಸ್ಥಾನದ ಸೈನ್ಯ ಸೇರಲು ಊರಿನ ಜನ ಹುರಿದುಂಬಿಸಿದರು.
   ಧೊಂಡಿಯ ಕೆಳದಿಯ ಸಂಸ್ಥಾನದ ಭಾಗವಾಗಿದ್ದ ಶಿಕಾರಿಪುರದಲ್ಲಿ ಒಬ್ಬ ಕರಣಿಕರಿಗೆ ಸಹಾಯಕನಾಗಿ ವೃತ್ತಿ ಆರಂಭಿಸಿದ.
    ಈ ನಡುವೆ ಹೈದರಾಲಿ ಚಿತ್ರದುರ್ಗದ ರಾಜನಾದ ವೀರ ಮದಕರಿ ನಾಯಕರನ್ನು ಸೋಲಿಸಿದನು. ನಂತರ ಅವನ ದೃಷ್ಟಿ ಕೆಳದಿಯ ಮೇಲೆ ಬಿತ್ತು.
     ಆ ಸಂಸ್ಥಾನದಲ್ಲಿ ನಡೆಯುತ್ತಿದ್ದ ಒಳ ರಾಜಕೀಯ ಮೇಲಾಟಗಳ ಪ್ರಯೋಜನ ಪಡೆಯಲು ಹವಣಿಸುತ್ತಿದ್ದ ಈ ವಿಚಾರವು ಸಂಸ್ಥಾನದಲ್ಲೆಲ್ಲಾ ತಿಳಿದು ಜನ ಮುಂದಿನ ಪರಿಸ್ಥಿತಿಯ ಬಗ್ಗೆ ಚಂತಿತರಾಗಿದ್ದರು. 
    ಕೆಲ ಸಮಯದ ನಂತರ ಹೈದರಾಲಿ ಕೆಳದಿ ಸಂಸ್ಥಾನದ ರಾಜಧಾನಿಯಾದ ಬಿದನೂರಿನ ಮೇಲೆ ದಾಳಿ ಮಾಡಿದ. ರಾಣಿ ವೀರಮ್ಮಾಜಿ ವೀರಾವೇಶದಿಂದ ಹೋರಾಡಿದರು. ಆದರೆ ಅಲ್ಲಿ ನಡೆದ ಒಳಸಂಚಿನ ಕಾರಣ ಸೋತರು.
  ಧೊಂಡಿಯ ಹೈದರಾಲಿಯ ಸೈನ್ಯವನ್ನು ಸೇರಿದ ಅಲ್ಲಿ ವಿಷ್ಣುಪಂಡಿತ ಎಂಬ ಅಶ್ವದಳಪತಿ ಕೆಳಗೆ ಕೆಲಸ ಪ್ರಾರಂಭಿಸಿದ. 
  ತನ್ನ ಒಡನಾಡಿಗಳೊಡನೆ ಒಳ್ಳೆಯ ಸಂಬಂಧ ಬೆಳೆಸಿಕೊಂಡ. ತನ್ನ ಸತತ ಪರಿಶ್ರಮದ ಕಾರಣದಿಂದ ಕೆಲವೇ ಸಮಯದಲ್ಲಿ ಅವನು ಅಶ್ವದಳದ ನಾಯಕ ಶಿಲ್ಲೆದಾರ್ ಪದವಿಗೆ ಏರಿದ.
  1799ರಲ್ಲಿ ನಾಲ್ಕನೆ ಆಂಗ್ಲೋ ಮೈಸೂರು ಕದನದಲ್ಲಿ ಟಿಪ್ಪೂ ಸುಲ್ತಾನ್ ಸೋತು ವೀರಮರಣವನ್ನು ಅಪ್ಪಿದಾಗ ಟಿಪ್ಪು ಸುಲ್ತಾನರ ಬಂದನದಲ್ಲಿ 5 ವರ್ಷ ಕಳೆದಿದ್ದ ದೊಂಡಿಯಾ ವಾಘ್ ಶ್ರೀರಂಗಪಟ್ಟಣದಿಂದ ತಪ್ಪಿಸಿಕೊಂಡು
ಚೆನ್ನಗಿರಿಗೆ ಹಿಂದಿರುಗಿ ಸೈನಿಕರನ್ನು ಒಟ್ಟುಗೂಡಿಸಿ ಹುರಿದುಂಬಿಸಿ ಒಂದೊಂದಾಗಿ ಕೋಟೆಗಳನ್ನು ಗೆಲ್ಲಲು ಪ್ರಾರಂಭಿಸಿದ.
    ಶಿವಮೊಗ್ಗ, ಬಿದನೂರು, ಶಿಕಾರಿಪುರ, ತರೀಕೆರೆ, ಚಿತ್ರದುರ್ಗ, ಹರಪನಹಳ್ಳಿ, ರಾಣೇಬೆನ್ನೂರು, ಸವಣೂರು ಮುಂತಾದ ಕೋಟೆಗಳೆಲ್ಲಾ ಅವನ ವಶವಾಯಿತು.   
      ಬ್ರಿಟೀಶರು ಇವನನ್ನು ಮಟ್ಟ ಹಾಕಲು ಶಿಕಾರಿಪುರದ ಕೋಟೆಗೆ ಮುತ್ತಿಗೆ ಹಾಕಿದರು ಅಲ್ಲಿಂದ ತಪ್ಪಿಸಿಕೊಂಡ ಧೊಂಡಿಯನನ್ನು ಸ್ಟೀವನ್ಸಂನ್ ಮತ್ತು ಡಾಲ್ರಿಂಪಲ್ ಹಿಂಬಾಲಿಸಿ ಹಿಡಿಯಲು ಹೋದಾಗ ಅವನು ನದಿಗೆ ಹಾರಿ ತಪ್ಪಿಸಿಕೊಂಡ. 
   ನಂತರ ಶಿಕಾರಿಪುರದ ಕಾಡಿನಲ್ಲಿ ತಪ್ಪಿಸಿಕೊಂಡ ಅಲ್ಲಿಯ ಬಂಜಾರರು ಅವನ ಶೂಶ್ರೂಷೆ ಮಾಡಿದರು,ತನ್ನನ್ನು ಉಳಿಸಿದ್ದು ಶಿಕಾರಿಪುರದ ಆರಾಧ್ಯದೈವವಾದ ಹುಚ್ಚುರಾಯ ಸ್ವಾಮಿ ಎಂದು ಅಲ್ಲಿಗೆ ಹೋಗಿ ದರ್ಶನ ಪಡೆದು ತನ್ನ ಕತ್ತಿಯನ್ನು ಸ್ವಾಮಿಗೆ ಅರ್ಪಿಸಿದ. 
   ಇಂದಿಗೂ ಕೂಡ ಶಿಕಾರಿಪುರದ ವಿಜಯದಶಮಿಯ ದಿನ ಊರಿನ ಆರಾಧ್ಯ ದೈವ ಹುಚ್ಚುರಾಯ ಸ್ವಾಮಿಯನ್ನು ಒಳಗೊಂಡು ಹಲವು ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯುತ್ತದೆ. ಆ ದಿನ ತಾಲೂಕಿನ ತಹಸೀಲ್ದಾರರು ಹುಚ್ಚುರಾಯ ಸ್ವಾಮಿಗೆ ಧೊಂಡಿಯ ಅರ್ಪಿಸಿದ್ದ ಕತ್ತಿಯಲ್ಲಿ ದುಷ್ಟ ಸಂಹಾರದ ಸಂಕೇತವಾಗಿ ಬಾಳೆಯ ಕಂದನ್ನು ಕಡಿಯುತ್ತಾರೆ.
  ಈ ಮಧ್ಯೆ ಅವನು ತನ್ನನ್ನು ಉಭಯಲೋಕಾಧೀಶ್ವರನೆಂದು ಘೋಷಿಸಿಕೊಂಡ,ಒಂದು ಸಮಯದಲ್ಲಿ ಅವನ ಸೈನ್ಯದಲ್ಲಿ ೮೦,೦೦೦ ಕಾಲಾಳುಗಳು ಮತ್ತು ೯೦,೦೦೦ ಅಶ್ವಾರೋಹಿಗಳಿದ್ದರು.
  ಕೆಲವೇ ಸಮಯದಲ್ಲಿ ಅವನು ಬೇರೆ ಬೇರೆ ಪಾಳೆಯಗಾರರನ್ನು ತನ್ನೊಂದಿಗೆ ಸೇರಿಸಿಕೊಂಡಿದ್ದ. ಅವನಿಂದ ಸ್ಪೂರ್ತಿ ಪಡೆದ ದಕ್ಷಿಣ ಭಾರತದ ಹಲವು ಸಣ್ಣ ಪಾಳೆಯಗಾರರು ಅವನ ರೀತಿಯಲ್ಲೆ ಬ್ರಿಟೀಶರ ವಿರುದ್ಧ ಹೋರಾಡಲು ಶುರು ಮಾಡಿದರು.
(ನಾಳೆ ದೊಂಡಿಯಾ ವಾಘ್ ಭಾಗ-2)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ