Skip to main content

Blog number 2243.ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿನ ಜೋಡೆತ್ತುಗಳಾದ ಬಂಡಿರಾಮಚಂದ್ರ ಮತ್ತು ಅಮೀರ್ ಹಂಜಾ ಅವರ ಗೆಳೆತನಕ್ಕೆ 50 ನೇ ವರ್ಷದ ಸುವರ್ಣ ಮಹೋತ್ಸವ

#ಇವತ್ತಿನ_ನನ್ನ_ಅತಿಥಿಗಳು

#ಶಿವಮೊಗ್ಗ_ಜಿಲ್ಲಾ_ರಾಜಕಾರಣದ_ಜೋಡೆತ್ತುಗಳು

#ಮಾಜಿ_ಮುಖ್ಯಮಂತ್ರಿಗಳಾದ_ಬಂಗಾರಪ್ಪರ_ಅತ್ಯಾಪ್ತರು

#ಇವರಿಬ್ಬರ_ಗೆಳೆತನಕ್ಕೆ_50ನೇ_ವರ್ಷದ_ಸುವರ್ಣ_ಮಹೋತ್ಸವ

#ರಿಪ್ಪನಪೇಟೆ_ಅಮೀರ್_ಹಂಜಾ_ಮತ್ತು_ಬಿದರಳ್ಳಿಯ_ಬಂಡಿ_ರಾಮಚಂದ್ರ

#ಇವರಿಬ್ಬರ_ಗೆಳೆತನ_ಕುಂಸಿಯ_ರಾಮಪ್ಪ_ಮತ್ತು_ಸಂಜೀವಪ್ಪರ_ಗೆಳೆತನ_ನೆನಪಿಸುತ್ತದೆ.

https://youtu.be/RgsL_QhCveI?si=Zw3M7LHgJ2A5xjMG


   ನನ್ನ ಮತ್ತು ಇವರಿಬ್ಬರ ನಡುವಿನ ಗೆಳೆತನಕ್ಕೆ 30 ವರ್ಷ, ಇವರಿಬ್ಬರ ಗೆಳೆತನಕ್ಕೆ 50 ವಷ೯ ಬಂಡಿ ರಾಮಚಂದ್ರ ಶಿವಮೊಗ್ಗ ಜಿಲ್ಲಾ ಕಾಂಗ್ರೇಸಿನ ಉಪಾಧ್ಯಕ್ಷರು ಮತ್ತು ಹೊಸನಗರ ತಾಲೂಕಿನ ಈಡಿಗ ಸಮಾಜದ ಅದ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದವರು, ಇವರ ಪ್ರತ್ರಿ ಕೂಡ ಒಂದು ಅವದಿ ಜಿಲ್ಲಾ ಪಂಚಾಯತ್ ಸದಸ್ಯೆ ಆಗಿದ್ದರು, ಇವರ ಇನ್ನೊಬ್ಬ ಪುತ್ರಿಯ ಪತಿ ಖ್ಯಾತರಾದ ಪೋಲಿಸ್ ಇನ್ಸ್ಪೆಕ್ಟರ್ ಗುರುರಾಜ್ (ಸೈಬರ್ ಕ್ರೈಂ ನಲ್ಲಿದ್ದರು)
   ಅಮೀರ್ ಹಂಜಾ ಅಜ್ಜ ರಿಪ್ಪನ್ ಪೇಟೆಯ ಒಂದು ಕಾಲದ ಪ್ರಮುಖ ರಾಜಕಾರಣಿ ಜನಪ್ರತಿನಿದಿ ಆಗಿದ್ದವರು, ರಿಪ್ಪನ್ ಪೇಟೆ ವೃತ್ತದ ಬಹುಪಾಲು ಜಾಗ ಇವರ ಕುಟುಂಬದ ಆಸ್ತಿ ಆಗಿದೆ, ಇವರು ಆನಂದಪುರಂನಲ್ಲಿ ಪಿಯುಸಿ ಪ್ರಾರಂಭವಾದಾಗ ಇವರು ವಿದ್ಯಾರ್ಥಿ ಮುಖಂಡರು ನಂತರ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ಕಟ್ಟಾ ಅನುಯಾಯಿಗಳು.
  1996ರಲ್ಲಿ ಬಂಗಾರಪ್ಪನವರು ಶಿವಮೊಗ್ಗ ಲೋಕ ಸಭಾ ಚುನಾವಣೆ ತಯಾರಿ ನಡೆಸುವಾಗ ನಾನು ಬಂಗಾರಪ್ಪರ ಜೊತೆ ಸೇರಿದ್ದೆ ಆಗ ನನಗೆ ಆಶ್ಚರ್ಯ ಅನ್ನಿಸಿದ್ದು ಬಂಗಾರಪ್ಪನವರು ಇವರಿಬ್ಬರ ಜೊತೆ ಅನೇಕ ಆಪ್ತ ಸಮಾಲೋಚನೆ ನಡೆಸುತ್ತಿದ್ದಿದ್ದು.
   ಈಗಲೂ ಕಾಂಗ್ರೇಸಿನಲ್ಲಿ ಬಂಗಾರಪ್ಪರ ಪುತ್ರ ಜಿಲ್ಲಾ ಮಂತ್ರಿ ಮದು ಬಂಗಾರಪ್ಪರಿಗೆ ಆಪ್ತರಾಗೇ ರಾಜಕಾರಣ ಮಾಡುತ್ತಾರೆ ಇವತ್ತು ನನ್ನ ಕಛೇರಿಗೆ ಬಂದಿದ್ದರು ಸುಮಾರು ಹೊತ್ತು ಜಿಲ್ಲೆಯ ರಾಜಕಾರಣದ ವಿಚಾರ ಮಾತಾಡಿದೆವು.
   ಇವರಿಬ್ಬರ ಗೆಳೆತನ ಕುಂಸಿಯ ರಾಮಪ್ಪ ಮತ್ತು ಸಂಜೀವಪ್ಪ ರ ಗೆಳೆತನ ನೆನಪಿಸುತ್ತದೆ.
   ಜಿಲ್ಲಾ ಮಂತ್ರಿ ಮದು ಬಂಗಾರಪ್ಪನವರು ಇವರಿಬ್ಬರಿಗೆ ರಾಜಕಾರಣದಲ್ಲಿ ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನ ಮಾನ ನೀಡಲಿ ಎಂದು ಆಶಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...