Skip to main content

Blog number 2264. ಸ್ಥಳೀಯ ಸಣ್ಣ ಪತ್ರಿಕೆಗಳ ಕಾಲದ ನೆನಪುಗಳು

#ಸ್ಥಳೀಯ_ಪತ್ರಿಕೆಗಳ_ಕಳೆದು_ಹೋದ_ಕಾಲ

#ಈಗ_ರಾಜ್ಯ_ಮಟ್ಟದ_ಪತ್ರಿಕೆಗಳೇ_ಆ_ಸ್ಥಾನ_ಅಕ್ರಮಿಸಿದೆ

#ಸ್ಥಳೀಯ_ಪತ್ರಕತ೯ರಿಗೆ_ಆ_ಕಾಲದಲ್ಲಿ_ರಕ್ಷಣೆ_ಇರಲಿಲ್ಲ

#ಆಗಿನ_ಪತ್ರಕರ್ತರ_ಸಂಘಟನೆ_ಈಗಿನಂತೆ_ಬಲಿಷ್ಟವಾಗಿರಲಿಲ್ಲ

#ಆಗಿನ_ಜನಪ್ರತಿನಿಧಿಗಳಿಗೆ_ಅಧಿಕಾರಿಗಳು_ಸ್ಥಳೀಯ_ಪತ್ರಿಕೆಗಳ_ಬಗ್ಗೆ_ಭಯ_ಗೌರವ_ಇತ್ತು.

#ಜನ_ಸಾಮಾನ್ಯರು_ಸ್ಥಳೀಯ_ಪತ್ರಿಕೆಗಳಿಗೆ_ಬೆಂಬಲಿಸುತ್ತಿದ್ದರು.

  ಎಪ್ಪತ್ತರ ದಶಕದಿಂದ ಹೆಚ್ಚು ಕಡಿಮೆ 2000 ಇಸವಿ ತನಕ ಎಲ್ಲಾ ತಾಲೂಕು ಕೇಂದ್ರದಿಂದ ಪ್ರಕಟವಾಗುತ್ತಿದ್ದ ದಿನ ಪತ್ರಿಕೆಗಳು ಪ್ರಸಿದ್ಧಿ ಪಡೆದಿದ್ದವು ಇಲ್ಲಿ ಪ್ರಕಟಿಸಿರುವ #ನ್ಯಾಯದ_ತಕ್ಕಡಿ ದಿನಪತ್ರಿಕೆ ಕಾಗೋಡು ಹೋರಾಟದ ನೇತಾರ ಹೆಚ್.ಗಣಪತಿಯಪ್ಪನವರದ್ದು ಅದನ್ನು ಸಂಪಾದಕರಾಗಿ ನಡೆಸಿದವರು ತೀ.ನಾ. ಶ್ರೀನಿವಾಸ್ 1984 ರಲ್ಲಿ ಅದರ ಬೆಲೆ 15 ಪೈಸೆ.
  ಇದೇ ರೀತಿ ತೀರ್ಥಹಳ್ಳಿಯಿಂದ ಪ್ರಕಟವಾಗಿ ಶಿವಮೊಗ್ಗ ಜಿಲ್ಲೆಯ ಅರ್ದ ಭಾಗ ಪ್ರಸರಣವಾಗುತ್ತಿದ್ದ #ಛಲಗಾರ ದಿನಪತ್ರಿಕೆ ಸಂಪಾದಕರು ಗಣಪತಿಯವರು 1990ರಲ್ಲಿ ಇದರ ಬೆಲೆ 35 ಪೈಸೆ.
   ಆಗ ಅಧಿಕಾರಿ ಬಳಗ, ಜನಪ್ರತಿಗಳು ಪತ್ರಿಕೆಗಳನ್ನ ಭಯ ಮತ್ತು ಗೌರವದಿಂದ ಕಾಣುತ್ತಿದ್ದ ಕಾಲ, ಜನ ಸಾಮಾನ್ಯರೂ ಸ್ಥಳಿಯ ಪತ್ರಿಕೆಗಳಿಗೆ ಯಾರಿಂದಲಾದರೂ ತೊಂದರೆ ಎದುರಾದರೆ ಪತ್ರಿಕೆ ಪರವಾಗಿ ಮುಂದೆ ಬಂದು ನಿಲ್ಲುತ್ತಿದ್ದರು.
  ಈಗ ಕಾಲ ಬದಲಾಗಿದೆ ಇದೆಲ್ಲಾ ತಿರುಗಾ ಮುರುಗಾ ಆಗಿದೆ ಒಂದು ಕಾಲದ ಬಹುತೇಕ ಪತ್ರಿಕೆಗಳು ಇಲ್ಲವೇ ಇಲ್ಲ ಈಗ ರಾಜ್ಯ ಮಟ್ಟದ ಪತ್ರಿಕೆಗಳೇ ಜಿಲ್ಲಾ ಪತ್ರಿಕೆಗಳಾಗಿದೆ, ರಾಜ್ಯ ಮಟ್ಟದ ಪತ್ರಿಕೆಗಳು ಆಯಾ ಜಿಲ್ಲೆಗೊಂದು ಮುಖಪುಟ ವಿನ್ಯಾಸ ಮಾಡುತ್ತಿದೆ.
  ಆ ಕಾಲದ ಪತ್ರಕರ್ತರು ಬಹುತೇಕ ಬಡತನದಲ್ಲೇ ಜೀವನ ಕಳೆದರು ಸಂವಿದಾನ ಸಂರಕ್ಷಣೆ- ಆದಶ೯ಗಳ ಪಾಲನೆಗಾಗಿ ಅವರ ಜೀವಮಾನ ಮುಡುಪಾಗಿಟ್ಟರು ಸಾರ್ವಜನಿಕವಾಗಿ ಪತ್ರಕರ್ತರ ಹುದ್ದೆಗೆ ಅಪಾರ ಗೌರವ ಇತ್ತು.
  ಪತ್ರಕರ್ತರು ಕೂಡ ಮೌಲ್ಯಗಳನ್ನು ಪರಿಪಾಲಿಸುವ ಪ್ರಜಾಪ್ರಭುತ್ವದ ನಾಲ್ಕನೆ ಸ್ಥಂಭ ಅನ್ನಿಸಿದ್ದರು ಆದರೆ ಆಗ ಸ್ಥಳೀಯ ಪತ್ರಕರ್ತರ ಸಂಘಟನೆ ಈಗಿನಂತೆ ಬಲಿಷ್ಟ ಆಗಿರಲಿಲ್ಲ ಆದ್ದರಿಂದ ಪತ್ರಕರ್ತರಿಗೆ ರಕ್ಷಣೆ ಇರಲಿಲ್ಲ.
  ಕಾಗೋಡು ತಿಮ್ಮಪ್ಪನವರು ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿದ್ದಾಗ ಅವರಿಗೆ ಶಿವಮೊಗ್ಗದ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ವರದಿಗಾರ ಹುಲಿಮನೆ ತಿಮ್ಮಪ್ಪ, ಹಿಂದೂ ಪತ್ರಿಕೆ ವರದಿಗಾರ ಪ್ರಮೋದ್ ಮತ್ತು ಇಂಡಿಯನ್ ಎಕ್ಸಪ್ರೆಸ್ ವರದಿಗಾರ ಅರುಣ್ ನೀಡಿದ ಸಲಹೆ ಕಾರ್ಯರೂಪಕ್ಕೆ ಬಂದು ಇಡೀ ರಾಜ್ಯದಾದ್ಯಂತ ಪತ್ರಕರ್ತರಿಗೆ ರಾಜ್ಯ ಗೃಹ ಮಂಡಳಿಯಿಂದ #ಪತ್ರಕರ್ತರ_ಕಾಲೋನಿ ನಿರ್ಮಿಸಿ ಪತ್ರಕರ್ತರಿಗೆ ಜಿಲ್ಲಾ ಕೇಂದ್ರಗಳಲ್ಲಿ ನಿವೇಶನ ಹಂಚಿಕೆ ಮಾಡಿಸುವ ಕೆಲಸ ಮಾಡಿದ್ದು ಈಗ ನೆನಪುಗಳು.
    #Press_club_Bangalore #press_shimoga
#ಜಿಲ್ಲಾಪತ್ರಕರ್ತರಸಂಘ_ಶಿವಮೊಗ್ಗ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ