Skip to main content

Blog number 2278. ಲೆಕ್ಕಕ್ಕೆ ಸಿಗದ ಡ್ರೋನ್ ಗಳು ಜೋಗ್ ಜಲಪಾತ ಮೇಲೆ ಈ ವರ್ಷ

#ಈ_ಸಾರಿ_ಜೋಗ್_ಜಲಪಾತದ_ಮೇಲೆ_ಹಾರಿದ_ಡ್ರೋನ್_ಲೆಕ್ಕಕ್ಕೆ_ಇಲ್ಲ

#ಜೋಗ್_ಜಲಪಾತದ_ಪೋಟೋ_ಜೋಗದ_ಇತಿಹಾಸದಲ್ಲೇ_ದಾಖಲೆ

#ಕಾಲ_ಎಷ್ಟು_ಬದಲಾಗಿದೆ

#ಎಲ್ಲರನ್ನೂ_ಛಾಯಾಗ್ರಾಹಕರನ್ನಾಗಿ_ಮಾಡಿದ_ಸೆಲ್_ಫೋನ್_ಪ್ರಪಂಚ.

#jogfalls #waterfalllovers #waterfall #waterfallphotography #dronevideo #droneshots 

   ಮೊನ್ನೆ ಆಗಸ್ಟ್ 1 2024 ಗುರುವಾರ ಬೆಳಿಗ್ಗೆ ಲಿಂಗನಮಕ್ಕಿ ಅಣೆಕಟ್ಟಿನಿಂದ ಟ್ರಸ್ಟ್ ಗೆ ತೆರೆದು ಹೆಚ್ಚುವರಿ ನೀರನ್ನು ಬಿಡಲಾಗಿತ್ತು ಅವತ್ತು ಸಂಜೆ ಜೋಗ ಜಲಪಾತ ತನ್ನ ಗತವೈಭವವನ್ನು ಮರಳಿ ಪಡೆದಿತ್ತು.
  ಆ ಸಂಜೆಯಿಂದ ಜೋಗ್ ಜಲಪಾತದ ಮೇಲೆ ಹಾರಾಡಿದ ಡ್ರೋನ್ಗಳು ಲೆಕ್ಕಕ್ಕಿಲ್ಲ ಪ್ರವಾಸಿಗರು ಅವರ ಸೆಲ್ ಫೋನ್ ನಲ್ಲಿ ಸೆರೆ ಹಿಡಿದ ಜೋಗದ ಚಿತ್ರಗಳು ದಾಖಲೆಯಾಯಿತು ಭವಿಷ್ಯ ಜೋಗ್ ಜಲಪಾತದ ಇತಿಹಾಸದಲ್ಲಿ ಈ ರೀತಿ ಚಿತ್ರೀಕರಣ ಇದೇ ಮೊದಲು.
  ಮುಂದಿನ ದಿನಗಳಲ್ಲಿ ಇದು ಇನ್ನು ಹೆಚ್ಚಾಗುತ್ತದೆ ಕಾಲ ಹೇಗೆ ಬದಲಾಗಿದೆ, ಮೊದಲೆಲ್ಲ ಫೋಟೋಗ್ರಫಿ ಜನಸಾಮಾನ್ಯರ ಕೈಗೆ ಎಟುಗುತ್ತಿರಲಿಲ್ಲ ಅದೇನಿದ್ದರೂ ಶ್ರೀಮಂತರಿಗೆ ಮಾತ್ರ ಎಂಬ ಕಲ್ಪನೆ ಯಾಕೆಂದರೆ ದುಬಾರಿ ಬೆಲೆಯ ಕ್ಯಾಮೆರಾ ಮತ್ತು ತೆಗೆದ ಫೋಟೋಗಳನ್ನು ಸಂಸ್ಕರಿಸುವ ದುಬಾರಿ ವೆಚ್ಚ ಚಿತ್ರೀಕರಣದ ಬಗ್ಗೆ ಆಸಕ್ತಿ ಇದ್ದರು ನಿರಾಸಕ್ತಿ ಹೊಂದುವಂತ ಕಾಲವಾಗಿತ್ತು.
  ಸೆಲ್ ಫೋನ್ ಗಳ ಕಾಲ ಎಲ್ಲವನ್ನು ಬದಲಿಸಿತ್ತು ಒಂದು ಮೊಬೈಲ್ ಫೋನ್ ಕೈಯಲ್ಲಿ ಹಿಡಿದರೆ ಅದರಲ್ಲಿ ಏನುಂಟು ಏನಿಲ್ಲ ಗಡಿಯಾರ, ಅಲಾಂ,ಫೋನ್, ಕ್ಯಾಮೆರಾ, ವಿಡಿಯೊ, ರೇಡಿಯೋ, ಟೇಪ್ ರೆಕಾರ್ಡರ್ , ಟಿವಿ, ಹವಾಮಾನ,ಡೈರಿ, ವಿಶ್ವಕೋಶ,ಬರೆಯುವಹಾಳೆ, ಸ್ಲೇಟ್ ,ಕಂಪ್ಯೂಟರ್ ಹೀಗೆ ಏನೇನೆಲ್ಲ ಸೇರುತ್ತಲೇ ಇದೆ.
  ಸೆಲ್ ಫೋನ್ ಖರೀದಿಸಿದರೆ ಅದರಲ್ಲಿ ಇದೆಲ್ಲವೂ ಇದೆ ಪ್ರತಿಯೊಬ್ಬರನ್ನು ಪೋಟೋ ಗ್ರಾಪಾರ್ ಮಾಡಿದೆ ಆದ್ದರಿಂದ ಮೊನ್ನೆ ಜೋಗ್ ಜಲಪಾತ ಈ ರೀತಿ ಚಿತ್ರಿಕರಣ ಆಯಿತು,ಮೊದಲೆಲ್ಲ ಶಿವಮೊಗ್ಗದಿಂದ ವಾರ್ತಾ ಇಲಾಖೆಯ ಫೋಟೋಗ್ರಾಫರ್ ಬಂದು ದಿನವಿಡೀ ಕಾದು ಒಂದು ಫೋಟೋ ತೆಗೆದು ಪತ್ರಿಕೆಗಳಿಗೆ ನೀಡುತ್ತಿದ್ದರು ಆ ಒಂದು ಫೋಟೋವೇ ಜೋಗ್ ಜಲಪಾತ ತುಂಬಿದಾಗೆಲ್ಲ ಕೆಲವು ದಶಕಗಳ ಕಾಲ ಆ ಒಂದೇ ಫೋಟೋ ಪತ್ರಿಕೆಗಳಲ್ಲಿ ಪ್ರಕಟ ಆಗಿರುತ್ತಿತ್ತು.
  ಈಗಿನ ಕಾಲದಲ್ಲಿ ಸೆಕೆಂಡ್ -ನಿಮಿಷಗಳ ಅಂತರದ ಜೋಗ ಜಲಪಾತದ ದೃಶ್ಯ ಸೆರೆಯಾಗಿದೆ ಹಾಗಾಗಿ ಪ್ರತಿಯೊಬ್ಬರ ಚಿತ್ರೀಕರಣವು ವಿಭಿನ್ನ ಜೊತೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ರೀಲ್ಸ್ ಲೈವ್ ಪೋಸ್ಟ್ ಡಿಪಿಗಳಲ್ಲಿ ಜೋಗ್ ಜಲಪಾತದ ಬಣ್ಣ ಬಣ್ಣದ ಬಗೆ ಬಗೆಯ ಮೆರವಣಿಗೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...