Skip to main content

Blog number 2281.ಕರ್ನಾಟಕದ ಕನ್ನಡಿಗ ವಾಗಿ ಲಿಂಗ್ ಹಿಮಾಲಯದ ಕೇದಾರನಾಥದ ಪ್ರಧಾನ ಪೂಜಾರಿ,

#ಎಲ್ಲಿಯ_ಕೇದಾರನಾಥ

#ಎಲ್ಲಿಯ_ವಾಗೀಶ್_ಲಿಂಗ್

#ದಾವಣಗೆರೆಜಿಲ್ಲೆ_ಹರಿಹರ_ತಾಲೂಕಿನ_ಭಾನುವಳ್ಳಿಯಲ್ಲಿ_ಜನಿಸಿದ 

#ವಾಗೀಶ್_ಲಿಂಗ್_ಕೇದಾರನಾಥದ_ದೇವಾಲಯದ_ಮುಖ್ಯ_ಪ್ರಧಾನ_ಪೂಜಾರಿ

#ಇವರು_ಶಿವಮೊಗ್ಗ_ಜಿಲ್ಲೆ_ಶಿಕಾರಿಪುರ_ತಾಲೂಕಿನ

#ಸಾಲೂರು_ಹಿರೇಮಠದ_ಗುರುಲಿಂಗ_ಶಿವಾಚಾರ್ಯಸ್ವಾಮೀಜಿಗಳ_ಶಿಷ್ಯ

#ಕೇದಾರನಾಥದ_ಪ್ರಧಾನ_ಪೂಜಾರಿ_ಮತ್ತು_ಜಗದ್ಗುರುಗಳು_ಆಗಬೇಕೆಂದರೆ 

#ಅವರು_ಕರ್ನಾಟಕದ_ವೀರಶೈವ_ಶುದ್ಧ_ಜಂಗಮ_ಹಿರೇಮಠದ_ಪರಂಪರೆಯವರು 

#ಆಗಿರಬೇಕೆಂಬ_ನಿಯಮ_ಇದೆ_ಇದು_3332_ವರ್ಷಗಳ_ಪರಂಪರೆ.


    1995 ರಿಂದ 2000 ಇಸವಿ ತನಕ ನಾನು ಆನಂದಪುರಂ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯನಾಗಿದ್ದೆ ಆಗ ಶಿಕಾರಿಪುರ ತಾಲೂಕಿನ ಸಾಲೂರು ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿಗಳನ್ನು ನಮ್ಮೂರ ಸಮೀಪದ ಗೇರುಬೀಸಿನ ಹೊಳೆ ಮಲ್ಲೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಕಾರ್ಯಕ್ರಮಕ್ಕೆ ಅಹ್ವಾನ ನೀಡಲು ಹೋಗಿದ್ದಾಗಿಂದ ಸ್ವಾಮೀಜಿಗಳ ಸಂಪರ್ಕವಾಯಿತು.
   ನಂತರ ಅನೇಕ ಕಾರ್ಯಕ್ರಮಗಳಲ್ಲಿ ನಾವಿಬ್ಬರು ಜೊತೆಯಾಗಿ ಭಾಗವಹಿಸಿದ್ದು ಆಗ ಅವರ ಜೊತೆ ಹರಿಹರ ತಾಲೂಕಿನ ಭಾನುವಳ್ಳಿಯ ವಾಗೇಶ್ ಲಿಂಗ್ ಬರುತ್ತಿದ್ದರು ಅವರು ಸಾಲೂರು ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿಗಳ ಶಿಷ್ಯರಾಗಿದ್ದರು ಮತ್ತು ಸಾಲೂರಿನ ವೇದ ಪಾಠಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
  ನಂತರ ಅವರು ಹಿಮಾಲಯದ ಕೇದಾರನಾಥ ದೇವಾಲಯದಲ್ಲಿ ಪ್ರಧಾನ ಪೂಜಾರಿಗಳಾಗಿ ಇದ್ದಾರೆಂದು ಸುದ್ದಿ ಕೇಳಿದ್ದೆ.
   ಕೆಲವು ವರ್ಷದ ಹಿಂದೆ ನಮ್ಮ ಸಮೀಪದ ಹೊಸನಗರ ತಾಲೂಕಿನ ಬಟ್ಟೆ ಮಲ್ಲಪ್ಪದ #ಪಾಪು_ಗೌಡರೆಂದು ನಾವು ಕರೆಯುವ ವಿರೂಪಾಕ್ಷಗೌಡರು ಲಾರಿ ಮಾಲೀಕರು ಮತ್ತು ಹೊಸನಗರ ತಾಲೂಕು ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷರು ಅವರು ಕೇದಾರನಾಥಕ್ಕೆ ಹೋದಾಗ ಅವರ ಅನುಭವಗಳನ್ನು ಹೇಳಿಕೊಂಡಿದ್ದರು.
  ಅವರು ಅವತ್ತು ಕೇದಾರನಾಥ ತಲುಪಿದಾಗ ಅಂತಹ ಜನಜಂಗುಳಿ ಇರಲಿಲ್ಲವಂತೆ,ಸುಪ್ರೀಂ ಕೋರ್ಟ್ ನ್ಯಾಯಾಧೀಶರು ದರ್ಶನಕ್ಕೆ ಬಂದಿದ್ದರಿಂದ ಹೆಚ್ಚು ಸುರಕ್ಷೆ ನೀಡಲಾಗಿತ್ತಂತೆ.
  ನಂತರ ದೇವಾಲಯದ ಒಳ ಹೋಗಿ ದರ್ಶನ ಮಾಡುವಾಗ ಕನ್ನಡದಲ್ಲಿ ನೀವು ಹೊಸನಗರ ತಾಲೂಕಿನವರಾ? ಎಂಬ ಪ್ರಶ್ನೆ ಪ್ರಧಾನ ಪೂಜಾರಿಯವರು ಕೇಳಿದಾಗ ಪಾಪು ಗೌಡರಿಗೆ ದಿಗ್ಭ್ರಮೆ ಆಯಿತಂತೆ...ಹೌದು ಎಂದಾಗ ನೀವು ಬಟ್ಟೆ ಮಲ್ಲಪ್ಪದ ಪಾಪುಗೌಡರಲ್ಲವೇ ಎಂದರಂತೆ!! ಆಗ ಅವರಿಗೆ ಇನ್ನೂ ಆಶ್ಚಯ೯ ಆಯಿತಂತೆ.
  ನಂತರ ಅವರೇ ಸಾಲೂರು ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿಗಳ ಜೊತೆ ಅವರ ಮನೆಗೆ ಬಂದದ್ದನ್ನು ನೆನಪಿಸಿದರಂತೆ ನಂತರ ರುದ್ರಾಕ್ಷಿ ಮಾಲೆಗಳನ್ನು ಇವರ ಕೊರಳಿಗೆ ಹಾಕಿ ಹಾರೈಸಿದರಂತೆ.
   ಹೀಗೆ ಕೇದಾರನಾಥದ ಪ್ರಧಾನ ಪೂಜಾರಿ ಕರ್ನಾಟಕದವರು ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿಯ ವಾಗೀಶ್ ಲಿಂಗ್ ಕಳೆದ 20 ವರ್ಷದಿಂದ ಅಲ್ಲಿದ್ದಾರೆ.
   ಕೇದಾರನಾಥದ ಪ್ರಧಾನ ಪೂಜಾರಿ ಮತ್ತು ಜಗದ್ಗುರುಗಳು ಆಗಬೇಕಾದವರು ಕರ್ನಾಟಕ ರಾಜ್ಯದ ವೀರಶೈವ ಶುದ್ಧ ಜಂಗಮ ಹಿರೇಮಠದವರೇ ಆಗಬೇಕೆಂಬ ನಿಯಮ ಕಳೆದ 3332 ವರ್ಷಗಳಿಂದ ನಡೆದು ಬಂದ ಪರಂಪರೆ.
   ಕೇದಾರನಾಥದ ಎಲ್ಲ ಮಠಗಳಲ್ಲಿ ದೇವಾಲಯಗಳು ಕನ್ನಡದ ಬೋರ್ಡ್ ಗಳು ಕೂಡ ಇದೆ ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ