Skip to main content

Blog number 2283. ಭಾಷಾರವರ ಕನಸು ನನಸಾಗಿಸಿದ MH ಕಾಫಿ ಶಾಪ್ ನಿಂದ ಕೆಫೆ ಮಲ್ನಾಡ್ ಭವನ

#M_H_ಕಾಫಿಶಾಪ್_ಶಿವಮೊಗ್ಗದ_ನೆಹರು_ರಸ್ತೆಯ_ಎರಡನೆ_ಕ್ರಾಸಲ್ಲಿ_ಪ್ರಸಿದ್ದಿ_ಪಡೆದಿತ್ತು

#ಇದರ_ಮಾಲಿಕ_ಬಾಷಾರಿಗೆ_ರೆಸ್ಟೋರಾಂಟ್_ಮಾಡಬೇಕೆನ್ನುವುದು_ಜೀವಮಾನದ_ಕನಸು

#ಈಗ_ಅವರ_ಕನಸು_ನನಸಾಗಿದೆ

#ಇದೇ_ಜಾಗದಲ್ಲಿ_ಶುಚಿ_ರುಚಿಯ_ಬಿಸಿ_ಬಿಸಿ_ಊಟ_ಉಪಹಾರದ

#ಕೆಫೆ_ಮಲ್ನಾಡ್_ಭವನ_ಪ್ರಾರಂಬಿಸಿದ್ದಾರೆ

#ಒಮ್ಮೆ_ಬೇಟಿ_ನೀಡಿ.


#Cafemalnadbhavana #shivamogga #neharuroad #shivamoggarestoraunt #hotel 
#besthotel 

https://youtu.be/WxAp4S6hIUw?si=HWHwFnLwPoRTABsA

    ಶಿವಮೊಗ್ಗದ ನೆಹರೂ ರಸ್ತೆಯ ಎರಡನೇ ಕ್ರಾಸಿನಲ್ಲಿ ಶೋಭಾ ಸ್ಟೋರ್ ಪಕ್ಕದ ಕಿರಿದಾದ ಓಣಿಯಲ್ಲಿದೆ MH ಕಾಫೀ ಶಾಪ್ ಇಲ್ಲಿನ ಉತ್ಕೃಷ್ಟ ಪಿಲ್ಟ್ ರ್ ಕಾಫೀ ಮತ್ತು ಟೀಗಾಗಿ ಜನ ಹುಡುಕಿಕೊಂಡು ಬರುತ್ತಿದ್ದರು.
  ಹಿಂದೆ ಇವರ ಬಗ್ಗೆ ಬರೆದ ಬ್ಲಾಗ್ ಲೇಖನ ಇಲ್ಲಿ ಕ್ಲಿಕ್ ಮಾಡಿ ಓದಿ...
https://arunprasadhombuja.blogspot.com/2022/04/mh.html
  ಈಗ ಈ ಕಾಫಿ ಶಾಪ್ #ಕೆಫೆ_ಮಲ್ನಾಡ್_ಭವನ ಆಗಿದೆ ಇಲ್ಲಿ ಈಗ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಕೂಡ ಲಭ್ಯವಿದೆ.
   ಮಾಲೀಕರು ಹಿಂದಿನ ಎಂ ಹೆಚ್ ಕಾಫಿ ಶಾಪಿನ #ಭಾಷಾ ರವರೇ ಈ ಹೊಸ ಕೆಫೆ ಮಲ್ನಾಡ್ ಭವನದ ಮಾಲೀಕರು
ಎಂ ಹೆಚ್ ಕಾಫಿ ಶಾಪ್ ಪಕ್ಕದಲ್ಲಿದ್ದ ಜನ ಹೋರಾಟ ಪ್ರಿಂಟಿಂಗ್ ಪ್ರೆಸ್ ಮತ್ತು ಜನ ಹೋರಾಟ ಪತ್ರಿಕೆಯ ಕಚೇರಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗಿದ್ದರಿಂದ ಕಾಲಿ ಇದ್ದ ಆ ರೂಮಗಳನ್ನು ಕೆಫೆ ಮಲ್ನಾಡ್ ಭವನ ಆಗಿ ಬದಲಾಯಿಸಿದ್ದಾರೆ.
 ಇತ್ತೀಚೆಗೆ ನಾನು ಶಿವಮೊಗ್ಗ ಹೋಗದೆ ತುಂಬಾ ದಿನಗಳಾಯ್ತು ಮೊನ್ನೆ ಶಿವಮೊಗ್ಗದಿಂದ ಬಂದಿದ್ದ ಪತ್ರಕರ್ತ ಮಿತ್ರ ಶೃಂಗೇಶ್ ಹೇಳುತ್ತಿದ್ದರು ಭಾಷಾ ತುಂಬಾ ಅದ್ಭುತವಾದಂತಹ ಹೋಟೆಲ್ ಮಾಡಿದ್ದಾರೆ ಅಲ್ಲಿ ಟಿಫನ್ ಊಟ ಎಲ್ಲಾ ನಂಬರ್ ಒನ್ ಇದೆ ರುಚಿ ಶುಚಿ ಇದೆ ಅನ್ನುತ್ತಿದ್ದರು
   ಒಂದು ಇಂತಹ ರೆಸ್ಟೋರೆಂಟ್ ಮಾಡಬೇಕೆನ್ನುವುದು ಭಾಷಾರವರ ಕನಸ್ಸು ಆಗಿತ್ತಂತೆ, ಆ ಕನಸು ಈಡೇರಿತು ಅಂತ ಸಿಂಗೆಶತ್ರ ಹೇಳಿದ್ದರಂತೆ.
 ಮೊನ್ನೆ ನನ್ನ ಮಗ ಶಿವಮೊಗ್ಗ ಹೋದಾಗ ಭಾಷಾರವರ ಹೋಟೆಲ್ ಗೆ ಹೋಗಿ ಫೋಟೋ ವಿಡಿಯೋ ತರಲು ಹೇಳಿದ್ದೆ.
  ನೀವು ಶಿವಮೊಗ್ಗ ಹೋದರೆ ನೆಹರು ರೋಡ್ ಸೆಕೆಂಡ್ ಕ್ರಾಸ್ ತಿರುಗಿ ಅಲ್ಲಿ ಎಡ ಭಾಗದಲ್ಲಿ ಶೋಭಾ ಸ್ಟೋರ್ ಪಕ್ಕದ ಓಣಿಯಲ್ಲಿ ಹೋದರೆ ಅಲ್ಲಿದೆ ಕೆಫೆ ಮಲ್ನಾಡ್ ಭವನ ಅಲ್ಲೇ ಉತ್ಕೃಷ್ಟ ಚಹಾ ಕಾಫಿ ರುಚಿ ರುಚಿಯಾದ ಬಿಸಿಬಿಸಿಯಾದ ಉಪಹಾರ ಮತ್ತು ಮಧ್ಯಾಹ್ನದ ಊಟ ನಿತ್ಯ ಲಭ್ಯವಿದೆ ಅಲ್ಲಿ ಹಸನ್ಮುಖಿ ಕನಸುಗಾರ ಭಾಷಾ ಇರುತ್ತಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...