Skip to main content

Blog number 2304. ಹುಲಿ ವೇಷದ ಹುಲಿ ಕುಣಿತ

ಹುಲಿ_ವೇಷ_ಮೂಲ_ಎಲ್ಲಿ ?
  ಮನುಷ್ಯ_ಹುಲಿಯಾಗಿ_ಬದಲಾಗಿ_ದೇವರ_ಸೇವೆಯ_ಹುಲಿವೇಷ,

#hulivesha #durgapuja #DurgaPuja2024 #navaratri #karavali #dasara2024 #karnatakatourism #pulikali #manavibhag #Puliyattam #baagnach

 ದಸರಾ_ಕೃಷ್ಣಜನ್ಮಾಷ್ಟಮಿ_ಗಣೇಶಚತುರ್ಥಿ_ಓಣಂಗಳಲ್ಲಿ_ಹುಲಿವೇಷ

 ದುರ್ಗಾದೇವಿಯ_ವಾಹನ_ಹುಲಿ

ಕರಾವಳಿಯ_ಹುಲಿವೇಷ_ಕೇರಳದ_ಪುಲಿಕಲಿ 

    ಕರಾವಳಿಯ ಹುಲಿ ವೇಷ, ಕೇರಳದ ಪುಲಿ ನಲಿಕೆ, ಒಡಿಷಾದ ಬಾಗ್ ನಾಚ್, ನಾಗಪುರದ ಮಾನವೀ ವಾಗ್, ತಮಿಳುನಾಡಿನ ಪುಲಿಯಟ್ಟಮ್ ಗಳು ಮನುಷ್ಯ ಹುಲಿಯಾಗಿ ಬದಲಾಗಿ ದೇವಿಯ ಸೇವೆ ಮಾಡುವುದು ಮತ್ತು ದುಗಾ೯ ದೇವಿ ವಾಹನ ಹುಲಿ ಕೂಡ.
   ಹುಲಿ ವೇಷದ ಮೂಲ ಕರ್ನಾಟಕದ ಕರಾವಳಿಯೋ? ಅಥವ ಕೇರಳದ ಪುಲಿಕಲಿಯೇ ಮೂಲವೋ ಎಂಬ ಬಗ್ಗೆ ಚರ್ಚೆಗಳಿದೆ.
   ಆದರೆ ಈ ಹುಲಿ ವೇಷ ಆಯಾ ಪ್ರಾದೇಶಿಕ ಹೆಸರಲ್ಲಿ ಒಡಿಷಾದ ಗ೦ಜಾಂ ಡಿಸ್ಟ್ರಿಕ್ಟ್ ನಲ್ಲಿ ಬಾಗ್ ನಾಚ್ ಅಂತ, ಮಹಾರಾಷ್ಟ್ರದ ನಾಗಪುರದಲ್ಲಿ ಮಾನವಿ ವಾಗ್, ತಮಿಳುನಾಡಿನಲ್ಲಿ ಪುಲಿಯಾಟ್ಟಮ್ ಹೆಸರಿನಲ್ಲಿ ಭಾರತದಲ್ಲಿ ಹುಲಿ ವೇಷಗಳು ನಡೆಯುತ್ತಿದೆ ಅದು ಯಾವಾಗಿಂದ ಪ್ರಾರಂಭ ಆಗಿದೆ ಎಂಬ ಮಾಹಿತಿ ಇಲ್ಲ.
   ನೇಪಾಳದಲ್ಲಿ, ಚೈನಾದಲ್ಲಿ, ಹಾಂಕಾಂಗ್, ಜಪಾನ್, ಥಾಯ್ ಲ್ಯಾಂಡ್ ಅಷ್ಟೆ ಅಲ್ಲ ಕೊಲ೦ಬಿಯಾದ ಕಾರ್ನಿವಲ್ ನಲ್ಲೂ ಹುಲಿ ವೇಷಗಳಿದೆ.
  ಹುಲಿ ವೇಷದಾರಿಗಳು ಬಾರ್ ಗೆ ಹೋಗಿ ಬ್ರಾಂಡಿ ಕುಡಿಯುವ ಪನ್ನಿ ಸಂದರ್ಭಗಳ ಪೋಟೋಗಳು ತಮಾಷೆ ಅನ್ನಿಸಿ ನಗು ತರಿಸುತ್ತದೆ.
   ಒಮ್ಮೆ ಮಂಗಳೂರಿಂದ ಬರುವಾಗ ಕಾಪು ಸಮೀಪದ ಹೋಟೆಲ್ ನಲ್ಲಿ ಊಟ ಮಾಡುವಾಗ 8-10 ಜನರ ಹುಲಿ ವೇಷದ ತಂಡ ಬಾಯಾರಿಸಿಕೊಳ್ಳಲು ಬಾರ್ ಗೆ ಬಂದಾಗ ಎಲ್ಲಾ ಹುಲಿಗಳು ಕುಡಿದ ಪಾನಿಯದ ಬಿಲ್ ನಾನೇ ಕೊಟ್ಟಿದ್ದು ಒಂದು ಗಮ್ಮತ್ತಿನ ಸನ್ನಿವೇಷ ಆಗಿತ್ತು.
  ಈಗೆಲ್ಲ ಮೊದಲಿನ ರೀತಿ ದೇಹದ ಚರ್ಮಕ್ಕೆ ಅಪಾಯಕಾರಿ ಆದ ಸೀಸದ ಅಂಶದ ಆಯಿಲ್ ಪೇಯಿಂಟ್ ಬಳಸುವುದಿಲ್ಲ, ಸಿನಿಮಾ ನಾಟಕ ಕ್ಷೇತ್ರದಲ್ಲಿ ಬಳಸುವ ವಾಟರ್ ಬೇಸ್ ಬಣ್ಣಗಳಿಂದ ಈಗಿನ ಹುಲಿ ವೇಷದಾರಿಗಳು ಸೇಪ್ ಆಗಿದ್ದಾರೆ.
    ಇತ್ತೀಚಿನ ಕನ್ನಡದ ಚಲನಚಿತ್ರಗಳಲ್ಲೂ ಹುಲಿ ವೇಷಗಳು ಸಿನಿಮಾ ಗಲ್ಲಾಪೆಟ್ಟಿಗೆ ತುಂಬಿಸಿದೆ, ಮೊನ್ನೆ ದಸರಾ ಕೊನೆಯ ದಿನ ನವರಾತ್ರಿಯಂದು ಕನ್ನಡದ ಚಲನಚಿತ್ರ ಮಾರುಕಟ್ಟೆಯಲ್ಲಿ ತಮ್ಮದೇ ಛಾಪನ್ನು ಮೂಡಿಸಿರುವ ಕರಾವಳಿಯ ಶೆಟ್ಟಿ ತ್ರಿಯತ್ರರು ಈ ಹುಲಿ ವೇಷದ ನೃತ್ಯ ಮಾಡಿ ಹುಲಿ ವೇಷಕ್ಕೆ ತಾರಾಮೌಲ್ಯವೂ ತಂದಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...