Skip to main content

Blog number 3355. ಕಾಡಾನೆ ಮಾನವ ಸಹ ಬಾಳ್ವೆ ಅನಿವಾಯ೯.

https://www.facebook.com/share/p/15ppqHt8Pd/

*#ಕಾಡಾನೆ_ವರ್ಷ_ವರ್ಷ_ಈ_ಮಾರ್ಗದಲ್ಲಿ_ಸಂಚರಿಸಿದರೆ_ನಾವೇನು_ಮಾಡೋಣ?*

  *ಕಾಡಾನೆ ಓಡಿಸುವುದು ಸ್ಥಳಾಂತರ ಮಾಡುವುದು ಮಾತ ಪರಿಹಾರವಾ?*

  *ಹೊಸ ಹೊಸ ಆನೆ ಕಾರಿಡಾರ್ ಆದರೆ ಏನು ಮಾಡುವುದು? ಆ ಭಾಗಗಳಲ್ಲಿ ಮಾನವ - ಆನೆ ಸಂಘರ್ಷ ನಡೆಯದೇ ಇರುವುದಿಲ್ಲ!!*
  
*ಮೈಸೂರಿನ ನೇಚರ್ ಕನ್ಸರ್ವೇಷನ್ ಫೌಂಡೇಷನ್ ಅಧ್ಯಯನ ಓದಿ.*

 *ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷದ ಪರಿಹಾರವಾಗಿ ಇದು ಉಪಯೋಗಕ್ಕೆ ಬಂದೀತು.*


#humanelephantcoexistence #corridor #widelephant #malenadu #westernghatsofindia 
#elephant #elephantresearch #wildlife 

  *ಪಶ್ಚಿಮಘಟ್ಟ ಪ್ರದೇಶದಲ್ಲಿ ಹೆಚ್ಚಿನ ಕಾಡಾನೆಗಳು ಕಂಡುಬರುತ್ತವೆ. ಮಾನವ– ಆನೆ ಸಂಘರ್ಷವು ಕರ್ನಾಟಕದಲ್ಲಿ ಮಾತ್ರವಲ್ಲದೆ ಪಕ್ಕದ ತಮಿಳುನಾಡಿನಲ್ಲೂ ಇತ್ತು.*

*ಅಲ್ಲಿಯೂ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸುವ ಪರಿಪಾಟವಿತ್ತು.*

*ಆಗ ತಮಿಳುನಾಡಿನ ನೆರವಿಗೆ ಹೋಗಿದ್ದು ಮೈಸೂರಿನ ನೇಚರ್ ಕನ್ಸರ್ವೇಷನ್ ಫೌಂಡೇಷನ್ ಎಂಬ ಸ್ವಯಂಸೇವಾ ಸಂಸ್ಥೆ ಎಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿದೆ, ಅವು ನಡೆದಾಡುವ ಪಥ ಯಾವುದು, *ಕಾಡಾನೆಗಳ ಗುಂಪು ಯಾವ ಸಮಯದಲ್ಲಿ ಯಾವ ಭಾಗದಲ್ಲಿ*
*ಇರುತ್ತದೆ ಎಂಬ ಬಗ್ಗೆ* *ಕೂಲಂಕಷವಾಗಿ ಅಧ್ಯಯನ ನಡೆಸಿ, ತಮಿಳುನಾಡಿನ ವಾಲ್ಪರೈ ಪ್ರಸ್ಥಭೂಮಿ ವ್ಯಾಪ್ತಿಯ 102* *ಹಳ್ಳಿಗಳ ನಿವಾಸಿಗಳಿಗೆ ಹಾಗೂ ಅತಿಹೆಚ್ಚು ಸಂಘರ್ಷಕ್ಕೆ ಗುರಿಯಾಗುವ ಪ್ರದೇಶಗಳಲ್ಲಿನ ಜನರಿಗೆ ಕಾಡಾನೆಗಳ* *ಚಲನವಲನದ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡುವ ಹೊಸ ಹಾಗೂ ಸುಲಭವಾದ ಪದ್ಧತಿಯನ್ನು ಸಂಸ್ಥೆಯು ಪರಿಚಯಿಸಿತು.*

*ಈ ವಿಧಾನ ಬಹಳ ಯಶಸ್ವಿ ಆಗಿದ್ದು, ಹಿಂದಿನ ಇಪ್ಪತ್ತು ವರ್ಷಗಳಲ್ಲಿ ಕಾಡಾನೆಯ ದಾಳಿಗೆ ಒಬ್ಬ ವ್ಯಕ್ತಿ ಮಾತ್ರ ಬಲಿಯಾಗಿದ್ದಾನೆ.*

      *ಕಾಫಿ, ಟೀ ತೋಟಗಳಿಗೆ ಸೋಲಾರ್ ಆಧಾರಿತ ವಿದ್ಯುತ್ ತಂತಿಬೇಲಿ ನಿರ್ಮಿಸಿರುವುದರಿಂದ ತಿರುಗಾಡಲು ಆನೆಗಳು ಅನಿವಾರ್ಯವಾಗಿ ಮಾನವರು ಬಳಸುವ ರಸ್ತೆಗಳನ್ನೇ ಬಳಸುತ್ತಿವೆ. ಈ ಅಂಶವೂ ಸಂಘರ್ಷ ಹೆಚ್ಚಳಕ್ಕೆ ಕಾರಣವಾಗಿದೆ. ವಿಜ್ಞಾನಿಗಳ ಅಧ್ಯಯನದ ಪ್ರಕಾರ, ಬೆಳಗಿನ 6ರಿಂದ 10 ಗಂಟೆ ಹಾಗೂ ಸಂಜೆಯ 4ರಿಂದ 8 ಗಂಟೆಯ ಸಮಯದಲ್ಲೇ ಅತಿಹೆಚ್ಚು ಸಂಘರ್ಷಗಳು ಉಂಟಾಗಿವೆ. 2010ರಿಂದ 2022ರ ಅವಧಿಯಲ್ಲಿ ಹಾಸನ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಒಟ್ಟು 54 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರದೇಶದಲ್ಲಿ ಆನೆಗಳಿವೆ ಎಂಬುದೇ ಅನೇಕರಿಗೆ ತಿಳಿದಿರಲಿಲ್ಲ. ಬೆಳಗಿನ ಸಮಯದಲ್ಲಿ ಕೂಲಿಗಾಗಿಯೋ ಬೇರೆ ಯಾವುದೋ ಕೆಲಸದ ನಿಮಿತ್ತ ಹೋಗುವಾಗ ಮತ್ತು ಸಂಜೆ ತಿರುಗಿ ಬರುವ ಹೊತ್ತಿನಲ್ಲೇ ಆನೆಗಳು ಸಂಚರಿಸುತ್ತವೆ. ತನ್ನ ಪಥದಲ್ಲಿ ಮನುಷ್ಯನನ್ನು ಕಂಡ ಅವು ರೊಚ್ಚಿಗೇಳುತ್ತವೆ*

     *140 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಅತಿಹೆಚ್ಚು ಜೀವಿವೈವಿಧ್ಯಗಳಿರುವ ಅಪೂರ್ವ ದೇಶವಾಗಿದೆ. 1975ರಿಂದ ಈಚೆಗೆ ಪಶ್ಚಿಮಘಟ್ಟಗಳ ಶೇ 40ರಷ್ಟು ಪ್ರದೇಶ ಮಾನವ ಅತಿಕ್ರಮಣಕ್ಕೆ ಒಳಗಾಗಿದೆ ಎಂದು ಅಂಕಿಅಂಶ ಹೇಳುತ್ತದೆ. ಆದರೂ ಆನೆಗಳಂತಹ ಬೃಹತ್ ಜೀವಿಗಳು ಬದಲಾದ ಸನ್ನಿವೇಶಕ್ಕೆ ಹೊಂದಿಕೊಂಡು ಬದುಕುವುದನ್ನು ರೂಢಿಸಿಕೊಂಡಿವೆ. ಮನುಷ್ಯ ಮತ್ತು ವನ್ಯಜೀವಿಗಳ ನಡುವೆ ಸಹಬಾಳ್ವೆ ಸಾಧ್ಯ ಎಂಬುದು ಅನೇಕ ಬಾರಿ ಸಾಬೀತಾಗಿರುವ ವಿಚಾರ. ವೈವಿಧ್ಯಮಯವಾದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಾನವ ಮತ್ತು ಆನೆಗಳು ಹೊಂದಿಕೊಂಡು ಬದುಕುವುದು ಅನಿವಾರ್ಯ.*

     *ವಾಲ್ಪರೈ ಭಾಗದಲ್ಲಿ ವಾಸಿಸುತ್ತಿರುವ ಜನರಿಗೆ ಈಗ ಆನೆಗಳನ್ನು ಕಂಡರೆ ರೇಜಿಗೆ ಎನಿಸುವುದಿಲ್ಲ. ಆನೆಗಳನ್ನು ಅಲ್ಲಿ ಆರಾಧನಾ ಭಾವದಿಂದ ನೋಡಲಾಗುತ್ತದೆ. ಹಿಂಡಿನ ಅಥವಾ ಒಂಟಿ ಸಲಗಗಳ ಚಲನವಲನದ ಮೇಲೆ ತೀವ್ರ ನಿಗಾ ಇಡುವ ವ್ಯವಸ್ಥೆಯನ್ನು ಅಲ್ಲಿ ಕಲ್ಪಿಸಿಕೊಳ್ಳಲಾಗಿದೆ. ಆನೆ ಹಿಂಡು ಬೀಡುಬಿಟ್ಟಿರುವ ಹತ್ತಿರದ ಹಳ್ಳಿಗರಿಗೆ, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಅವುಗಳ ಇರವನ್ನು ಮೊದಲೇ ತಿಳಿಸಲಾಗುತ್ತದೆ. ಬೆಳಿಗ್ಗೆ ಎದ್ದು ಕೆಲಸಕ್ಕೆ ಹೋಗುವವರಿಗೆ ಈ ಅಂಶ ವರದಾನವಾಗಿದೆ. ಆದ್ದರಿಂದ, ಅಲ್ಲಿ ಸಂಘರ್ಷದ ಪ್ರಮಾಣ ಶೂನ್ಯದ ಸಮೀಪ ಬಂದಿದೆ.*

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...