#ರುದ್ರಪ್ಪಚನ್ನಬಸಪ್ಪ #ಉದಯ_TVಯ_ಮೊದಲ_ಬ್ಯೂರೋ_ಚೀಪ್ #ಸಾಗರ_ತಾಲೂಕಿನ_ವಿಚಾರ_ಕ್ರಾಂತಿಯ_ಪಿತಾಮಹಾ #ಶರಾವತಿ_ನದಿ_ಮುಳುಗಡೆ_ಸಂತ್ರಸ್ಥರು #ಸೊನ್ನೆಯಿಂದ_ದೊಡ್ಡ_ಸಾದನೆಗೈದ_ಸಾದಕರು. #UdayaTV #karnataka #journalism #DSS #socialist #press #sagar #shivamogga 70 ರ ದಶಕದಲ್ಲಿ ಸಮಾಜವಾದಿ ಯುವಜನ ಸಭಾದ ಸಕ್ರಿಯ ಕಾರ್ಯಕರ್ತರು ರುದ್ರಪ್ಪನವರು. 80ರ ದಶಕದಲ್ಲಿ ಸಾಗರ ತಾಲ್ಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ದಲಿತ ಸಂಘರ್ಷ ಸಮಿತಿ ಸಂಘಟಿಸಿದವರು. ತೀ.ನಾ.ಶ್ರೀನಿವಾಸ್, ಶಿವಾನಂದ ಕುಗ್ವೆ, ಅದರಂತೆ ವಿಶ್ವನಾಥ್, ರಿಕ್ಷಾ ಮೋಹನ್, ಪೆಡರಿಕ್ , ಮಂಡಗಳಲೆ ನಾರಾಯಣಪ್ಪ, ಎಸ್.ಎಸ್.ನಾಗರಾಜ್,ವಸಂತಕುಗ್ವೆ ಇವರನ್ನೆಲ್ಲ ಹೋರಾಟದ ಸಾಗರಕ್ಕೆ ದುಮುಕಲು ಈ ರುದ್ರಪ್ಪರ ಪ್ರೇರಣೆ ಕೂಡ ಆಗಿತ್ತೆಂಬುದು ಮರೆಯುವಂತಿಲ್ಲ. ದಲಿತ ಸಂಘರ್ಷ ಸಮಿತಿಯ ಬಿ .ಕೃಷ್ಣಪ್ಪರಿಂದ ಶಿವಮೊಗ್ಗದ ಪ್ರೋ. ರಾಚಪ್ಪನವರು ಸಾಗರದ ಸಾಗರ್ ಹೋಟೆಲ್ ವೃತ್ತದ GGMS ಶಾಲೆಯಲ್ಲಿ ಸಂಜೆ ಹೊತ್ತಿಗೆ ಏರ್ಪಡಿಸುತ್ತಿದ್ದ ತರಬೇತಿ ಶಿಬಿರ ನನ್ನನ್ನೂ ಹೋರಾಟದ ಹಾದಿಗೆ ಹೊರಳಲು ಕಾರಣವಾಗಿತ್ತು. ನಂತರ ದಿಡೀರನೆ 1984 ರ ನಂತರ ರುದ್ರಪ್ಪ ಸಾಗರದಿಂದ ನಾಪತ್ತೆ ನಂತರ 90 ರ ದಶಕದಲ್ಲಿ ಕನ್ನಡದ ಏಕೈಕ TV ಸಂಸ್ಥೆ ಬ್ಯೂರೋ ಚೀಪ್ ಆಗಿ ರುದ್ರಪ್ಪನವರು ಉದಯ TV ಪರದೆ ಮೇಲೆ ನೋಡಿದ...