Skip to main content

Blog number 3387. ಮಂಗಳೂರಿನ ಯೆನೆಪೋಯ ಆಸ್ಪತ್ರೆ

#ಯೆನೆಪೋಯ_ವಿಶ್ವವಿದ್ಯಾಲಯ

#ಮಂಗಳೂರಿನ_ಯೆನೆಪೋಯ_ಆಸ್ಪತ್ರೆ

#ನಮ್ಮ_ರಾಜ್ಯ_ಮಾತ್ರವಲ್ಲ_ಕೇರಳ_ರಾಜ್ಯದಲ್ಲೂ_ಪ್ರಸಿದ್ಧಿ_ಪಡೆದಿದೆ.

ಇದನ್ನು 2008 ರಲ್ಲಿ ಯೆನೆಪೋಯ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲಾಯಿತು.


 1992 ರಲ್ಲಿ ಯೆನೆಪೋಯ ದಂತ ಕಾಲೇಜು ಪ್ರಾರಂಭವಾದಾಗಿನಿಂದ ಅನೇಕ ಕಾಲೇಜುಗಳು ಸರಣಿಯಲ್ಲಿ ಪ್ರಾರಂಭವಾದವು. 

 ವಿಶ್ವವಿದ್ಯಾನಿಲಯವು ವೈದ್ಯಕೀಯ, ದಂತ, ಸಂಬಂಧಿತ ಆರೋಗ್ಯ ವಿಜ್ಞಾನಗಳು, ಭೌತಚಿಕಿತ್ಸೆ, ಫಾರ್ಮಸಿ, ನರ್ಸಿಂಗ್ , ಆಯುರ್ವೇದ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ, ಎಂಜಿನಿಯರಿಂಗ್ ಮತ್ತು ಕಲೆ, ವಿಜ್ಞಾನ, ವಾಣಿಜ್ಯ ಮತ್ತು ನಿರ್ವಹಣೆಗಾಗಿ ವಿವಿಧ ಘಟಕ ಕಾಲೇಜುಗಳನ್ನು ಹೊಂದಿದೆ.

    ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ತಲುಪಲು ರೋಗಿಗಳಿಗೋಸ್ಕರ ರಾಜ್ಯ ಸಾರಿಗೆ  ಬಸ್ಸುಗಳನ್ನು ಕೂಡ ಬಿಡಲಾಗಿದೆ ಅಂದರೆ ಈ ಯೆನೆಪೋಯ ಆಸ್ಪತ್ರೆ ಎಷ್ಟು ಪ್ರಸಿದ್ಧಿ ಪಡೆದಿದೆ ಎಂದು ಅರ್ಥವಾದೀತು.

#yenepoyauniversity #yenepoyahospital #Mangalore #medicaleducation #nursingschool 

 ಯೆನೆಪೋಯ ಆಸ್ಪತ್ರೆಯ ಹಾಲಿ ಚೇರ್ಮನ್ ಶ್ರೀಯೆನೆಪೋಯ ಅಬ್ದುಲ್ ಕುಂಜ್ಞ ಇವರು ಜನಿಸಿದ್ದು 1947 ರಲ್ಲಿ.

  ಇವರ ವಿದ್ಯಾಭ್ಯಾಸ ಮೈಸೂರು ಯುನಿವರ್ಸಿಟಿಯಲ್ಲಿ ಬಿಎ, 1992 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.

  ಇವರ ತಂದೆ ಯೆನೆಪೋಯ ಮೊಯಿದ್ದೀನ್ ಕುಂಜಿ 1940ರಲ್ಲಿ ಪ್ರಾರಂಭಿಸಿದ ಈ ಸಂಸ್ಥೆಗಳು 85 ವರ್ಷದಲ್ಲಿ ದೊಡ್ಡ ಸಂಸ್ಥೆಯಾಗಿ ಬೆಳೆದಿದೆ.
  
   3000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ, ಯೆನೆಪೋಯಾ ಮೊಯಿದೀನ್ ಕುಂಜಿ ವಿದ್ಯಾವಂತರಲ್ಲ ಆದರೆ ಅವರ ದೂರ ದೃಷ್ಟಿ ಯಾವ ವಿದ್ಯಾವಂತರೂ ಸಾದಿಸಲು ಸಾಧ್ಯವಿಲ್ಲದಂತೆ ಸಾದಿಸಿ ತೋರಿಸಿದ್ದಾರೆ.

  ಸಣ್ಣ ಮರದ ವಹಿವಾಟಿನಿಂದ  1940ರಲ್ಲಿ ಯೆನೆಪೋಯ ಸಂಸ್ಥೆ ಕಾರ್ಯಾರಂಭ ಮಾಡಲು ಪ್ರಾರಂಭಿಸಿತು.

 ನಂತರ ಟ್ರಾನ್ಸ್ಪೋರ್ಟ್, ಆಸ್ಪತ್ರೆ, ಗಣಿಗಾರಿಕೆ, ವಿದ್ಯಾ ಕ್ಷೇತ್ರ,ರಿಯಲ್ ಎಸ್ಟೇಟ್ ಮತ್ತು  ವ್ಯಾಪಾರ ಇತ್ಯಾದಿಗಳಲ್ಲಿ ತೊಡಗಿಸಿ ಕೊಂಡಿತು.

  ಕೆನರಾ ವುಡ್ಸ್ ಅಂಡ್ ಪ್ಲೇವುಡ್, ಯೆನೆಪೋಯ ಸಾಮಿಲ್, ಯೆನೆಪೋಯ ಮಿನರಲ್ಸ್ ಅಂಡ್ ಗ್ರಾನೈಟ್, ಯೆನೆಪೋಯ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್, ಯೆನೆಪೋಯ ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್,
ಯೆನೆಪೋಯ ನರ್ಸಿಂಗ್ ಕಾಲೇಜು,
ಯೆನೆಪೋಯ ಮೊಯಿದ್ದೀನ್ ಕುನ್ನಿ ಮೆಮೋರಿಯಲ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಬಡ ಮಕ್ಕಳ ವಿದ್ಯಾಭ್ಯಾಸ, ಅನಾಥಾಶ್ರಮಗಳು, ಸಾಮೂಹಿಕ ವಿವಾಹಗಳನ್ನ ಮತ್ತು  200 ಹಾಸಿಗೆ ಆಸ್ಪತ್ರೆ ನಡೆಸುತ್ತಿದೆ.

 ಪ್ರಚಾರಗಳಿಂದ,ಸನ್ಮಾನ ಮತ್ತು ಪ್ರಶಸ್ತಿಗಳಿಂದ ಸದಾ ಅಂತರ ಕಾಪಾಡಿಕೊಂಡು ಈ ದೊಡ್ಡ ಸಾಧನೆ ಮಾಡಿದ ಈ ಸಂಸ್ಥೆ ಸಮಾಜದ ಬಡವರ ಸೇವೆಯಲ್ಲಿ ಕೂಡ ಮಹತ್ತರ ಸಾಧನೆ ಮಾಡಿರುವುದು ಅತ್ಯಂತ ಪ್ರಶಂಸನೀಯ ಕೆಲಸವಾಗಿದೆ.

  ಆದ್ದರಿಂದಲೇ ಮಂಗಳೂರಿನ ಯೆನೆಪೋಯ ಸಂಸ್ಥೆ ರಾಜ್ಯದ ಪ್ರತಿಷ್ಟಿತ ಸಂಸ್ಥೆ ಆಗಿದೆ.
 
   ಯೆನೆಪೋಯ ವಿಶ್ವವಿದ್ಯಾಲಯವು ಭಾರತದ ಕರ್ನಾಟಕದ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಪೂರ್ಣ ಪ್ರಮಾಣದ ಖಾಸಗಿ ಉನ್ನತ ಶಿಕ್ಷಣ ವಿಶ್ವವಿದ್ಯಾಲಯವಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

ಶ್ರೀಧರ ಸ್ವಾಮಿ ವರದಳ್ಳಿ ಪವಾಡ ಪುರುಷರು.

   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು.   ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ.     ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು.       ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ...