Skip to main content

Blog number 3403. ಶ್ರೀ 108 ಸಮರ್ಥ ಭದ್ರ ಜೀ ಮಹಾರಾಜರು

#ಈ_ತರುಣ_ಜೈನ_ಮುನಿಗಳ_ಕಣ್ಣಿನ_ಕಾಂತಿ_ನೋಡಿ

#ಬ್ರಹ್ಮಚರ್ಯ_ಸನ್ಯಾಸ

#ಅಷ್ಟು_ಸುಲಭವೆ?

#ಜೈನ_ಮುನಿಗಳು_ಈ_ಸಾಧನೆ_ಮಾಡುತ್ತಾರೆ.

https://youtube.com/shorts/wrtHlX6iaGI?si=KnzFsE5AiMvzDgoS

#jainmuni #Sanyas #brahnacharya #digambar 


ಹಂತ ಹಂತವಾಗಿ ಪಂಚೇಂದ್ರಿಯಗಳನ್ನ_ನಿಷ್ಕ್ರಿಯಗೊಳಿಸಿ
ಚಳಿ ಮಳೆ ಬಿಸಿಲುಗಳಿಗೆ ದಿಗಂಬರರಾಗಿ ಮಾನವ ಜನ್ಮದ ದೇಹ ಒಡ್ಡಿಕೊಂಡು ಆದ್ಯಾತ್ಮದ ಸಾಧನೆಗೈಯುವುದು ಎಷ್ಟು ಸನ್ಯಾಸಿಗಳಿಗೆ ಸಾಧ್ಯ? ಆದರೆ ಜೈನ ಧರ್ಮದಲ್ಲಿ ಇದನ್ನು ಸಾದಿಸುತ್ತಾರೆ.

 ಜೈನ ಧರ್ಮದಲ್ಲಿ ದಿಗಂಬರ ಸನ್ಯಾಸಿಗಳು ಸಂಪೂರ್ಣ ವಸ್ತ್ರ ತ್ಯಾಗ, ಜೀವಮಾನ ಪೂರ್ತಿ ಬರಿಗಾಲ ಸಂಚಾರ, ದಿನಕ್ಕೆ ಒಮ್ಮೆ ಮಾತ್ರ ನೀರು ಆಹಾರ, ತಮ್ಮ ದೇಹದ ಕೂದಲು ತಮ್ಮ ಕೈಯಿಂದಲೇ ಕಿತ್ತು ತೆಗೆಯುವ ಕೇಶ ಲೋಚ, ಇಚ್ಚಾ ಮರಣದ ಸಲ್ಲೇಖನ ವೃತ ಹೀಗೆ ಇವೆಲ್ಲ ಕಠೋರ ಸಾಧನೆ ತಿಳಿಯದೇ ಇದ್ದರೆ ಜೈನ ಧರ್ಮ ತಿಳಿಯಲು ಸಾಧ್ಯವಿಲ್ಲ.

 ಈ ಸಂತರನ್ನ ನೋಡಿ ಎಷ್ಟು ಚಿಕ್ಕ ವಯಸ್ಸು ಆಗಲೇ ದಿಗಂಬರರಾಗಿ ದೀಕ್ಷೆ ಪಡೆದಿದ್ದಾರೆಂದರೆ ಇವರ ಸಾಧನೆ ಸಾಮಾನ್ಯವಲ್ಲ ದೀಕ್ಷೆ ಪಡೆಯಲು ಅನೇಕ ಹಂತಗಳ ಮನೋನಿಗ್ರಹದ ಪರೀಕ್ಷೆಗಳನ್ನ ದಾಟಿ ಬರಬೇಕು ಅದೆಲ್ಲ ದಾಟಿದ ಮೇಲೆಯೇ ಇವರು ಅರ್ಹರೆಂದರೆ ಮಾತ್ರ ಇವರ ಗುರು ಇವರಿಗೆ ದೀಕ್ಷೆ ನೀಡುತ್ತಾರೆ.

  ಇವತ್ತು ನಮ್ಮ ಶ್ರೀಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ ಆಚಾಯ೯ ಶ್ರೀ 108 ಶ್ರೀ ಕುಂತು ಸಾಗರ ಮಹಾರಾಜರ ಜೊತೆ ಆಗಮಿಸಿ ತಂಗಿ ಆಹಾರ ಸೇವಿಸಿದ ಈ ತರುಣ ಜೈನ ಮುನಿಗಳು ಶ್ರೀ108 ಸಮರ್ಥ ಭದ್ರಜೀ ಮಹಾರಾಜರು ನನಗೆ ಹೇಳಿದ್ದು ಕೇಳಿ "ನಾವು ಸಂತರು ನಾವಾಗಿ ನಿಮ್ಮಲ್ಲಿಗೆ ಬರಲಿಲ್ಲ ನಿಮ್ಮ ಪುಣ್ಯ ನಮ್ಮನ್ನು ನಿಮ್ಮಲ್ಲಿಗೆ ಸೆಳೆದುಕೊಂಡು ಬಂದಿದೆ" ಎಂತಹ ಮಾತು.

  ಇಂತಹ ಸತ್ಸಂಗಗಳು ನಮ್ಮಂತಹ ಹುಲುಮಾನವರ , ಹಣ - ಯಶಸ್ಸು - ಯೌವನದ ದುರಹಂಕಾರದ ಕಣ್ಣಿನ ಪೊರೆ ಕಳಚುತ್ತದೆ.

   ಸತ್ಸಂಗಗಳು ಲಭಿಸಲು ಪೂರ್ವ ಜನ್ಮದ ಪುಣ್ಯವೂ ಬೇಕಂತೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...