Skip to main content

Blog number 3408. ಕೋವಿಶೀಲ್ಡ್ ಮೊದಲ ಡೋಸ್ ಪಡೆದ ದಿನ

#ಕೋವಿಶೀಲ್ಡ_ವ್ಯಾಕ್ಸಿನ್_ಮೊದಲ_ಡೋಸ್_ಪಡೆದ_ನೆನಪುಗಳು

#ನಾಲ್ಕು_ವರ್ಷದ_ಹಿಂದೆ_ಈ_ಲಸಿಕೆಗಾಗಿ_ಕಾಯುತ್ತಿದ್ದ_ನೆನಪು_ನಿಮಗೆ_ಇದೆಯಾ?

#ಭಯಪಟ್ಟವರು_ಎಷ್ಟೋ_ಜನ_ಕಾರಣ_ಗೊತ್ತಾ?


   ಆಗ ಲಸಿಕೆ ಬಗ್ಗೆ ಸುಳ್ಳು ಸುದ್ದಿಯೂ ಪ್ರಾರಂಭ ಆಗಿತ್ತು, ಲಸಿಕೆ ತೆಗೆದುಕೊಂಡರೆ ಜೀವಮಾನದಲ್ಲಿ ಒಮ್ಮೆಯೂ ಮದ್ಯಪಾನ ಮಾಡುವಂತಿಲ್ಲ ಎಂಬುದು ಅನೇಕ ಪಾನಪ್ರಿಯರಿಗೆ ಭಯ ಉಂಟು ಮಾಡಿತ್ತು, ಲಸಿಕೆ ಬೇಕಾದರೆ ಬಿಡುತ್ತೇವೆ ಆದರೆ ಮಧ್ಯಪಾನ ಬಿಡುವುದಿಲ್ಲ ಎಂಬ ಅವರ ತೀಮಾ೯ನ ಮತ್ತು ನಿರಾಶೆಯಿಂದ ಲಸಿಕೆಯಿ೦ದ ದೂರ ಉಳಿಯಲು ಒಂದು ಕಾರಣ ಆಗಿತ್ತು ನಂತರ ಕ್ರಮೇಣ ಈ ವಾತಾವರಣ ಸರಿ ಆಯಿತು.

  ಇದು ತಮಾಷೆಗಾಗಿ ಕುಡಿಯುವವರ ಕಾಲೆಳೆಯಲು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಜೋಕು ನಿಜವೆಂದೇ ಅನೇಕರು ಬಾವಿಸಿದ್ದರು.
  #ಆದರೆ_ಮದ್ಯಪಾನಕ್ಕೂ_ಲಸಿಕೆಗೂ_ಯಾವುದೇ_ಸಂಬಂದವಿಲ್ಲ_ಎಲ್ಲರೂ_ಕೊರಾನ_ಲಸಿಕೆ_ತೆಗೆದುಕೊಳ್ಳಬಹುದು
#ಎನ್ನುವ_ಪ್ರಚಾರ_ಸಕಾ೯ರ_ಮಾಡಬೇಕಿತ್ತು_ಆದರೆ_ಮಾಡಲಿಲ್ಲ.

#coronavirus2020 #covid #Covishield #vaccine #VaccineSideEffects 

     2020-21 ರ  ಸಮಯದಲ್ಲಿ ಇಡೀ ವಿಶ್ವವವೇ ಚಿಕಿತ್ಸೆ ಇಲ್ಲದ ಹೊಸ ಸೊಂಕು ಕೋವಿಡ್ -19 ನಿಂದ ತತ್ತರಿಸಲು ಪ್ರಾರಂಬಿಸಿತ್ತು.

   ಆಗ ಕೇಳಿ ಬಂದಿದ್ದು ಇದಕ್ಕೆ ರೋಗ ನಿರೋದಕ ಲಸಿಕೆ ಚುಚ್ಚುಮದ್ದು ಒಂದೇ ಪರಿಹಾರ ಆದರೆ ಅದನ್ನು ಕಂಡು ಹಿಡಿದು ಜನರ ಮೇಲೆ ಪ್ರಯೋಗ ಮಾಡಿ ಪಲಿತಾಂಶ ನೋಡಿದ ಮೇಲೆ ಸಾವ೯ಜನಿಕರಿಗೆ ನೀಡಬಹುದು ಇದಕ್ಕೆ ಒಂದರಿಂದ ಎರೆಡು ವರ್ಷ ಆದರೂ ಬೇಕು ಎನ್ನುವ ತಜ್ಞರ ಮಾತು.

  ಅಲ್ಲಿಯವರೆಗೆ ಮಾಸ್ಕ ದರಿಸುವ, ಸೋಪಿನಿಂದ ಕೈ ತೊಳೆದುಕೊಳ್ಳುವ ಹಾಗೂ ಜನ ಸಂದಣಿಯಿಂದ ದೂರವಿರಬೇಕೆಂಬ ಮುಂಜಾಗೃತೆ ಮೀರಿಯೂ ಅನೇಕರನ್ನ ಕಳೆದುಕೊಂಡ ಘಟನೆಯೂ ನಡೆಯಿತು.

     2021ರ ಮಾರ್ಚ್ ನಲ್ಲಿ ಮೊದಲ ಹಂತದಲ್ಲಿ  60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನಂತರದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಕಾ೯ರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವ ಕಾಯ೯ಕ್ರಮ ಯಶಸ್ವಿಯಾಗಿ ನಡೆಯಿತು.

  ಇದರ ನಡುವೆ ಲಸಿಕೆ ಬಗ್ಗೆ ಸುಳ್ಳು ಸುದ್ದಿಯೂ ಪ್ರಾರಂಭ ಆಗಿತ್ತು, ಲಸಿಕೆ ತೆಗೆದುಕೊಂಡರೆ ಮದ್ಯಪಾನ ಮಾಡುವಂತಿಲ್ಲ ಎಂಬುದು ಅನೇಕ ಪಾನಪ್ರಿಯರು ನಿರಾಶೆಯಿಂದ ಲಸಿಕೆಯಿ೦ದ ದೂರ ಉಳಿಯಲು ಒಂದು ಕಾರಣ ಆಗಿದೆ.
  #ಆದರೆ_ಮದ್ಯಪಾನಕ್ಕೂ_ಲಸಿಕೆಗೂ_ಯಾವುದೇ_ಸಂಬಂದವಿಲ್ಲ_ಎಲ್ಲರೂ_ಕೊರಾನ_ಲಸಿಕೆ_ತೆಗೆದುಕೊಳ್ಳಬಹುದು
#ಎನ್ನುವ_ಪ್ರಚಾರ_ಸಕಾ೯ರ_ಮಾಡಬೇಕಿತ್ತು.
 
 ಇವತ್ತಿಗೆ ನಾಲ್ಕು ವರ್ಷದ ಹಿಂದೆ ನಾನು 7 - ಏಪ್ರಿಲ್-2021 ರಂದು ನಮ್ಮೂರು ಆನಂದಪುರಂನ ಶ್ರೀಮತಿ ಕನಕಮ್ಮಾಳ್ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಕೋವಿಶೀಲ್ಡ್ ಡೋಸ್ ತೆಗೆದುಕೊಂಡಿದ್ದೆ  ಮುಂದಿನ 28 ದಿನದ ನಂತರ ಅಥವ 35 ದಿನದ ಒಳಗೆ ಎರಡನೆ ಡೋಸು ಪಡೆಯಬೇಕು.

 ಅದರ ನಂತರದ 15 ದಿನದಲ್ಲಿ ದೇಹ ಕೊರಾನಾ ರೋಗ ನಿರೋದಕ ಶಕ್ತಿ ಉಂಟಾಗಿಸಿಕೊಳ್ಳುತ್ತದೆ ಅಲ್ಲಿಯವರೆಗೆ ಜಾಗೃತರಾಗಿರಬೇಕು ಅದರ ನಂತರವೂ ಕೊವಿಡ್ ಸೊಂಕು ತಾಗುವುದಿಲ್ಲ ಅಂತ ಹೇಳಲಾಗುವುದಿಲ್ಲ ಆದರೆ ಸೊಂಕಿನ ತೀಕ್ಷಣತೆ ಪ್ರಾಣ ಹಾನಿ ಇರುವುದಿಲ್ಲ ಎಂಬುದು ತಜ್ಞರ ಸಂಶೋದನೆ.

   ಆದರೆ ನಾಲ್ಕು ವರ್ಷಗಳಲ್ಲಿ ನಾವು ಇದನ್ನೆಲ್ಲ ಮರೆತು ಬಿಟ್ಟಿದ್ದೇವೆ #Public_memories_always_less

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...