Skip to main content

Blog number 3408. ಕೋವಿಶೀಲ್ಡ್ ಮೊದಲ ಡೋಸ್ ಪಡೆದ ದಿನ

#ಕೋವಿಶೀಲ್ಡ_ವ್ಯಾಕ್ಸಿನ್_ಮೊದಲ_ಡೋಸ್_ಪಡೆದ_ನೆನಪುಗಳು

#ನಾಲ್ಕು_ವರ್ಷದ_ಹಿಂದೆ_ಈ_ಲಸಿಕೆಗಾಗಿ_ಕಾಯುತ್ತಿದ್ದ_ನೆನಪು_ನಿಮಗೆ_ಇದೆಯಾ?

#ಭಯಪಟ್ಟವರು_ಎಷ್ಟೋ_ಜನ_ಕಾರಣ_ಗೊತ್ತಾ?


   ಆಗ ಲಸಿಕೆ ಬಗ್ಗೆ ಸುಳ್ಳು ಸುದ್ದಿಯೂ ಪ್ರಾರಂಭ ಆಗಿತ್ತು, ಲಸಿಕೆ ತೆಗೆದುಕೊಂಡರೆ ಜೀವಮಾನದಲ್ಲಿ ಒಮ್ಮೆಯೂ ಮದ್ಯಪಾನ ಮಾಡುವಂತಿಲ್ಲ ಎಂಬುದು ಅನೇಕ ಪಾನಪ್ರಿಯರಿಗೆ ಭಯ ಉಂಟು ಮಾಡಿತ್ತು, ಲಸಿಕೆ ಬೇಕಾದರೆ ಬಿಡುತ್ತೇವೆ ಆದರೆ ಮಧ್ಯಪಾನ ಬಿಡುವುದಿಲ್ಲ ಎಂಬ ಅವರ ತೀಮಾ೯ನ ಮತ್ತು ನಿರಾಶೆಯಿಂದ ಲಸಿಕೆಯಿ೦ದ ದೂರ ಉಳಿಯಲು ಒಂದು ಕಾರಣ ಆಗಿತ್ತು ನಂತರ ಕ್ರಮೇಣ ಈ ವಾತಾವರಣ ಸರಿ ಆಯಿತು.

  ಇದು ತಮಾಷೆಗಾಗಿ ಕುಡಿಯುವವರ ಕಾಲೆಳೆಯಲು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಜೋಕು ನಿಜವೆಂದೇ ಅನೇಕರು ಬಾವಿಸಿದ್ದರು.
  #ಆದರೆ_ಮದ್ಯಪಾನಕ್ಕೂ_ಲಸಿಕೆಗೂ_ಯಾವುದೇ_ಸಂಬಂದವಿಲ್ಲ_ಎಲ್ಲರೂ_ಕೊರಾನ_ಲಸಿಕೆ_ತೆಗೆದುಕೊಳ್ಳಬಹುದು
#ಎನ್ನುವ_ಪ್ರಚಾರ_ಸಕಾ೯ರ_ಮಾಡಬೇಕಿತ್ತು_ಆದರೆ_ಮಾಡಲಿಲ್ಲ.

#coronavirus2020 #covid #Covishield #vaccine #VaccineSideEffects 

     2020-21 ರ  ಸಮಯದಲ್ಲಿ ಇಡೀ ವಿಶ್ವವವೇ ಚಿಕಿತ್ಸೆ ಇಲ್ಲದ ಹೊಸ ಸೊಂಕು ಕೋವಿಡ್ -19 ನಿಂದ ತತ್ತರಿಸಲು ಪ್ರಾರಂಬಿಸಿತ್ತು.

   ಆಗ ಕೇಳಿ ಬಂದಿದ್ದು ಇದಕ್ಕೆ ರೋಗ ನಿರೋದಕ ಲಸಿಕೆ ಚುಚ್ಚುಮದ್ದು ಒಂದೇ ಪರಿಹಾರ ಆದರೆ ಅದನ್ನು ಕಂಡು ಹಿಡಿದು ಜನರ ಮೇಲೆ ಪ್ರಯೋಗ ಮಾಡಿ ಪಲಿತಾಂಶ ನೋಡಿದ ಮೇಲೆ ಸಾವ೯ಜನಿಕರಿಗೆ ನೀಡಬಹುದು ಇದಕ್ಕೆ ಒಂದರಿಂದ ಎರೆಡು ವರ್ಷ ಆದರೂ ಬೇಕು ಎನ್ನುವ ತಜ್ಞರ ಮಾತು.

  ಅಲ್ಲಿಯವರೆಗೆ ಮಾಸ್ಕ ದರಿಸುವ, ಸೋಪಿನಿಂದ ಕೈ ತೊಳೆದುಕೊಳ್ಳುವ ಹಾಗೂ ಜನ ಸಂದಣಿಯಿಂದ ದೂರವಿರಬೇಕೆಂಬ ಮುಂಜಾಗೃತೆ ಮೀರಿಯೂ ಅನೇಕರನ್ನ ಕಳೆದುಕೊಂಡ ಘಟನೆಯೂ ನಡೆಯಿತು.

     2021ರ ಮಾರ್ಚ್ ನಲ್ಲಿ ಮೊದಲ ಹಂತದಲ್ಲಿ  60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನಂತರದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಕಾ೯ರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವ ಕಾಯ೯ಕ್ರಮ ಯಶಸ್ವಿಯಾಗಿ ನಡೆಯಿತು.

  ಇದರ ನಡುವೆ ಲಸಿಕೆ ಬಗ್ಗೆ ಸುಳ್ಳು ಸುದ್ದಿಯೂ ಪ್ರಾರಂಭ ಆಗಿತ್ತು, ಲಸಿಕೆ ತೆಗೆದುಕೊಂಡರೆ ಮದ್ಯಪಾನ ಮಾಡುವಂತಿಲ್ಲ ಎಂಬುದು ಅನೇಕ ಪಾನಪ್ರಿಯರು ನಿರಾಶೆಯಿಂದ ಲಸಿಕೆಯಿ೦ದ ದೂರ ಉಳಿಯಲು ಒಂದು ಕಾರಣ ಆಗಿದೆ.
  #ಆದರೆ_ಮದ್ಯಪಾನಕ್ಕೂ_ಲಸಿಕೆಗೂ_ಯಾವುದೇ_ಸಂಬಂದವಿಲ್ಲ_ಎಲ್ಲರೂ_ಕೊರಾನ_ಲಸಿಕೆ_ತೆಗೆದುಕೊಳ್ಳಬಹುದು
#ಎನ್ನುವ_ಪ್ರಚಾರ_ಸಕಾ೯ರ_ಮಾಡಬೇಕಿತ್ತು.
 
 ಇವತ್ತಿಗೆ ನಾಲ್ಕು ವರ್ಷದ ಹಿಂದೆ ನಾನು 7 - ಏಪ್ರಿಲ್-2021 ರಂದು ನಮ್ಮೂರು ಆನಂದಪುರಂನ ಶ್ರೀಮತಿ ಕನಕಮ್ಮಾಳ್ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಕೋವಿಶೀಲ್ಡ್ ಡೋಸ್ ತೆಗೆದುಕೊಂಡಿದ್ದೆ  ಮುಂದಿನ 28 ದಿನದ ನಂತರ ಅಥವ 35 ದಿನದ ಒಳಗೆ ಎರಡನೆ ಡೋಸು ಪಡೆಯಬೇಕು.

 ಅದರ ನಂತರದ 15 ದಿನದಲ್ಲಿ ದೇಹ ಕೊರಾನಾ ರೋಗ ನಿರೋದಕ ಶಕ್ತಿ ಉಂಟಾಗಿಸಿಕೊಳ್ಳುತ್ತದೆ ಅಲ್ಲಿಯವರೆಗೆ ಜಾಗೃತರಾಗಿರಬೇಕು ಅದರ ನಂತರವೂ ಕೊವಿಡ್ ಸೊಂಕು ತಾಗುವುದಿಲ್ಲ ಅಂತ ಹೇಳಲಾಗುವುದಿಲ್ಲ ಆದರೆ ಸೊಂಕಿನ ತೀಕ್ಷಣತೆ ಪ್ರಾಣ ಹಾನಿ ಇರುವುದಿಲ್ಲ ಎಂಬುದು ತಜ್ಞರ ಸಂಶೋದನೆ.

   ಆದರೆ ನಾಲ್ಕು ವರ್ಷಗಳಲ್ಲಿ ನಾವು ಇದನ್ನೆಲ್ಲ ಮರೆತು ಬಿಟ್ಟಿದ್ದೇವೆ #Public_memories_always_less

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...