Skip to main content

Blog number 3314. ಅಂಜಲಿ ಎಂಬ ಮಂಗ ಸಾಕಿದ್ದೆ...

#ಅಂಜಲಿ

#ಒಂಬತ್ತು_ವರ್ಷದ_ಹಿಂದೆ_ಈ_ದಿನ_ನಮ್ಮ_ಮನೆಗೆ_ಬಂದಿದ್ದಳು

#ಮೇ_17_2016

#ಅದೇ_ವರ್ಷದ_ಆಗಸ್ಟ್_15ಕ್ಕೆ_ಬಿಡುಗಡೆ_ಮಾಡಿದೆ

#monkey #anjali #memories #petlovers 

  ಅಂಜಲಿ ಅದು ನಾವಿಟ್ಟ ಹೆಸರು ಅವಳ ಹೆಸರು ಬೇರೆ ಇರಬೇಕು ಅವಳು ನಮ್ಮೂರು ಬಂದು ಸೇರಿ ಊರಿನ ಬಾಲಕರ ಗಮನ ಸೆಳೆದದ್ದು ಹೇಗಂದರೆ...

 ಅವಳಿಗೆ ಮನುಷ್ಯರ ಸಹವಾಸ ಚೆನ್ನಾಗಿತ್ತು ಆದ್ದರಿಂದ ಮಕ್ಕಳೆಲ್ಲ ಕಡಲೆಕಾಯಿ ಬಾಳೆಹಣ್ಣು ತೋರಿಸಿದರೆ ಅವರ ಹತ್ತಿರ ಯಾವುದೇ ಭಯ ಇಲ್ಲದೆ ಬಂದು ಕೈಯಿಂದ ಸ್ವೀಕರಿಸಿ ಹೋಗುತ್ತಿದ್ದಳಂತೆ, ಇದರಿಂದ ಇವಳು ನಮ್ಮೂರಿನ ಲಾರಿ ಮಾಲೀಕರಾದ ಅಮೀರ್ ಸಾಹೇಬರ ಮಕ್ಕಳ ಜೊತೆಯಾಗಿ ಅವರ ಮನೆ ಸೇರಿದಳು.

   ಆದರೆ ಅವಳು ಕೆಲವೊಮ್ಮೆ ಜನರಿಗೆ ಕಚ್ಚಲು ಬರುವುದು ಸಿಟ್ಟಾಗುವುದು ಇವೆಲ್ಲ ಅವಳ ನೆಗೆಟಿವ್ ಅಂಶಗಳಾಗಿತ್ತು, ಅಮೀರ್ ಸಾಹೇಬರು ಅವರ ಮಗನ ಹತ್ತಿರ ಇದನ್ನು ನನಗೆ ಸಾಕಲು ಕಳಿಸಿ ಕೊಟ್ಟಿದ್ದರು, ನನಗೂ ಮಂಗ ಒಂದನ್ನು ಸಾಕುವ ಆಸೆ ಪೂರೈಸಿರಲಿಲ್ಲ ಇದು ಹೆಣ್ಣು ಮಂಗ ಆಗಿತ್ತು ತಕ್ಷಣ ಇದಕ್ಕೊಂದು ಬೋನು- ಚೈನು, ಬೋನಿನಿಂದ ಹೊರ ಬಿಟ್ಟಾಗ ನಮ್ಮ ಹಲಸಿನ ಮರ ಅಮಟೆ ಮರ ಮೇಲೆ ಹತ್ತಿ ಇಳಿಯುವಷ್ಟು ಉದ್ದದ ಸೊಂಟಕ್ಕೆ ಹಗ್ಗ ಹೀಗೆ ಎಲ್ಲ ವ್ಯವಸ್ಥೆ ಆಯಿತು. 

    ನಿತ್ಯ ಬೆಳಿಗ್ಗೆ ತಿನ್ನಲು ಹಸಿ ಶೇಂಗಾ, ಬಾಳೆಹಣ್ಣು - ಕ್ಯಾರೆಟ್ -ಸೌತೆಕಾಯಿ -ಪೇರಲೆ ಹಣ್ಣು ಇತ್ಯಾದಿ ಸಂಗ್ರಹವಾಯಿತು ನಂತರ ಅಂಜಲಿ ಅನ್ನುವ ನಾಮಕರಣವಾಯಿತು.

    ನಂತರ ಕೆಲವೊಮ್ಮೆಸಿಟ್ಟಾಗುವುದು ಕಚ್ಚಲು ಬರುವುದು ಇತ್ಯಾದಿ ಇದ್ದೇ ಇತ್ತು, ಇನ್ನೊಂದು ವಿಶೇಷ ಅಂದರೆ ಲಾಗ ಹಾಕು ಎಂದರೆ ಲಾಗ ಹೊಡೆದು ನಮ್ಮನ್ನೆಲ್ಲಾ ರಂಜಿಸುತ್ತಿದ್ದಳು ಒಮ್ಮೆ ಬೋನಿನಿಂದ ತಪ್ಪಿಸಿಕೊಂಡು ಇಡೀ ದಿನ ಮರಗಳ ಮೇಲೆ ಸುತ್ತುತ್ತಿದ್ದಳು, ತನ್ನ ಆಹಾರಕ್ಕೋಸ್ಕರ ಬಂದು ನನ್ನ ಹತ್ತಿರ ಕುಳಿತುಕೊಳ್ಳುತ್ತಿದ್ದಳು ಆದರೆ ಚೈನಿನಲ್ಲಿ ಬಂಧಿಸಲು ಹೋದರೆ ವಿರೋಧಿಸುತ್ತಿದ್ದಳು.

    ಇವಳಿಗೆ ಯಾವಾಗಲೂ ಗದರಿಸುತ್ತಿದ್ದ ಕೀಟಲೆ ಮಾಡುತ್ತಿದ್ದ ನಮ್ಮ ಸಿಬ್ಬಂದಿ ಮಂಜುಳಮ್ಮನ ಕಂಡರೆ ಅಂಜಲಿಗೆ ಆಗುತ್ತಿರಲಿಲ್ಲ ಬೋನಿನ ಒಳಗಿನಿಂದಲೇ ಅವಳಿಗೆ ಗುಟುರು ಹಾಕುತ್ತಿದ್ದವಳು ಅವತ್ತು ಬೋನಿನಿಂದ ತಪ್ಪಿಸಿಕೊಂಡವಳು ದೂರದ ಮರದ ಮೇಲೆ ಇದ್ದವಳು ಮಂಜುಳಮ್ಮನ ನೋಡಿ ಮರದಿಂದ ಹಾರಿ ಬಂದು ಅವಳ ಕಾಲಿಗೇ ಕಚ್ಚಿತ್ತು.

    ಇದರಿಂದ ನನ್ನ ಮೇಲೆ ಅಂಜಲಿ ಸಾಕಿದ ಕಾರಣದಿಂದ ಎಲ್ಲರೂ ಸಿಟ್ಟಾಗಿದ್ದರು, ಒಮ್ಮೆ ನಮ್ಮಲ್ಲಿ ಅತಿಥಿಯಾಗಿ ಬಂದ ಆಗಿನ ಬಳ್ಳಾರಿ ಸಂಸದರಾಗಿದ್ದ ಶ್ರೀರಾಮುಲು ಅವರು ಆಂಜನೇಯನನ್ನ ಬಂಧಿಸಿಡುವುದು ಸರಿಯಲ್ಲ ಎಂದಿದ್ದರು.

    ಅದೇ ವರ್ಷ ನಮ್ಮ ಸಾಗರದ ಪೊಲೀಸ್ ಇಲಾಖೆಗೆ ಎ ಎಸ್ ಪಿ ಆಗಿ ಬಂದಿದ್ದ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಒಮ್ಮೆ ಬಂದವರು ಇದು ಕಾನೂನು ಬಾಹಿರ ಆಗುತ್ತದೆ, ಯಾರಾದರೂ ದೂರು ನೀಡಿದರೆ ದೂರು ದಾಖಲಾಗುತ್ತದೆ ಆದ್ದರಿಂದ ಬಿಟ್ಟುಬಿಡಿ ಎಂದು ಸಲಹೆ ನೀಡಿದ್ದರು.

   ಈ ಎಲ್ಲಾ ಕಾರಣಗಳಿಂದ ಅಂಜಲಿಯನ್ನು ಬಿಡುಗಡೆ ಮಾಡುವ ತೀರ್ಮಾನ ಮಾಡಿದೆ ಅದು ಆಗಸ್ಟ್ 15 2016 ಬೆಳಿಗ್ಗೆ ಊರಿಂದ ದೂರದಲ್ಲಿ ಬಿಟ್ಟು ಬಂದೆವು, ಅಂಜಲಿ ಬೋನಿನ ಬಾಗಿಲು ತೆಗೆದ ನಂತರ ನಮ್ಮ ಕಡೆ ತಿರುಗಿಯೂ ನೋಡದೆ ಓಡಿ ಹೋದಳು ಆ ಸಮಯದಲ್ಲಿ ನನಗೆ ನಿರಾಸೆ ಬೇಸರ ಆದರೂ ಅವಳ ಸ್ವಾತಂತ್ರ ಅವಳ ಹಕ್ಕು ಎಂಬ ನೆಮ್ಮದಿ ನಮ್ಮದು ಆಯ್ತು.

 ಅವಳು ಸಮೀಪದ ಜನವಸತಿ ಕೇಂದ್ರಕ್ಕೆ ಹೋಗಿ ಅಲ್ಲಿಯೂ ಜನರ ಒಡನಾಟ ಪಡೆಯುತ್ತಾಳೆ ಯಾಕೆಂದರೆ ಅದು ಯಾರೋ ಸಾಕಿದ ತರಬೇತಿ ನೀಡಿದ ಮಂಗ ಇದಾದ್ದರಿಂದ ಎಂದು ನಾವು ಮಾತಾಡಿಕೊಂಡೆವು.

        ಈಗಲೂ ಅಂಜಲಿ ನೆನಪಾಗುತ್ತಾಳೆ ಮನುಷ್ಯ ಮತ್ತು ಪ್ರಾಣಿಗಳ ಸಂಬಂದವೇ ಹೀಗೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...